ಲಯನ್ಸ್ ವತಿಯಿಂದ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ


Team Udayavani, Dec 14, 2021, 5:20 PM IST

ಲಯನ್ಸ್ ವತಿಯಿಂದ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ

ಕೊಟ್ಟಿಗೆಹಾರ: ಮೂಡಿಗೆರೆಯ ಲಯನ್ಸ್ ಕ್ಲಬ್ ಉತ್ತಮ ಸೇವಾ ಕಾರ್ಯ ಮಾಡುತ್ತಿದೆ. ಸೇವೆ ಮತ್ತು ಸಾಂಗತ್ಯ ಲಯನ್ಸ್ನ ಮುಖ್ಯ ಧ್ಯೇಯವಾಗಿದೆ ಎಂದು ಲಯನ್ಸ್ ಜಿಲ್ಲಾ ರಾಜ್ಯಪಾಲ ವಸಂತ ಕುಮಾರ್ ಶೆಟ್ಟಿ ಹೇಳಿದರು.

ಅವರು ಬಣಕಲ್ ವಿಮುಕ್ತಿ ಸೇವಾ ಕೇಂದ್ರದಲ್ಲಿ ಉಚಿತ ಕನ್ನಡಕ ಹಾಗೂ ಕ್ರೀಡಾ ಸಾಮಾಗ್ರಿ ವಿತರಣಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ‘ಸಮಾಜ ಸೇವೆ ಮಾಡಲು ಲಯನ್ಸ್ ಕ್ಲಬ್ ಉತ್ತಮ ವೇದಿಕೆಯಾಗಿದೆ. ಕೋವಿಡ್ ಇದ್ದರೂ ಲಯನ್ಸ್ ತನ್ನ ಅವದಿಯಲ್ಲಿ ಸೇವಾ ಕಾರ್ಯ ಮಾಡುತ್ತಾ ಬಂದಿದೆ. ಗ್ರಾಮೀಣ ಭಾಗದಲ್ಲಿ ಉತ್ತಮ ಕೃಷಿಗೆ ಸನ್ಮಾನ, ಕ್ರೀಡೆಗೆ ಆಧ್ಯತೆ, ವೈದ್ಯಕೀಯ ಸೇವೆಗೆ ಪುರಸ್ಕಾರದಂತಹ ಕಾರ್ಯವನ್ನು ಸಂಸ್ಥೆ ಸಂಕಷ್ಟ ಸಮಯದಲ್ಲೂ ಮಾಡಿಕೊಂಡು ಬಂದಿರುವುದು ಮೂಡಿಗೆರೆ ಲಯನ್ಸ್ ಅಧ್ಯಕ್ಷರ ಸೇವೆಗೆ ಹಿಡಿದ ಕೈಗನ್ನಡಿಯಾಗಿದೆ’ ಎಂದರು.

ಮೂಡಿಗೆರೆ ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಎಲ್.ರಂಗನಾಥ್‌ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ’ ತಾಲ್ಲೂಕಿನಿಂದ ಗ್ರಾಮೀಣ ಭಾಗದ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯದಲ್ಲಿ ನಾವು ತೊಡಗಿದ್ದು, ಸೇವಾ ಮನೋಭಾವದ ಎಲೆ ಮರೆಯ ಪ್ರತಿಭೆಗಳಿಗೆ ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದೆ. ಸಂಸ್ಥೆಯಿಂದ ನೇತ್ರದಾನ ಮತ್ತು ಹಲವು ಸಾಮಾಜಿಕ ಕಾರ್ಯಗಳನ್ನು ಮುಂದಿನ ದಿನಗಳಲ್ಲಿ ಆಯೋಜಿಸುವ ಆಲೋಚನೆಯಿದೆ ಎಂದರು.

