ಗ್ರಾಪಂ ಚುನಾವಣೆಗೆ ಭರದ ಸಿದ್ಧತೆ


Team Udayavani, Dec 7, 2020, 7:20 PM IST

CM-TDY-1

ಸಾಂದರ್ಭಿಕ ಚಿತ್ರ

ಶೃಂಗೇರಿ: ತಾಲೂಕಿನಲ್ಲಿ ಡಿಸೆಂಬರ್‌ ಕೊನೆಯ ವಾರದಲ್ಲಿ ನಡೆಯಲಿರುವ ಗ್ರಾ.ಪಂ ಚುನಾವಣೆಗೆ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಗ್ರಾಮೀಣ ಭಾಗದಲ್ಲಿ ಚುನಾವಣಾ ಕಾವು ನಿಧಾನವಾಗಿ ಏರುತ್ತಿದೆ.

ರಾಜಕೀಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಅಖಾಡ ಸಿದ್ಧಪಡಿಸುತ್ತಿದ್ದು, ಅಲ್ಲಲ್ಲಿ ಚುನಾವಣಾ ಪೂರ್ವಸಭೆಗಳನ್ನು ಆಯೋಜಿಸುತ್ತಿವೆ. ತಾಲೂಕಿನ 9 ಗ್ರಾಪಂಗಳಿಗೆ ಚುನಾವಣೆ ನಡೆಯಲಿದ್ದು, 26543 ಮತದಾರರು ಮತ ಚಲಾಯಿಸಲಿದ್ದಾರೆ. ಇದರಲ್ಲಿ ಪುರುಷ ಮತದಾರರು 13097 ಹಾಗೂ ಮಹಿಳಾ ಮತದಾರರು 13446 ಇದ್ದು, ಒಟ್ಟು 48 ಮತಗಟ್ಟೆಗಳಿದ್ದು 86 ಸ್ಥಾನಗಳಿಗಾಗಿಚುನಾವಣೆ ನಡೆಯಲಿದೆ. ತಾಲೂಕಿನಲ್ಲಿ ಅಡ್ಡಗದ್ದೆ,ಬೇಗಾರ್‌, ಧರೆಕೊಪ್ಪ, ಮರ್ಕಲ್‌, ಮೆಣಸೆ,

ವಿದ್ಯಾರಣ್ಯಪುರ, ನೆಮ್ಮಾರ್‌, ಕೆರೆ, ಕೂತಗೋಡು ಸೇರಿ ಒಟ್ಟು 9 ಗ್ರಾಪಂಗಳಿದ್ದು ಒಟ್ಟು 86 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಇದರಲ್ಲಿ 46 ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾಗಿದೆ. ಸಾಮಾನ್ಯ ಕ್ಷೇತ್ರದಲ್ಲಿ18 ಪ.ಜಾತಿ 12 ಸ್ಥಾನಗಳಲ್ಲಿ 9 ಪ.ಪಂಗಡದಲ್ಲಿ 11 ರಲ್ಲಿ 9, ಬಿಸಿಎಂ ಎ 15 ಸ್ಥಾನದಲ್ಲಿ 9, ಬಿಸಿಎಂ ಬಿ 3 ಸ್ಥಾನದಲ್ಲಿ 1 ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ.ತಾಲೂಕಿನಲ್ಲಿ ವಿದ್ಯಾರಣ್ಯಪುರ ಗ್ರಾ.ಪಂ ಅತಿ ಹೆಚ್ಚು ಮತದಾರರನ್ನು ಹೊಂದಿದ್ದು, ಕೆರೆ ಅತಿಕಡಿಮೆ ಮತದಾರರನ್ನು ಹೊಂದಿದೆ. ಡಿ. 7 ರಿಂದಅಭ್ಯರ್ಥಿಗಳು ಆಯ ಗ್ರಾ.ಪಂ ಕಚೇರಿಯಲ್ಲಿಸಲ್ಲಿಸಬಹುದಾಗಿದ್ದು, ಡಿ. 11 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿರುತ್ತದೆ.

