Congress ಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ
Team Udayavani, Jun 2, 2023, 6:25 AM IST
ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರ ನೀಡಿದ ಐದು ಗ್ಯಾರಂಟಿಗಳನ್ನು ಈಡೇರಿಸುತ್ತದೆ. ಆದರೆ ಎಲ್ಲವನ್ನೂ ಏಕಾಏಕಿ ಜಾರಿ ಮಾಡಲು ಆಗುವುದಿಲ್ಲ. ಇದಕ್ಕಾಗಿ ಸಮಯ ಬೇಕು ಎಂದು ಮಾಜಿ ಸಚಿವೆ ಡಾ|ಮೋಟಮ್ಮ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ ಟಿಕೆಟ್ ತೆಗೆದುಕೊಳ್ಳಬೇಡಿ, ಕರೆಂಟ್ ಬಿಲ್ ಕಟ್ಟಬೇಡಿ ಅಂದರೆ ಹೇಗಿರುತ್ತದೆ. ಮಗು ಹುಟ್ಟಿದಾಕ್ಷಣ ನಡೆದಾಡಲು ಸಾಧ್ಯವೇ? ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿದ್ದಾರೆ. ಹಾಗೇ ಐದು ಗ್ಯಾರಂಟಿಗಳನ್ನು ಈಡೇರಿಸಲಿದ್ದಾರೆ. ಚುನಾವಣೆ ಪ್ರಚಾರ ಸಭೆಯಲ್ಲಿ ಘೋಷಿಸಿದ ಗ್ಯಾರಂಟಿಗಳನ್ನು ನೀಡಲು ಸಮಯ ಕೊಡಬೇಕು. ಅವುಗಳನ್ನು ಏಕಾಏಕಿ ಜಾರಿಗೆ ತರಲಾಗದು.
ಸಚಿವ ಸಂಪುಟದ ಒಪ್ಪಿಗೆ ಪಡೆಯಬೇಕಾಗುತ್ತದೆ. ಶುಕ್ರವಾರ ನಡೆಯುವ ಸಂಪುಟ ಸಭೆಯಲ್ಲಿ ಗ್ಯಾರಂಟಿಗಳು ಜಾರಿಗೊಳ್ಳಲಿವೆ. ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭದಲ್ಲಿ ನೀಡಿದ ಐದು ಗ್ಯಾರಂಟಿಗಳ ಬಗ್ಗೆ ಬಿಜೆಪಿಯವರು ಅಪಪ್ರಚಾರ ನಡೆಸುತ್ತಿದ್ದಾರೆ.
ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ಅಧಿ ಕಾರಕ್ಕೆ ಬರುವಾಗ ನೀಡಿದ್ದ ಭರವಸೆಗಳು ಈಡೇರಿವೆಯೇ? ಜನರ ಖಾತೆಗೆ ಹಣ ಹಾಕಿದ್ದಾರಾ? ಎಷ್ಟು ಕೋಟಿ ಉದ್ಯೋಗ ಸೃಷ್ಟಿಯಾಗಿವೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