![modi (4)](https://www.udayavani.com/wp-content/uploads/2024/07/modi-4-4-415x256.jpg)
ಮನೆ ಕಳೆದುಕೊಂಡವರಿಗೆ ಶಾಶ್ವತ ಪರಿಹಾರ ನೀಡಿ
Team Udayavani, Oct 9, 2020, 7:26 PM IST
![ಮನೆ ಕಳೆದುಕೊಂಡವರಿಗೆ ಶಾಶ್ವತ ಪರಿಹಾರ ನೀಡಿ](https://www.udayavani.com/wp-content/uploads/2020/10/cm-tdy-2-2-620x372.jpg)
ಬಾಳೆಹೊನ್ನೂರು: ಭದ್ರಾ ನದಿ ಪ್ರವಾಹದಿಂದ ಬಂಡಿಮಠದಲ್ಲಿ ಮನೆ ಕಳೆದುಕೊಂಡಿರುವಕುಟುಂಬದವರಿಗೆ ಶಾಶ್ವತ ಪರಿಹಾರ ನೀಡಬೇಕೆಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿರಾಜೇಗೌಡ ಅವರಿಗೆ ನಿರಾಶ್ರಿತರು ಮನವಿ ಮಾಡಿದರು.
ಬಂಡಿಮಠದ ಬಾಲಸುಬ್ರಮಣ್ಯ ದೇವಸ್ಥಾನದ ಆವರಣದಲ್ಲಿ ನಿವೇಶನನೀಡುವ ಬಗ್ಗೆ ಚರ್ಚಿಸಲು ಉಪ ವಿಭಾಗಾಧಿಕಾರಿಗಳು ಸಭೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ತ್ವರಿತವಾಗಿ ಕಾಮಗಾರಿ ಮಾಡಿಸಬೇಕು. ಭದ್ರಾನದಿಗೆ ನೂತನ ಸೇತುವೆ ನಿರ್ಮಾಣ ಸಂಬಂಧ ಕೆಲವು ಕುಟುಂಬಗಳ ಮನೆ ತೆರವುಗೊಳಿಸಬೇಕಾಗುತ್ತದೆ. ಈ ಹಿಂದೆ ನಿರಾಶ್ರಿತರಿಗೆ ನಿವೇಶನಗಳನ್ನು ನೀಡಲಾಗಿತ್ತು. ಕೆಲವರು ಮಾರಾಟ ಮಾಡಿ ಅದೇ ಸ್ಥಳದಲ್ಲಿದ್ದಾರೆ.ಒಂದು ಕುಟುಂಬಕ್ಕೆ ಎಷ್ಟು ಬಾರಿ ನಿವೇಶನ ನೀಡಬಹುದೆಂದು ಶಾಸಕರಲ್ಲಿ ಪ್ರಶ್ನಿಸಿದರು ಕೆಲವರಿಗೆ ಪರಿಹಾರದ ಹಣ ಬಂದಿದ್ದು ಮನೆ ಕಟ್ಟುತ್ತಿದ್ದಾರೆ. ಪುನಃ ಇವರಿಗೆ ಸೇತುವೆ ನಿರ್ಮಾಣ ಸಂಬಂಧ ಮನೆ ತೆರವುಗೊಳಿಸಿ ಪರಿಹಾರ ಕೊಡಬೇಕಾಗಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಮಾತನಾಡಿದ ಶಾಸಕರು, ನೂತನ ಸೇತುವೆ ನಿರ್ಮಾಣದ ಬಗ್ಗೆ ಸ್ಥಳ ಪರೀಶೀಲನೆ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಇಂಜಿನಿಯರ್ಗಳು ನನ್ನ ಗಮನಕ್ಕೆ ತಾರದೆ ಕಾಮಗಾರಿ ಪ್ರಾರಂಭಿಸಿದ್ದಾರೆ. ಹೊಸ ಸೇತುವೆ ನಿರ್ಮಾಣಕ್ಕೆ ಎಷ್ಟು ಮನೆಗಳು ತೆರವುಗೊಳಿಸಬೇಕು ಎಂಬುದರ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ. ಮನೆ ತೆರವುಗೊಳಿಸಿದವರಿಗೆ ಬದಲಿ ನಿವೇಶನ ನೀಡುವ ಬಗ್ಗೆ ಸ್ಥಳ ಗುರುತಿಸದೆ ಸಭೆ ಕರೆದಿರುವುದು ಸರಿಯಲ್ಲ. ನಿವೇಶನ ಜಾಗ ಗುರುತಿಸಿದ ಮೇಲೆ ನಿರಾಶ್ರಿತರೊಂದಿಗೆ ಸಭೆ ನಡಸಿ ಚರ್ಚಿಸೋಣ ಎಂದು ತಿಳಿಸಿದರು.
ಉಪ ವಿಭಾಗಾಧಿಕಾರಿ ರೇಣುಕಾಪ್ರಸಾದ್ ಮಾತನಾಡಿ, ನ್ಯಾಯಯುತವಾಗಿ ಪರಿಹಾರ ನೀಡಬೇಕಾಗಿದ್ದು ಸರ್ಕಾರದ ಜವಾಬ್ದಾರಿ ಆಗಿದೆ. ಬದಲಿ ನಿವೇಶನಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಜಿಪಂ ಸದಸ್ಯೆ ಚಂದ್ರಮ್ಮ, ತಾಪಂ ಉಪಾದ್ಯಕ್ಷ ಮಂಜು ಹೊಳೆಬಾಗಿಲು, ತಾಪಂ ಸದಸ್ಯರಾದ ಟಿ.ಎಂ. ನಾಗೇಶ್, ರವಿ, ಬಿ. ಕಣಬೂರು ಗ್ರಾಪಂ ಮಾಜಿ ಅದ್ಯಕ್ಷ ಮಹಮ್ಮದ್ ಹನೀಫ್, ಬನ್ನೂರು ಗ್ರಾಪಂ ಮಾಜಿ ಸದಸ್ಯ ಗೋವಿಂದ ರಾಜು ಮತ್ತಿತರರು ಇದ್ದರು.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-aaaa](https://www.udayavani.com/wp-content/uploads/2024/07/1-aaaa-8-150x100.jpg)
ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ
![1-sadasd](https://www.udayavani.com/wp-content/uploads/2024/07/1-sadasd-150x90.jpg)
July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ
![N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್](https://www.udayavani.com/wp-content/uploads/2024/07/lineman-150x83.jpg)
N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್
![Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ](https://www.udayavani.com/wp-content/uploads/2024/07/mara-1-150x101.jpg)
Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ
![Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ](https://www.udayavani.com/wp-content/uploads/2024/07/madaga-150x83.jpg)
Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.