ಕುಡಿವ ನೀರಿನ ಯೋಜನೆ ಪೂರ್ಣಗೊಳಿಸದಿದ್ದರೆ ಅನುದಾನ ಕಡಿತ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಗುತ್ತಿಗೆದಾರರಿಗೆ ಶಾಸಕ ಸಿ.ಟಿ. ರವಿ ಎಚ್ಚರಿಕೆ

Team Udayavani, Apr 16, 2022, 1:12 PM IST

drinking-water

ಚಿಕ್ಕಮಗಳೂರು: ಅಮೃತ್‌ ಕುಡಿಯುವ ನೀರು ಯೋಜನೆ ಏ.30ರೊಳಗೆ ಪೂರ್ಣಗೊಳಿಸದಿದ್ದರೆ ಅನುದಾನ ಕಡಿತಗೊಳಿಸಲಾಗುವುದು ಎಂದು ಶಾಸಕ ಸಿ.ಟಿ. ರವಿ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದರು.

ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಮೃತ್‌ ಕುಡಿಯುವ ನೀರು ಯೋಜನೆ ಮತ್ತು ಒಳಚರಂಡಿ ಯೋಜನೆ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಮೃತ್‌ ಯೋಜನೆಯಡಿ ನೀರು ಸರಬರಾಜು ಮಾಡಲು 23 ಡಿಎಂಎ (ಡಿಸ್ಟ್ರಿಕ್ಟ್ ಮೀಟರಿಂಗ್‌ ಏರಿಯಾ) ಗುರುತಿಸಲಾಗಿದ್ದು, ಇಲ್ಲಿಯವರೆಗೆ ಕೇವಲ 16 ಡಿಎಂಎ ಗಳು ಮಾತ್ರ ಪೂರ್ಣಗೊಂಡಿವೆ. 7ಡಿಎಂಎ ಕಾಮಗಾರಿಗಳನ್ನು ಏ.30ರೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಅನುದಾನ ಕಡಿತಗೊಳಿಸಲಾಗುವುದು ಎಂದು ತಿಳಿಸಿದರು. ಅಮೃತ್‌ ಕುಡಿಯುವ ನೀರು ಯೋಜನೆಯಡಿ ನೀರು ಸರಬರಾಜು ಕಾಮಗಾರಿಗೆ 102 ಕೋಟಿ ರೂ. ಅನುದಾನ ನೀಡಲಾಗಿದೆ. ಡಿಎಂಎ ಕಾಮಗಾರಿಗಳು ವಿಳಂಬವಾಗುತ್ತಿವೆ. ಕಳಪೆ ಗುಣಮಟ್ಟದ ಮೀಟರ್‌ ಬಾಕ್ಸ್‌ ಮತ್ತು ನಲ್ಲಿಗಳನ್ನು ಅಳವಡಿಸಲಾಗಿದೆ. ಅವುಗಳನ್ನು ಬದಲಿಸುವಂತೆ ಸೂಚಿಸಿದರು.

ಈಗಾಗಲೇ ಪೂರ್ಣಗೊಂಡ ಕಾಮಗಾರಿಗಳನ್ನು ಜಂಜಿನಿಯರ್‌ಗಳ ಸಮ್ಮುಖದಲ್ಲಿ ಜಂಟಿ ತಪಾಸಣೆ ನಡೆಸಿ, ನ್ಯೂನತೆಗಳನ್ನು ಸರಿಪಡಿಸುವಂತೆ ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್‌ ಮತ್ತು ಜಿಲ್ಲಾ ಧಿಕಾರಿ ಕೆ.ಎನ್. ರಮೇಶ್‌ ಅವರಿಗೆ ತಿಳಿಸಿದರು.

ಅಮೃತ್‌ ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ಕಾಮಗಾರಿಗಳ ಸರ್ವೇ ಕಾರ್ಯ ವರದಿ ಬಂದ ನಂತರ ಕಾಮಗಾರಿ ಕಳಪೆಯಾಗಿದ್ದಲ್ಲಿ ಗುತ್ತಿಗೆದಾರರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮುಖ್ಯ ಎಂಜಿನಿಯರ್‌ ಸಿದ್ಧನಾಯಕ್‌ ಮಾತನಾಡಿ, 63 ಸಂಪರ್ಕ ರಸ್ತೆಗಳಲ್ಲಿ ಔಟ್‌ಫಾಲ್‌ ಸಂಪರ್ಕ ನೀಡಲು ಗುತ್ತಿಗೆದಾರ ಕಾರ್ಯ ನಿರ್ಲಕ್ಷ್ಯದಿಂದ ಕಾಮಗಾರಿ ವಿಳಂಬವಾಗುತ್ತಿದೆ. 30 ಸಂಪರ್ಕ ರಸ್ತೆಗಳಲ್ಲಿ ಕಾಮಗಾರಿ ಬಾಕಿ ಉಳಿದಿದೆ ಎಂದರು.

ಜೂನ್‌ ತಿಂಗಳಲ್ಲಿ ಮಳೆಗಾಲ ಆರಂಭವಾಗಲಿದೆ. ಅದರೊಳಗೆ ಔಟ್‌ಫಾಲ್‌ ಸಂಪರ್ಕ ಕಾಮಗಾರಿಗಳು ಪೂರ್ಣಗೊಳ್ಳದಿದ್ದರೆ ಗುತ್ತಿಗೆದಾರರನ್ನು ಬ್ಲಾಕ್‌ ಲಿಸ್ಟ್‌ಗೆ ಸೇರಿಸಿ ರಾಜ್ಯದ ಯಾವ ಕಾಮಗಾರಿಗಳ ಗುತ್ತಿಗೆಯೂ ಸಿಗದ ಹಾಗೆ ಮಾಡಲಾಗುವುದು ಎಂದು ಸಿ.ಟಿ. ರವಿ ಎಚ್ಚರಿಕೆ ನೀಡಿದರು.

ಒಳಚರಂಡಿ ಹಾಗೂ ನೀರು ಸರಬರಾಜು ಕಾಮಗಾರಿಗಳಿಗೆ ಪದೇ ಪದೇ ರಸ್ತೆಗಳನ್ನು ಅಗೆದು ಸಾರ್ವಜನಿಕರಿಗೆ ಅನಗತ್ಯ ತೊಂದರೆ ನೀಡಬೇಡಿ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್‌, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಇಇ ಮಲ್ಲೇಶ್‌ ನಾಯಕ್‌, ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜು, ಇಂಜಿನಿಯರ್‌, ಗುತ್ತಿಗೆದಾರರು ಹಾಗೂ ಇತರೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.