ಕಳೆದ ಗ್ರಾ.ಪಂ ಚುನಾವಣೆಯಲ್ಲಿ 9 ಗ್ರಾ.ಪಂನಲ್ಲಿ 5 ರಲ್ಲಿ ಬಿಜೆಪಿ ಮತ್ತು 4 ರಲ್ಲಿ ಕಾಂಗ್ರೆಸ್‌ ಬೆಂಬಲಿತರು ಆಡಳಿತ ಚುಕಾಣಿ ಹಿಡಿದಿದ್ದರು. ಈ ಬಾರಿಯೂಬಹುತೇಕ ಕಾಂಗ್ರೆಸ್‌ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಡುವೆಯೇ ನೇರ ಹಣಾಹಣಿ ನಡೆಯಲಿದೆ. ಆದರೆ ತಾಲೂಕಿನಲ್ಲಿ ರೈತರು ಅಡಿಕೆ ಕೊಯ್ಲು ನಿರ್ವಹಣೆಯಲ್ಲಿ ತೊಡಗಿದ್ದು, ಇದರೊಂದಿಗೆ ಗದ್ದೆ ಕೊಯ್ಲು ಕೂಡ ಅಲ್ಲಲ್ಲಿ ಪ್ರಾರಂಭವಾಗಿದೆ. ಒಂದೆಡೆ ಚಂಡಮಾರುತದ ಹಾವಳಿಯಿಂದಾಗಿ ಮಳೆಯ ಭೀತಿ, ಅಡಿಕೆ ಗದ್ದೆ ಹಾಗೂ ಕಾμ ಕೊಯ್ಲುಒಟ್ಟೊಟ್ಟಿಗೆ ಬಂದಿರುವುದರಿಂದ ಕಾರ್ಮಿಕರ ಸಮಸ್ಯೆ ಎದುರಿಸುತ್ತಿದ್ದು, ಮತ್ತೂಂದೆಡೆ ಚುನಾವಣಾ ತಯಾರಿ ಒಟ್ಟಾರೆ ಗ್ರಾ.ಪಂ ಚುನಾವಣೆಗೆ ತಾಲೂಕು ಆಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ.

ತಾಲೂಕು ಸಣ್ಣದಾಗಿದ್ದರೂ ಇಲ್ಲಿನ ಸಮಸ್ಯೆ ಮಾತ್ರ ಬೃಹದಾಕಾರವಾಗಿದೆ. ಕಸ್ತೂರಿ ರಂಗನ್‌ ವರದಿ ಪ್ರಕಾರ ತಾಲೂಕಿನ ಒಟ್ಟು 49 ಕಂದಾಯ ಗ್ರಾಮಗಳಲ್ಲಿ 26 ಗ್ರಾಮಗಳು ಸೇರಿದ್ದು, ಇದರೊಂದಿಗೆ ಹುಲಿ ಯೋಜನೆಯು ಮಾರಕವಾಗಿ ಪರಿಣಮಿಸಿರುವುದರಿಂದ ಜನ ಹೈರಾಣಾಗಿದ್ದಾರೆ.

ಹಲವು ಗ್ರಾಮದಲ್ಲಿ ಮೂಲ ಸೌಕರ್ಯದ ಕೊರತೆ, ಕುಡಿಯುವ ನೀರು, ರಸ್ತೆ, ಸೇತುವೆ ಹಾಗೂ ಕೆಲವು ಭಾಗಗಳಲ್ಲಿ ದೊಡ್ಡ ದೊಡ್ಡ ಹಳ್ಳಗಳಿಗೆ ಈಗಲೂಕಾಲುಸಂಕದಲ್ಲಿಯೇ ಸಂಚರಿಸಬೇಕಾದ ಅನಿವಾರ್ಯ  ಸ್ಥಿತಿ. ವಸತಿ ಯೋಜನೆಗೆ ಕೆಲವು ಗ್ರಾಪಂನಲ್ಲಿ ಜಾಗ ಗುರುತಿಸಲ್ಪಟ್ಟಿದ್ದರು ಮೀಸಲು ಅರಣ್ಯ ಘೋಷಣೆ, ಸೊಪ್ಪಿನಬೆಟ್ಟ ಇತ್ಯಾದಿ ಕಾರಣಗಳಿಂದ ನನೆಗುದಿಗೆ ಬಿದ್ದಿದೆ.

