ಬದುಕಿನ ಹೋರಾಟ ಮುಗಿಸಿದ ಜಾರ್ಜ್‌


Team Udayavani, Jan 30, 2019, 12:30 AM IST

e-19.jpg

ನವೆದೆಹಲಿ: ಮಂಗಳೂರನ್ನು ಮಹಾರಾಷ್ಟ್ರದ ಮುಂಬೈಗೆ ಬೆಸೆದ ಕೊಂಕಣ ರೈಲ್ವೆಯ ನಿರ್ಮಾತೃ, ಹುಟ್ಟು ಹೋರಾ ಟಗಾರ ಮಾಜಿ ರಕ್ಷಣಾ ಸಚಿವ ಜಾರ್ಜ್‌ ಮ್ಯಾಥ್ಯೂ ಫೆರ್ನಾಂಡಿಸ್‌ (88) ಮಂಗಳವಾರ ನಿಧನರಾಗಿದ್ದಾರೆ. ಎಂಟು ವರ್ಷಗಳಿಂದ ಮರೆಗುಳಿ ಕಾಯಿಲೆಯಿಂದ ಬಳಲುತ್ತಿದ್ದ ಜಾರ್ಜ್‌ ಅವರಿಗೆ ಎಚ್1 ಎನ್‌1 ಸೋಂಕು ತಗುಲಿದ್ದರಿಂದ ಮಂಗಳವಾರ ನವದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಫೆರ್ನಾಂಡಿಸ್‌ ನಿಕಟವರ್ತಿ ಜಯಾ ಜೇಟ್ಲಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಜನಿಸಿದ್ದ ಧೀಮಂತ ನಾಯಕ ಜಾರ್ಜ್‌ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ಹಿರಿಯ ನಾಯಕ ಲಾಲ್‌ ಕೃಷ್ಣ ಅಡ್ವಾಣಿ, ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌, ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ. 2004ರಲ್ಲಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರ ಚುನಾವಣೆಯಲ್ಲಿ ಸೋತ ಬಳಿಕ ಫೆರ್ನಾಂಡಿಸ್‌ ಅವರು ರಾಜಕೀಯ ಮುಖ್ಯ ಭೂಮಿಕೆಯಿಂದ ಕ್ರಮೇಣ ಮರೆಯಾಗಿದ್ದರು. ಇಳಿ ವಯಸ್ಸು, ಅನಾರೋಗ್ಯವೂ ಅವರನ್ನು ಬಾಧಿಸಿ, 2010ರ ಬಳಿಕ ಅವರಿಗೆ ಮರೆಗುಳಿ ಕಾಯಿಲೆ ಶುರುವಾಗಿತ್ತು. ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಅಭೂತಪೂರ್ವ ವ್ಯಕ್ತಿತ್ವ ಹೊಂದಿದ್ದ ಜಾರ್ಜ್‌, ದಿ.ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ 1998-2004ರ ನಡುವೆ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇವರ ಅವಧಿಯಲ್ಲೇ ಕಾರ್ಗಿಲ್‌ನಲ್ಲಿ ಪಾಕಿಸ್ತಾನ ದುಸ್ಸಾಹಸ ನಡೆಸಿ ಮುಖಭಂಗಕ್ಕೆ ಈಡಾಗಿತ್ತು. ಜತೆಗೆ ವಾಜಪೇಯಿ ಸರ್ಕಾರ ಪೋಖ್ರಾನ್‌ನಲ್ಲಿ ಕೈಗೊಂಡ ಪರಮಾಣು ಪರೀಕ್ಷೆಯಲ್ಲಿಯೂ ಜಾರ್ಜ್‌ ಪ್ರಮುಖ ಪಾತ್ರ ವಹಿಸಿದ್ದರು. ದಿ.ಮೊರಾರ್ಜಿ ದೇಸಾಯಿ ನೇತೃತ್ವದ ಜನತಾ ಪಕ್ಷದ ಸರ್ಕಾರದಲ್ಲಿ ಕೈಗಾರಿಕಾ ಸಚಿವರಾಗಿಯೂ ಫೆರ್ನಾಂಡಿಸ್‌ ಕಾರ್ಯನಿರ್ವಹಿಸಿದ್ದರು. ರಾಜಕೀಯವಾಗಿ ಹಿಂದೂ ಸಂಘಟನೆಗಳ ಹಿನ್ನೆಲೆ ಇರುವ ಬಿಜೆಪಿ ಮತ್ತು ಸಮಾಜವಾದದ ಚಳವಳಿ ಆಧಾರಿತ ವಾಗಿದ್ದ ಜನತಾ ಪಕ್ಷದ ಸರ್ಕಾರಗಳಲ್ಲಿ ಸಚಿವರಾಗುವ ಮೂಲಕ 2 ಭಿನ್ನ ರಾಜಕೀಯ ಚಿಂತನೆಗಳ ಧ್ರುವಗಳಲ್ಲಿ ಕೆಲಸ ಮಾಡಿದ ಹೆಗ್ಗಳಿಕೆ ಜಾರ್ಜ್‌ರದ್ದು

