ಚಿಕ್ಕಮಗಳೂರು: ಧಾರಾಕಾರ ಮಳೆಗೆ ಮನೆ ಕುಸಿತ; ಹೆಚ್ಚಾದ ಆತಂಕ
Team Udayavani, Jul 9, 2022, 11:27 AM IST
ಚಿಕ್ಕಮಗಳೂರು: ಮಲೆನಾಡಲ್ಲಿ ಮುಂದುವರೆದಿದ್ದು, ವರುಣನ ಅಬ್ಬರಕ್ಕೆ ಕೆಲ ಮನೆಗಳು ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದರ್ಬಾರ್ ಪೇಟೆ ಗಣೇಶ್ ಅವರ ಮನೆ ಕುಸಿದು ಬಿದ್ದು ಮನೆಯಲ್ಲಿದ್ದವರು ಪ್ರಾಣಪಯದಿಂದ ಪಾರಾಗಿದ್ದಾರೆ. ಅದೇ ರೀತಿ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಸುನಿಲ್ ಎಂಬವರಿಗೆ ಸೇರಿದ ಮನೆಯೂ ಮಳೆಯ ಅಬ್ಬರಕ್ಕೆ ಕುಸಿದು ಬಿದ್ದಿದೆ. ಮನೆ ಒಳಗಿನ ಪೀಠೋಪಕರಣಗಳು, ಸಾಮಾಗ್ರಿಗಳು ಹಾನಿಗಳಾಗಿವೆ.
ತಾಲೂಕಿನ ಮಣಬೂರಿನಲ್ಲಿ ಮಳೆಗೆ ಕಿರು ಸೇತುವೆ ಕುಸಿದಿದೆ. ಇದರಿಂದ ಚಿಕ್ಕಮಗಳೂರು – ಮಣಬೂರು ಸಂಪರ್ಕ ಕಡಿತವಾಗಿದ್ದು,ರಸ್ತೆಗಳು ಕುಸಿಯುತ್ತಿರುವುದರಿಂದ ಜನಸಾಮಾನ್ಯರಲ್ಲಿ ಆತಂಕ ಹೆಚ್ಚಾಗಿದೆ.
ಇನ್ನೊಂದೆಡೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಬಸರಿಕಟ್ಟೆ ಗ್ರಾಮದಲ್ಲಿ ಭಾರೀ ಮಳೆ ಗಾಳಿಗೆ ದರೆಗುರುಳಿ ಹತ್ತಾರು ವಿದ್ಯುತ್ ಕಂಬಗಳು ಟ್ರಾನ್ಸ್ ಫಾರ್ಮರ್ ಮುರಿದು ಬಿದ್ದಿದೆ.
ಕೊಟ್ಟಿಗೆಹಾರ ದಿಂದ ಹೊರನಾಡು ಸಂಪರ್ಕಿಸುವ ಹೆದ್ದಾರಿಗೆ ಕೆಳಗೂರು ಸಮೀಪ ಮರ ಬಿದ್ದಿದ್ದು ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಲಾಗಿದ್ದು ಈಗ ಸಂಚಾರ ಸುಗಮವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