ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಭಾರತವೇ ಮುಂದೆ
ತರಳಬಾಳು ಹುಣ್ಣೆಮೆ ಕಾರ್ಯಕ್ರಮದಲ್ಲಿ ಇಸ್ರೋ ಮಾಜಿ ಅಧ್ಯಕ್ಷ ಡಾ| ಕಿರಣ್ಕುಮಾರ್ ಬಣ್ಣನೆ
Team Udayavani, Feb 6, 2020, 3:48 PM IST
ಹಳೇಬೀಡು: ಬಾಹ್ಯಾಕಾಶ ತಂತ್ರಜ್ಞಾನ ಬಳಕೆಯಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಡಾ. ಎ. ಎಸ್.ಕಿರಣ್ ಕುಮಾರ್ ಹೇಳಿದರು.
ಹಳೇಬೀಡಿನಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆಯ ಐದನೇ ದಿನದ ಕಾರ್ಯಕ್ರಮದಲ್ಲಿ ಭಾರತೀಯ ಬಾಹ್ಯಾಕಾಶದ ಬಗ್ಗೆ ಉಪನ್ಯಾಸ ನೀಡಿದ ಅವರು, ರಾಕೆಟ್ ಎಂಜಿನ್, ತಯಾರಿಕೆಯಲ್ಲಿ ಇತರೆ ರಾಷ್ಟ್ರಗಳು ಮುಂದಿ ದ್ದರೂ ಉಪಗ್ರಹದ ತಂತ್ರಜ್ಞಾನವನ್ನು ಸಾಮಜಿಕ ಜಾಲತಾಣ ವ್ಯವಸ್ಥೆಯಲ್ಲಿ ಬಳಸಿಕೊಂಡು ಶ್ರೀ ಸಾಮಾನ್ಯರಿಗೂ ತಂತ್ರಜ್ಞಾನದ ಉಪಯೋಗ ಬಳಕೆಯಾಗುವಂತೆ ಮಾಡಿದ್ದೇವೆ. ಎಟಿಎಂ, ಹವಾಮಾನ ಮುನ್ಸೂಚನೆ, ಟೀವಿ, ಮೊಬೈಲ್ ಮೊದಲಾದ ದಿನನಿತ್ಯದ ಬಳಕೆಯಲ್ಲಿ ಉಪಗ್ರಹ ತಂತ್ರಜ್ಞಾನ ಉಪಯೋಗಿಸುತ್ತಿದ್ದೇವೆ ಎಂದರು.
ಇಸ್ರೋ ಸಾಧನೆ: ಮೊದಲು ಚಂದ್ರಯಾನ ಸಂದರ್ಭದಲ್ಲಿ ಚಂದ್ರನ ಮೇಲೆ ನೀರಿನ ಅಂಶ ಇದೆ ಎಂದು ಪತ್ತೆ ಮಾಡಿದ್ದು , ನಮ್ಮ ದೇಶದ ಉಪಗ್ರಹ. ಮಂಗಳ ಗ್ರಹದ ಕಕ್ಷೆಗೆ ಸೇರಿಸಿದ್ದು, ನಮ್ಮ ದೇಶಲ್ಲಿ ತಯಾರಾದ ಉಪಗ್ರದಿಂದ ಎಂಬುದು ಹೆಮ್ಮೆಯ ವಿಚಾರ ಎಂದರು.
ಇತ್ತೀಚಿನ ದಿನಗಳಲ್ಲಿ ಉಪಗ್ರಗಹದಿಂದ ದೇಶದಲ್ಲಿ ಮುಂದೆ ಸಂಭವಿಸುವ ನೈಸರ್ಗಿಕ ಅವಗಢಗಳನ್ನು ಪತ್ತೆ ಮಾಡಬಹುದಾಗಿದೆ. ಮೀನುಗಾರರು, ಯಾವ ಭಾಗಕ್ಕೆ ಹೋದರೆ ಹೆಚ್ಚು ಮೀನು ಸಿಗುತ್ತದೆ ಎಂಬ ಖಚಿತ ಮಾಹಿತಿಯನ್ನು ಉಪಗ್ರಹ ಒದಗಿಸುತ್ತದೆ ಇದರಿಂದ ಮೀನುಗಾರರ ಸಮಯ ಹಾಗೂ ವರ್ಷಕ್ಕೆ 15ರಿಂದ 20 ಸಾವಿರ ಕೋಟಿ ರೂ.ಗಳಷ್ಟು ಹಣ, ಪೆಟ್ರೋಲ್, ಡೀಸೆಲ್ ಖರ್ಚಾ ಗುವುದು ಉಳಿಯು ತ್ತಿದೆ ಎಂದು ಹೇಳಿದರು.
ತಂತ್ರಜ್ಞಾನ ಆವಿಷ್ಕಾರ ಅಗತ್ಯ: ಭಾರತ ದೇಶ ಆರ್ಥಿಕವಾಗಿ
ಐದನೇ ಅತಿ ದೊಡ್ಡ ರಾಷ್ಟ್ರಗಳ ಪಟ್ಟಿಯಲ್ಲಿದ್ದು, ಮೊದಲನೇ ಸ್ಥಾನಕ್ಕೆ ಬರಬೇಕಾದರೆ ದೇಶದ ಯುವಜನತೆ, ತಂತ್ರಜ್ಞಾನ ಬಳಸಿಕೊಂಡು ಹೊಸ ಆವಿಷ್ಕಾರ ಮಾಡಲು ಮುಂದಾಗಬೇಕು. ವಿಜ್ಞಾನದ ಜತೆಗೆ ನಮ್ಮ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು. ಎಲ್ಲಾ ಜಾತಿ ಧರ್ಮವರು ಒಟ್ಟಾಗಿ ಜೀವನ ನಡೆಸಿದರೆ ನಮ್ಮ ದೇಶದ ಏಳಿಗೆ ಸಾದ್ಯ ಎಂಬುದು ತರಳಬಾಳು ಶ್ರೀಗಳ ಆಶಯವಾಗಿದ್ದು, ಅದರಂತೆ ನಾವು ಜೀವನ ನಡೆಸಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು