ಎಂಬಿಬಿಎಸ್‌ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಸರ್ಕಾರ ನೆರವಿಗೆ ಬಾರದ್ದರಿಂದ ಉಕ್ರೇನ್‌ನಿಂದ ಮರಳಿದ ಎಂಬಿಬಿಎಸ್‌ ವಿದ್ಯಾರ್ಥಿಗಳು ಕಂಗಾಲು

Team Udayavani, May 9, 2022, 3:03 PM IST

ukrane-medical-students

ಚಿಕ್ಕಮಗಳೂರು: ಯುದ್ಧಪೀಡಿತ ಉಕ್ರೇನ್‌ನಿಂದ ಮರಳಿದ ಜಿಲ್ಲೆಯ ಎಂಬಿಬಿಎಸ್‌ ವಿದ್ಯಾರ್ಥಿಗಳ ಭವಿಷ್ಯ ಈಗ ಅತಂತ್ರವಾಗಿದೆ. ಸರ್ಕಾರ ಇವರ ನೆರವಿಗೆ ಬಾರದಿರುವುದರಿಂದ ವಿದ್ಯಾರ್ಥಿಗಳಿಗೆ ದಿಕ್ಕು ತೋಚದೆ ಕಂಗಾಲಾಗಿದ್ದಾರೆ.

ರಷ್ಯಾ ಮತ್ತು ಉಕ್ರೇನ್‌ ನಡುವೆ ಯುದ್ಧ ಆರಂಭಗೊಳ್ಳುತ್ತಿದ್ದಂತೆ ಜಿಲ್ಲೆಯ 5 ಜನ ಎಂಬಿಬಿಎಸ್‌ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದರು. ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳನ್ನು ಸರ್ಕಾರ ತಾಯ್ನಾಡಿಗೆ ಕರೆತಂದಿತು. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತಂದ ಸರ್ಕಾರದ ಈ ನಡೆಗೆ ವಿದ್ಯಾರ್ಥಿಗಳ ಪೋಷಕರು ಮತ್ತು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ ಬಳಿಕ ಅವರ ವಿದ್ಯಾಭ್ಯಾಸಕ್ಕೆ ತೊಡಕ್ಕಾಗದಂತೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿತ್ತು.

ಉಕ್ರೇನ್‌ನಿಂದ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿ ತಿಂಗಳುಗಳೇ ಕಳೆದಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವರ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ನೀಡಿದ ಭರವಸೆ ಹುಸಿಯಾಗಿದ್ದು, ಯುದ್ಧಪೀಡಿತ ಉಕ್ರೇನ್‌ಗೆ ಮರಳಲು ಸಾಧ್ಯವಾಗದೆ ಇತ್ತ ವಿದ್ಯಾಭ್ಯಾಸಕ್ಕೆ ಸೂಕ್ತ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಜಿಲ್ಲೆಯ ಕಡೂರು, ಸಖರಾಯಪಟ್ಟಣ, ಚಿಕ್ಕಮಗಳೂರು, ಆಲ್ದೂರು ಸೇರದಿಂತೆ ಇತರೆಡೆಯ 5 ವಿದ್ಯಾರ್ಥಿಗಳು ಉಕ್ರೇನ್‌ನಿಂದ ಮರಳಿದ್ದು, ಮೊದಲ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳು ಸೇರಿದಂತೆ ಅಂತಿಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳು ಇದ್ದು ಅವರ ಭವಿಷ್ಯ ಅತಂತ್ರವಾಗಿದೆ.

ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರ

ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಇಲ್ಲೇ ಮುಂದುವರಿಸಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಸಚಿವ ಡಾ| ಕೆ.ಸುಧಾಕರ್‌ ಹಾಗೂ ಇಂಡಿಯನ್‌ ಮೆಡಿಕಲ್‌ ಅಸೋಸಿಯೇಶನ್‌ ಗೆ ಮನವಿ ಸಲ್ಲಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ.

ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳ ಶಿಕ್ಷಣ ಸಂಬಂಧ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ತಿಳಿಸಿದ್ದಾರೆ. ಆದರೆ, ಕೇಂದ್ರ ಸರ್ಕಾರವು ಈ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲ. ಈಗಾಗಲೇ ಕೆಲವು ತಿಂಗಳುಗಳಿಂದ ಶಿಕ್ಷಣದಿಂದ ವಂಚಿತರಾಗಿದ್ದು ಮುಂದೇನು ಮಾಡಬೇಕೆಂಬ ಚಿಂತೆ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಭವಿಷ್ಯದ ದೃಷ್ಟಿಯಿಂದ ಸರ್ಕಾರ ಶೀಘ್ರವೇ ತೀರ್ಮಾನ ಕೈಗೊಳ್ಳಬೇಕೆನ್ನುವುದು ವಿದ್ಯಾರ್ಥಿಗಳು ಮತ್ತು ಪೋಷಕರ ಆಗ್ರಹವಾಗಿದೆ.