1977ರಲ್ಲಿ ಕೈಗಾರಿಕಾ ಸಚಿವರಾಗಿದ್ದ ವೇಳೆ ಐಬಿಎಂ, ಕೋಕಾಕೋಲ ಕಂಪನಿಗಳನ್ನು ದೇಶದಿಂದಲೇ ಹೊರಗೋಡಿಸಿದಂಥ ಕೆಚ್ಚು ಅವರದ್ದು. 1974ರಲ್ಲಿ ದೇಶವನ್ನು ಮೂರು ವಾರಗಳ ಕಾಲ ಕಂಗೆಡಿಸುವಂತೆ ಮಾಡಿದ್ದ ರೈಲ್ವೆ ಮುಷ್ಕರದ ನೇತೃತ್ವ ವಹಿಸಿದ್ದ ಕುಡ್ಲದ ಹುಡುಗ, 1989ರಲ್ಲಿ ದಿ.ವಿ.ಪಿ.ಸಿಂಗ್‌ ನೇತೃತ್ವದ ರಾಷ್ಟ್ರೀಯ ರಂಗ ಸರ್ಕಾರದಲ್ಲಿ ರೈಲ್ವೆ ಸಚಿವ ರಾಗಿದ್ದರು. ಇದೇ ಅವಧಿಯಲ್ಲಿ ಬ್ರಿಟಿಷರ ಕಾಲದಲ್ಲಿ ಮಂಗಳೂರಿನಿಂದ ಮುಂಬೈಗೆ ನೇರ ಸಂಪರ್ಕ ಕಲ್ಪಿಸಲೆಂದು ರೂಪಿಸಿದ್ದ ರೈಲು ಯೋಜನೆ, ಅವರು ಸಚಿವರಾಗಿ ದ್ದಾಗಲೇ ಅನುಷ್ಠಾನವಾಗಿತ್ತು. ಉಡುಪಿ ಯಲ್ಲಿ ನಡೆದಿದ್ದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ‘ನಾನು ಅಧಿಕಾರದಲ್ಲಿ ಇರಲಿ, ಇಲ್ಲದೇ ಇರಲಿ, 2 ವರ್ಷಗಳಲ್ಲಿ ಉಡುಪಿ ಯಿಂದ ಮಂಗಳೂರಿಗೆ ರೈಲು ಸಂಚಾರ ಆರಂಭವಾಗುವಂತೆ ಮಾಡುತ್ತೇನೆ’ ಎಂದಿದ್ದರು. ಅದರಂತೆ ಕಾಮಗಾರಿಯೂ ಪ್ರಗತಿಗೊಂಡಿತ್ತು. 1967ರಲ್ಲಿ ಮುಂಬೈ ದಕ್ಷಿಣ ಕ್ಷೇತ್ರದ ಸಂಸದ, ಕಾಂಗ್ರೆಸ್‌ನ ಆಗಿನ ಪ್ರಭಾವಿ ನಾಯಕ ಎಸ್‌.ಕೆ.ಪಾಟೀಲ್‌ರನ್ನು ಲೋಕಸಭೆ ಚುನಾವಣೆಯಲ್ಲಿ ಸೋಲಿಸುವ ಮೂಲಕ ಸಂಸತ್‌ ಪ್ರವೇಶಿಸಿದ್ದರು. ಒಟ್ಟು 9 ಬಾರಿ ಲೋಕಸಭೆ ಸದಸ್ಯರಾಗಿದ್ದರು.