ಒಟ್ಟಾರೆ ಗ್ರಾಮೀಣ ಭಾಗದ ಜನರ ಪಾಲಿಗೆ ಸಂಕಷ್ಟಗಳೇ ಜಾಸ್ತಿಯಾಗಿದೆ. ಸೌಲಭ್ಯ ವಂಚಿತ ಗ್ರಾಮಸ್ಥರು ಇದೇ ಸಂದರ್ಭ ಬಳಸಿಕೊಂಡು ಸ್ಪರ್ಧಾಳುಗಳಲ್ಲಿ ಸವಲತ್ತು ಕೇಳುವ ತವಕದಲ್ಲಿದ್ದಾರೆ. ಸ್ಪರ್ಧಾಳುಗಳು ಸವಲತ್ತಿನ ಸವಾಲನ್ನು ಎದುರಿಸಬೇಕಿದೆ. ಕಳೆದ ಎರಡು ವರ್ಷಗಳಿಂದ ದಾಖಲೆ ಪ್ರಮಾಣದಲ್ಲಿ ತಾಲೂಕಿನಲ್ಲಿ ಅತಿವೃಷ್ಟಿಯಾಗಿದ್ದು, ಇದರ ಪರಿಣಾಮ ಜಮೀನು,

ಮನೆ ಕಳೆದುಕೊಂಡು ಸಂತ್ರಸ್ತರಾದವರು ಕೂಡ ಸ್ಪರ್ಧಾಳುಗಳಲ್ಲಿ ಬೇಡಿಕೆ ಇರಿಸಲು ಕಾಯುತ್ತಿದ್ದಾರೆ. ಗ್ರಾ.ಪಂ ಚುನಾವಣೆಯಲ್ಲಿ ಅಭ್ಯರ್ಥಿಗಳು ಸ್ವತಂತ್ರವಾಗಿ ಸ್ಪರ್ಧಿಸಬೇಕಿದೆ. ರಾಜಕೀಯ ಪಕ್ಷದ ಚಿಹ್ನೆ ಬಳಸಲು ಅವಕಾಶವಿಲ್ಲದಿದ್ದರು ಪಕ್ಷಗಳು ತಮ್ಮ ಬೆಂಬಲಿಗರನ್ನು ಕಣಕ್ಕಿಳಿಸಿ ಗ್ರಾಪಂ ಆಡಳಿತವನ್ನು ತೆಕ್ಕೆಗೆ ಪಡೆಯುವಲ್ಲಿ ಹವಣಿಸುತ್ತಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಿಜೆಪಿ ಆಡಳಿತದಲ್ಲೆ ಇರುವುದರಿಂದ ಜನರ ಸಮಸ್ಯೆಗಳನ್ನು ಪರಿಹರಿಸಲು ಗ್ರಾ.ಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಆಡಳಿತಕ್ಕೆ ಬಂದರೆ ಸಹಾಯವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ಅನೇಕ ಜನಪರ ಯೋಜನೆಗಳಿಂದ ಜನರು ಬಿಜೆಪಿ ಪರ ಇದ್ದಾರೆಂಬುದು ಈಗಾಗಲೇ ಸಾಬೀತಾಗಿದೆ.  ತಲಗಾರು ಉಮೇಶ್‌, ಬಿಜೆಪಿ ಅಧ್ಯಕ್ಷರು.

ಕಳೆದ ಬಾರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದ್ದು, ಜನರು ಸ್ಥಳೀಯ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ ಪಕ್ಷದ ಪರವಾಗಿ ಇದ್ದಾರೆ. ಶಾಸಕ ಟಿ.ಡಿ. ರಾಜೇಗೌಡ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ಮಾಡಿದ್ದಾರೆ.  –ನಟರಾಜ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು.

ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಈ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದೆ. ಜನರಿಗೆ ಮನವರಿಕೆ ಮಾಡಿಕೊಟ್ಟು ಗ್ರಾ.ಪಂ ಚುನಾವಣೆ ಎದುರಿಸಲಿದ್ದೇವೆ. ಟಿ.ಟಿ ಕಳಸಪ್ಪ, ಜೆಡಿಎಸ್‌ ಅಧ್ಯಕ್ಷರು

 

-ರಮೇಶ್‌ ಕರುವಾನೆ

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.