ಉಕ್ರೇನ್‌ನಿಂದ ಬಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವುದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಇದುವರೆಗೂ ಯಾವುದೇ ವ್ಯವಸ್ಥೆ ಕಲ್ಪಿಸಿಲ್ಲ. ಮೈಸೂರು ಜೆಎಸ್‌ಎಸ್‌ ಇಂಜಿನಿಯರಿಂಗ್‌ ಮತ್ತು ಮೆಡಿಕಲ್‌ ಕಾಲೇಜಿನಲ್ಲಿ ತಾತ್ಕಾಲಿಕವಾಗಿ ಶಿಕ್ಷಣ ನೀಡುವುದಾಗಿ ಹೇಳಿದೆ. ಉಕ್ರೇನ್‌ ಕಾರ್ಕಿವ್‌ ಯೂನಿರ್ವಸಿಟಿ ಆನ್‌ಲೈನ್‌ ತರಗತಿಗಳನ್ನು ನಡೆಸುತ್ತಿದೆ. ಸದ್ಯ ಆನ್‌ಲೈನ್‌ನಲ್ಲಿ ಶಿಕ್ಷಣ ಪಡೆದುಕೊಳ್ಳಲಾಗುತ್ತಿದೆ. ಮತ್ತೆ ಉಕ್ರೇನ್‌ಗೆ ತೆರಳಿ ಶಿಕ್ಷಣ ಪಡೆಯಲು ಸಾಧ್ಯವಿಲ್ಲ. ಕೆಲವು ಮೆಡಿಕಲ್‌ ಕಾಲೇಜುಗಳು ತಾತ್ಕಾಲಿಕವಾಗಿ ಶಿಕ್ಷಣ ನೀಡುವುದಾಗಿ ಹೇಳಿವೆ. ಇದರಿಂದ ಪ್ರಯೋಜನವಿಲ್ಲ ಆದ್ದರಿಂದ ರಾಜ್ಯದಲ್ಲೇ ಶಿಕ್ಷಣ ಮುಂದುವರಿಸಲು ರಾಜ್ಯ ಸರ್ಕಾರ ಶೀಘ್ರವೇ ಅವಕಾಶ ಕಲ್ಪಿಸಿಕೊಡಬೇಕು.? – ಮನೋಜ್‌, ಉಕ್ರೇನ್‌ನಿಂದ ಮರಳಿದ ಎಂಬಿಬಿಎಸ್‌ ವಿದ್ಯಾರ್ಥಿ

ಉಕ್ರೇನ್‌ನಿಂದ ಬಂದ ಜಿಲ್ಲೆಯ ಎಂಬಿಬಿಎಸ್‌ ವಿದ್ಯಾರ್ಥಿಗಳಿಗೆ ಮೈಸೂರು ಜೆಎಸ್‌ ಎಸ್‌ ಕಾಲೇಜಿನಲ್ಲಿ ತಾತ್ಕಾಲಿಕವಾಗಿ ಶಿಕ್ಷಣ ನೀಡುವುದಾಗಿ ಹೇಳಿದೆ. ಈಗಾಗಲೇ ಮೇಲ್‌ ಕಳಿಸಲಾಗಿದೆ. ಮೇ 11ರಿಂದ ದಾಖಲಾಗುವಂತೆ ತಿಳಿಸಿದೆ. ಆದರೆ ಇದು ತಾತ್ಕಾಲಿಕವಾಗಿದೆ. ರಾಜ್ಯದಲ್ಲೇ ಶಿಕ್ಷಣ ಮುಂದುವರಿಸಲು ಅವಕಾಶ ನೀಡುವಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಇಂಡಿಯನ್‌ ಮೆಡಿಕಲ್‌ ಅಸೋಸಿಯೇಶನ್‌ ಗೆ ಮನವಿ ಮಾಡಲಾಗಿದ್ದು ಪ್ರಯೋಜನವಾಗಿಲ್ಲ. ಈ ಸಂಬಂಧ ರಾಜ್ಯ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರ ಶೀಘ್ರವೇ ತೀರ್ಮಾನ ಕೈಗೊಂಡು ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನುಕೂಲ ಮಾಡಿಕೊಡಲಿ. -ಅರುಣ್‌ಕುಮಾರ್‌, ಎಂಬಿಬಿಎಸ್‌ ವಿದ್ಯಾರ್ಥಿ

ಸಂದೀಪ್‌ ಜಿ.ಎನ್. ಶೇಡ್ಗಾರ್‌

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.