ಲಂಚ ಪ್ರಕರಣ: ಕಂದಾಯ ಸಚಿವ ಅಶೋಕ್ ಪಿಎ ವಿರುದ್ಧ ದೂರು ದಾಖಲು
Team Udayavani, Jan 26, 2021, 12:11 PM IST
ಚಿಕ್ಕಮಗಳೂರು: ಲಂಚ ಕೇಳಿದ ಆರೋಪದಡಿ ಕಂದಾಯ ಸಚಿವ ಆರ್.ಅಶೋಕ್ ಪಿಎ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಅವರು ಅಶೋಕ್ ಪಿಎ ಗಂಗಾಧರ್ ವಿರುದ್ಧ ದೂರು ಸಲ್ಲಿಸಿದ್ದಾರೆ.
ಜ. 24ರಂದು ಸಚಿವ ಆರ್ ಅಶೋಕ್ ಅವರು ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಅಶೋಕ್ ಪಿಎ ಗಂಗಾಧರ್ ಹಣ ಕೇಳಿದ್ದಾರೆ ಎಂದು ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಆರೋಪ ಮಾಡಿದ್ದಾರೆ.
ಇದನ್ನೂ ಓದಿ:ಪ್ರೊ.ದೊಡ್ಡರಂಗೇಗೌಡ ಅವರು ಸಾಹಿತಿಯಲ್ಲ, ಲೇಖಕರು ಅಷ್ಟೇ : ಕುಂ.ವೀರಭದ್ರಪ್ಪ ಟೀಕೆ
ಗಂಗಾಧರ್ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಚೆಲುವರಾಜ್ ಆಗ್ರಹಿಸಿದ್ದು, ತನಗೂ ಸೂಕ್ತ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.