ಪುತ್ರ ನ್ಯೂಯಾರ್ಕ್‌ನಿಂದ ಬಂದ ಬಳಿಕ ಅಂತ್ಯಕ್ರಿಯೆ
ಜಾರ್ಜ್‌ ಪುತ್ರ ಸಿಯಾನ್‌ ಫೆರ್ನಾಂಡಿಸ್‌ ನ್ಯೂಯಾರ್ಕ್‌ನಲ್ಲಿದ್ದಾರೆ. ಅವರು ನವದೆಹಲಿಗೆ ಆಗಮಿಸಿದ ಬಳಿಕ ರಾಷ್ಟ್ರ ರಾಜಧಾನಿಯ ಲೋಧಿ ಅಂತ್ಯಸಂಸ್ಕಾರ ಕೇಂದ್ರದಲ್ಲಿ ವಿಧಿ ವಿಧಾನಗಳನ್ನು ನಡೆಸಲಾಗುತ್ತದೆ. ಹೀಗಾಗಿ ಬುಧವಾರ ಅಂತಿಮ ವಿಧಿ ವಿಧಾನಗಳು ನಡೆಯುವ ಸಾಧ್ಯತೆಗಳಿವೆ. ಕ್ರಿಶ್ಚಿಯನ್‌ ಸಮುದಾಯಕ್ಕೆ ಸೇರಿದವರಾದ ಜಾರ್ಜ್‌ ಈ ಹಿಂದೆ ತಮ್ಮನ್ನು ಹೂಳಬೇಕು ಎಂದಿದ್ದರು. ನಂತರ ತಮ್ಮನ್ನು ಸುಡಬೇಕು ಎಂದು ಅಂತಿಮ ಇಚ್ಛೆ ವ್ಯಕ್ತಪಡಿಸಿದ್ದರು. ಅದರ ಪ್ರಕಾರ, ಮೊದಲಿಗೆ ದೇಹಕ್ಕೆ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತ್ಯಸಂಸ್ಕಾರ ನಡೆಸಿ, ನಂತರ ಚಿತಾ ಭಸ್ಮವನ್ನು ಹೂಳಲು ನಿರ್ಧರಿಸಿದ್ದೇವೆ ಎಂದು ಜಾರ್ಜ್‌ರ ನಿಕಟವರ್ತಿ ಜಯಾ ಜೇಟ್ಲಿ ತಿಳಿಸಿದ್ದಾರೆ.

ಬಿಕ್ಕಿ ಬಿಕ್ಕ್ಕಿ ಅತ್ತ ಬಿಹಾರ ಮುಖ್ಯಮಂತ್ರಿ: ಜಾರ್ಜ್‌ ಫೆರ್ನಾಂಡಿಸ್‌ಗೆ ನಮನ ಸಲ್ಲಿಸುವ ಸಂದರ್ಭದಲ್ಲಿ ಬಿಹಾರ ಮುಖ್ಯಮಂತ್ರಿ, ಜೆಡಿಯು ಅಧ್ಯಕ್ಷ ನಿತೀಶ್‌ ಕುಮಾರ್‌ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ‘ಜಾರ್ಜ್‌ ಅವರ ನಾಯಕತ್ವ ಮತ್ತು ನಿರ್ದೇಶನದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಿದ್ದೆವು. ಜನರ ಒಳಿತಿಗಾಗಿ ಯಾವೆಲ್ಲ ಕ್ರಮಗಳನ್ನು ಕೈಗೊಂಡಿದ್ದೇನೆಯೋ ಅವೆಲ್ಲವೂ ಅವರಿಂದ ಕಲಿತದ್ದು. ಹುಟ್ಟಿದ ಬಳಿಕ ಎಲ್ಲರೂ ಸಾಯಲೇಬೇಕೆಂದು ನಿಯಮ ವಾದರೂ, ನಮ್ಮೆಲ್ಲರಿಗೆ ಜಾರ್ಜ್‌ ನಿಧನ ಅತೀವ ದುಃಖ ತಂದಿದೆ. ಜನರ ಹಕ್ಕುಗಳಿ ಗಾಗಿ ಅವರು ನಡೆಸಿದ ಹೋರಾಟ ಎಲ್ಲರಿಗೂ ಆದರ್ಶ’ ಎಂದಿದ್ದಾರೆ. ಜಾರ್ಜ್‌ ಅವರ ಗೌರವಾರ್ಥ 2 ದಿನಗಳ ಕಾಲ ಬಿಹಾರದಲ್ಲಿ ಶೋಕಾಚರಣೆ ಘೋಷಿಸಲಾಗಿದೆ.