ಕಾರ್ಯಕ್ರಮದಲ್ಲಿ ಪಿ.ವಾಸುದೇವ್ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ, ವನಶ್ರೀಲಕ್ಷö್ಮಣ್‌ಗೌಡ ಅವರಿಗೆ ಉತ್ತಮ ಮಹಿಳಾ ರೈತ ಪ್ರಶಸ್ತಿ, ಗ್ರಾಮೀಣ ಭಾಗದಲ್ಲಿ ಹಲವು ವರ್ಷಗಳ ವೈದ್ಯಕೀಯ ಸೇವೆಗೆ ಡಾ. ಎ.ಯೂ.ಪಾದೂರು ಅವರನ್ನು ಹಲವು ವರ್ಷಗಳ ಸೇವಾ ಕಾರ್ಯಕ್ಕಾಗಿ ಸನ್ಮಾನಿಸಲಾಯಿತು. ಕ್ಯಾನ್ಸರ್ ಪೀಡಿತೆ ಗೀತಾ ಅವರಿಗೆ ರೂ೫ ಸಾವಿರ ನೆರವಿನ ಚೆಕ್ ಅನ್ನು ರಾಜ್ಯಪಾಲರು ವಿತರಿಸಿದರು. ಕೊಟ್ಟಿಗೆಹಾರ, ಬಣಕಲ್  ಸರ್ಕಾರಿ ಪ್ರೌಢಶಾಲೆ,ಏಕಲವ್ಯ ಶಾಲೆಗೆ ಕ್ರೀಡಾ ಸಾಮಾಗ್ರಿಗಳನ್ನು ಲಯನ್ಸ್ ಸಂಸ್ಥೆಯಿAದ ವಿತರಿಸಲಾಯಿತು.ವಿಮುಕ್ತಿ ಸದಸ್ಯರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ಗೋಪಾಲಗೌಡ, ಕಾರ್ಯದರ್ಶಿ ಶಶಿಧರ್ ರ‍್ಲ, ಸಂಯೋಜಕಿ ಭಾರತಿ, ಗೋವರ್ಧನ್ ಶೆಟ್ಟಿ, ಸುಪ್ರೀತಾ ಶೆಟ್ಟಿ,  ಸಾಹಿತಿ ಹಳೇಕೋಟೆ ರಮೇಶ್, ಜಯಕುಮಾರ್, ಯು.ಇ. ಪ್ರಭಾಕರ್, ಸಿಪ್ರಿಯನ್ ಲೋಬೊ, ಸುಂದರೇಶ್, ವಿಮುಕ್ತಿಯ ವಿಂದ್ಯಾ ಯೋಗೀಶ್, ದಿವ್ಯಾ ಡಿಸೋಜ ಹಾಗೂ ವಿಮುಕ್ತಿ ಮಹಿಳಾ ಒಕ್ಕೂಟದ ಸದಸ್ಯರು ಇದ್ದರು.

ಚಿತ್ರ:೧೪ಕೆಟಜಿ೨ ಬಣಕಲ್ ವಿಮುಕ್ತಿ ಸೇವಾ ಕೇಂದ್ರದಲ್ಲಿ ಮೂಡಿಗೆರೆ ಲಯನ್ಸ್ ಕ್ಲಬ್ ವತಿಯಿಂದ ಉಚಿತ ಕನ್ನಡಕ ವಿತರಣೆ ಹಾಗೂ ಕ್ರೀಡಾ ಪರಿಕರ ವಿತರಣೆ ಕಾರ್ಯಕ್ರಮವನ್ನು ಲಯನ್ಸ್ ಜಿಲ್ಲಾ ಗೌವರ್ನರ್ ವಸಂತ ಕುಮಾರ ಶೆಟ್ಟಿ ಉದ್ಘಾಟಿಸಿದರು.

ಟಾಪ್ ನ್ಯೂಸ್

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

1-wew-e-wqe

Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

1-wewewqe

Kaduru; ನಿಂತಿದ್ದ ಲಾರಿಗೆ ಟಿಟಿ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-uv-fusion

Kind: ಕರುಣೆ ಎಂಬ ಒಡವೆ ತೆಗೆಯದಿರು 

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

one year for siddaramaiah govt

ಗ್ಯಾರಂಟಿ ಸರಕಾರಕ್ಕೆ ವರ್ಷದ ಗೋರಂಟಿ!; ಹಲವು ಸವಾಲುಗಳ ನಡುವೆಯೂ ಭರವಸೆ ಈಡೇರಿಸಿದ ಸರಕಾರ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.