ಜಾನಪದ ಕಲೆ ಉಳಿವಿಗೆ ಶ್ರಮಿಸಿ: ದತ್ತಾ


Team Udayavani, Feb 6, 2018, 6:26 PM IST

06-5.jpg

ಕಡೂರು(ಬೀರೂರು): ದೇಶೀಯ ಕಲೆ, ಸಾಂಸ್ಕೃತಿಕ ವೈಭವ ಉಳಿಸಿ ಬೆಳೆಸುವುದು ನಾಗರಿಕರ ಕರ್ತವ್ಯ ಎಂದು ಶಾಸಕ ವೈ.ಎಸ್‌.ವಿ ದತ್ತ ಹೇಳಿದರು.

ಪಟ್ಟಣದ ಕೆ.ಎಲ್‌.ಕೆ. ಮೈದಾನದಲ್ಲಿ ಹಮ್ಮಿಕೊಂಡಿದ್ದ ಆಳ್ವಾಸ್‌ ನುಡಿಸಿರಿ ಮತ್ತು ವಿರಾಸತ್‌ ವೈಭವ ಘಟಕದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ
ಅವರು ಮಾತನಾಡಿದರು. ಜಗತ್ತಿನ ಯಾವ ದೇಶದಲ್ಲೂ ಇರದಷ್ಟು ಕಲಾ ಪ್ರಕಾರಗಳು ನಮ್ಮಲ್ಲಿವೆ. ಈ ಆಧುನಿಕ ಯುಗದಲ್ಲೂ ಇಂತಹ
ಸಾಂಸ್ಕೃತಿಕ, ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವಂತ ಕಾರ್ಯವನ್ನು ಆಳ್ವಾಸ್‌ ಸಂಸ್ಥೆ ಮಾಡುತ್ತಿದೆ ಎಂದರು. 25 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ
ಶಿಕ್ಷಣ ವ್ಯವಸ್ಥೆ ಕಲ್ಪಿಸಿರುವ ಡಾ| ಮೋಹನ್‌ ಆಳ್ವಾಸ್‌ ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸಬಹುದಿತ್ತು. ಆದರೆ, ಹಾಗೆ ಮಾಡದೆ ಶಿಕ್ಷಣವನ್ನು
ಮತ್ತಷ್ಟು ಗುಣಾತ್ಮಕವಾಗಿಸಲು ಶ್ರಮಿಸುತ್ತಿದ್ದಾರೆ ಎಂದರು. 

ಜೋ ಮೇರಿ ಲೋಬೋ ಸ್ವಾಮೀಜಿ , ವೈದ್ಯಕೀಯ ಶಿಕ್ಷಣ ಪಡೆದವರು ಜನರ ರೋಗ ನಿವಾರಿಸುವ ಕಾಯಕದಲ್ಲಿ ತೊಡಗಿದ್ದರೆ ಡಾ| ಮೋಹನ್‌ ಆಳ್ವಾ
ಅವರು ಜ್ಞಾನ ಪ್ರಸರಣದ ಮೂಲಕ ಜನರಿಗೆ ರೋಗವೇ ಬಾರದಂತೆ ಜಾಗೃತಿ ಮೂಡಿಸುವ ಉತ್ತಮ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡು ಅದರಲ್ಲೇ ತೃಪ್ತಿ ಕಂಡುಕೊಂಡಿದ್ದಾರೆ ಎಂದರು. ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಡಾ| ಮೋಹನ್‌ ಆಳ್ವಾ ಮಾತನಾಡಿ,  ವಿದ್ಯಾರ್ಥಿಯೆಂದರೆ ಕೇವಲ ಶಿಕ್ಷಣ ಪಡೆಯುವುದಷ್ಟೇ ಅಲ್ಲ. ತನ್ನಲ್ಲಿರುವ ಆಸಕ್ತಿಗೆ ಅನುಗುಣವಾಗಿ ಸುಸಂಸ್ಕೃತ ಜೀವನ ರೂಪಿಸಿಕೊಳ್ಳಲು ಕಲಾ ಆರಾಧಕನಾಗುವುದು ಅಗತ್ಯ. ನಮ್ಮ ಸಂಸ್ಥೆಯು ಮಕ್ಕಳ ಆಸಕ್ತಿ ಮತ್ತು ಬದುಕಿಗೆ ಪೂರಕವಾಗಬಲ್ಲ ಕಲಾ ಪ್ರಕಾರಗಳಿಗೆ ಪೋತ್ಸಾಹ ನೀಡಲಾಗುತ್ತಿದೆ. ಸೂಕ್ತ ತರಬೇತಿ ನೀಡಿ ದೇಶೀಯ ಕಲೆಗಳನ್ನು ಅವರಲ್ಲಿ ಬಿತ್ತಬೇಕು ಎಂದರು. 

ನೂರಾರು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನ ಜೊತೆಗೆ ವಿವಿಧ ಕಲಾ ಪ್ರಕಾರಗಳಲ್ಲಿ ಪ್ರಾವಿಣ್ಯತೆ ಹೊಂದಿ ದೇಶ ವಿದೇಶಗಳ ವೇದಿಕೆಗಳಲ್ಲಿ ಪ್ರದರ್ಶಿಸುವ ಮಟ್ಟಿಗೆ ಬೆಳೆದು ನಿಂತಿದ್ದಾರೆ. ದೇಶದ ಕಲೆ ಮತ್ತು ಸಂಸ್ಕೃತಿ ಉಳಿಸಲು ಆಳ್ವಾಸ್‌ ನುಡಿಸಿರಿ, ವಿರಾಸತ್‌ ಘಟಕಗಳು ಕೆಲಸ
ಮಾಡುತ್ತಿವೆ ಎಂದರು. ಕೇರಳದ ಮೋಹಿನಿಯಾಟ್ಟಂ, ಬಡಗು ತಿಟ್ಟಿನ ಶ್ರೀರಾಮ ಪಟ್ಟಾಭಿಷೇಕ, ಆಂಧ್ರದ ಬಂಜಾರ ನೃತ್ಯ, ಮಣಿಪುರದ
ಸ್ಟಿಕ್‌ ಡ್ಯಾನ್ಸ್‌, ಒಡಿಶಾದ ಗೋಟಿಪುವ. ಮಹಾರಾಷ್ಟ್ರದ ಲಾವಣಿ ನೃತ್ಯ, ದಕ್ಷಿಣ ಭಾರತದ ಭರತನಾಟ್ಯಂ, ಒಡಿಸ್ಸಾದ ಕಥಕ್‌, ಶ್ರೀಲಂಕಾದ ಕ್ಯಾಂಡಿಯನ್‌, ಮಣಿಪುರದ ಡೋಲ್‌ಚಲಂ, ಪುರುಲಿಯಾ ಸಿಂಹನೃತ್ಯ, ತೆಂಕುತಿಟ್ಟಿನ ಯಕ್ಷಗಾನ ಅಗ್ರಪೂಜೆ ಕಥಾನಕ, ಗುಜರಾತಿನ ದಾಂಡಿಯಾ, ಮಲ್ಲಕಂಬ ಕಸರತ್ತು, ರೋಪ್‌ ಕಸರತ್ತು, ನೃತ್ಯ ಪ್ರಕಾರಗಳು ಹಾಗೂ ಅಂತಿಮವಾಗಿ ವಂದೇ ಮಾತರಂ ನೃತ್ಯ ಸಾವಿರಾರು ಪ್ರೇಕ್ಷಕರ ಮನಸೂರೆಗೊಂಡವು.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.