ಬಕೆಟ್ ಹಿಡಿದು ಪಾದಯಾತ್ರೆ
ಚಿಕ್ಕಮಗಳೂರು:
ಇಂದಿರಾ ಗಾಂಧಿ ವಿರುದ್ಧ ಚಿಕ್ಕಮಗಳೂರಿನಲ್ಲಿ ಜನತಾದಳದಿಂದ ಸ್ಪರ್ಧಿಸಿದ್ದ ವೀರೇಂದ್ರ ಪಾಟೀಲ್‌ ಅವರ ಪರ ಪ್ರಚಾರ ಮಾಡಲು ಹಣದ ಕೊರತೆ ಎದುರಾಗಿತ್ತು. ಹೀಗಾಗಿ, ಸಾರ್ವಜನಿಕರಿಂದ ಸಹಾಯ ಕೋರಲಾಗಿತ್ತು. ಹಣ ಸಂಗ್ರಹಿಸಲು ಜಾರ್ಜ್‌ ಅವರೇ ಬಕೆಟ್ ಹಿಡಿದು ಪಾದಯಾತ್ರೆಯಲ್ಲಿ ಸಾಗುತ್ತಿದ್ದರು. ಹಣ ನೀಡಲು ಸಾರ್ವಜನಿಕರು ಮುಗಿ ಬೀಳುತ್ತಿದ್ದರು. ಇದೇ ರೀತಿ ಪಾದಯಾತ್ರೆ ಸಾಗುತ್ತಿರುವಾಗ ಮಳೆ ಆರಂಭವಾಯಿತು. ಜಾರ್ಜ್‌ ಅವರು ನೆನೆಯಬಾರದು ಎಂದು ಪಕ್ಷದ ಕಾರ್ಯಕರ್ತರು ಛತ್ರಿ ಹಿಡಿಯಲು ಬಂದಾಗ ಅದನ್ನು ನಿರಾಕರಿಸಿದ ಜಾರ್ಜ್‌ ಮಳೆಯಲ್ಲೇ ಪಾದಯಾತ್ರೆ ಮುಂದುವರೆಸಿದರು ಎಂದು ನೆನಸಿಕೊಳ್ಳುತ್ತಾರೆ ಹಿರಿಯ ಪತ್ರಕರ್ತ ಸ.ಗಿರಿಜಾಶಂಕರ.

ಕ್ಯಾಸೆಟ್ಹಾಕಿ ಭಾಷಣ ಕೇಳಿದ್ದರು!
ರಾಯಚೂರು:
ಜಾರ್ಜ್‌ ಫೆರ್ನಾಂಡಿಸ್‌ ತುರ್ತು ಪರಿಸ್ಥಿತಿ ಖಂಡಿಸಿ ಲೋಕಸಭೆ ಚುನಾವಣೆ ವೇಳೆ ಜಿಲ್ಲೆಯಲ್ಲೂ ಸಾಕಷ್ಟು ಪ್ರಚಾರ ನಡೆಸಿದ್ದರು. ರಾಯಚೂರು, ಕುಷ್ಟಗಿ ಸೇರಿ ವಿವಿಧೆಡೆ ಓಡಾಟ ಮಾಡಿದ್ದ ಜಾರ್ಜ್‌, ಇಂದಿರಾ ಗಾಂಧಿ ನಿಲುವನ್ನು ಕಟುವಾಗಿ ವಿರೋಧಿಸಿದ್ದರು. ತಮ್ಮದೇ ಯುವಪಡೆಯನ್ನು ಕಟ್ಟಿಕೊಂಡು ಪ್ರಚಾರ ಮಾಡಿದ್ದರು. ಆಗ ತಾನೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದ ಟೇಪ್‌ ರೆಕಾರ್ಡ್‌ರ್‌ ಕ್ಯಾಸೆಟ್‌ಗಳಲ್ಲಿ ಫೆನಾಂಡಿಸ್‌ ಅವರ ಭಾಷಣ ದಾಖಲಿಸಿ ಹಳ್ಳಿ ಹಳ್ಳಿಗೆ ತೆರಳಿ ಅದನ್ನು ಜನರಿಗೆ ಕೇಳಿಸಲಾಗುತ್ತಿತ್ತು.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.