ಬಸ್ಗೆ ಅಡ್ಡ ಬಂದ ಕಾಡಾನೆ: ವಿಡಿಯೋ ವೈರಲ್
Team Udayavani, Jun 25, 2023, 9:16 PM IST
ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ಗೆ ಕಾಡಾನೆಯೊಂದು ಅಡ್ಡ ಬಂದಿದ್ದು, ಬಸ್ ನಿಲ್ಲಿಸುತ್ತಿದ್ದಂತೆ ಕಾಡಾನೆ ರಸ್ತೆ ಬದಿಯಲ್ಲಿ ಓಡಿ ಹೋಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಿಕ್ಕಮಗಳೂರು-ಮೂಡಿಗೆರೆ ರಸ್ತೆಯ ಕೊಲ್ಲಿಬೈಲು ಗ್ರಾಮದಲ್ಲಿ ಘಟನೆ ನಡೆದಿದ್ದು, ಕಾಫಿ ಡೇ ಮಾಲೀಕ ದಿ.ಸಿದ್ದಾರ್ಥ ಹೆಗ್ಡೆ ವನದ ಸಮೀಪ ಇದ್ದ ಆನೆ ರಸ್ತೆ ಬದಿಯಲ್ಲಿ ನಡೆದು ಬರುತ್ತಿತ್ತು. ಇದೇ ವೇಳೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ಗೆ ಎದುರು ಬಂದಿದೆ. ಕಾಡಾನೆ ಪ್ರತ್ಯಕ್ಷವಾಗಿದ್ದರಿಂದ ಬಸ್ನಲ್ಲಿದ್ದ ಪ್ರಯಾಣಿಕರು ಗಾಬರಿಗೊಂಡು ಕಿರುಚಾಡಿದ್ದಾರೆ.
ಜನರು ಕಿರುಚಿಕೊಳ್ಳುತ್ತಿದ್ದಂತೆ ಆನೆ ರಸ್ತೆ ಬದಿಯಲ್ಲಿ ಬಸ್ ಪಕ್ಕದಲ್ಲೇ ಹಾಯ್ದು ಓಡಿ ಹೋಗಿದೆ. ಬಸ್ ಪಕ್ಕದಲ್ಲೇ ಆನೆ ತೆರಳಿದ್ದು, ಬಸ್ ಮೇಲೆ ದಾಳಿ ಮಾಡದೆ ಮುಂದೇ ಸಾಗಿದೆ. ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿದೆ. ಬಸ್ ಮತ್ತು ಆನೆ ಮುಖಾಮುಖೀಯಾಗಿದ್ದು, ನೆಟ್ಟಿಗರು “ಸರ್ಕಾರದ ಫ್ರೀ ಬಸ್ಗಾಗಿ ಕಾಯುತ್ತಿದ್ದ ಆನೆ’ ಎಂದು ಕಿಚಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?