ಮಲೆನಾಡಿನಲ್ಲಿ ಮುಂದುವರಿದ ಮಳೆಯಬ್ಬರ: ಸಂಚಾರ ಅಸ್ತವ್ಯಸ್ತ
Team Udayavani, Oct 21, 2019, 9:58 AM IST
ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರಿನಲ್ಲಿ ಹಲವೆಡೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ.
ತರೀಕೆರೆ ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು, ಮುಗಳಿ, ಶಿವನಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ.
ಧಾರಾಕಾರ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಮುಗಳಿ – ತಮಟದಹಳ್ಳಿ ಸಂಪರ್ಕ ಸ್ಥಗಿತವಾಗಿದೆ. ಇದರೊಂದಿಗೆ ಅಜ್ಜಂಪುರ – ಶಿವನಿ ಸಂಪರ್ಕ ಕೂಡಾ ಬಂದಾಗಿದೆ.
ಸೇತುವೆ ಮುಳುಗಡೆಯಿಂದ ಜನ, ವಾಹನ ಸವಾರರು ಸಂಚಾರ ಸಾದ್ಯವಾಗದೇ ಪರದಾಟ ಪಡುತ್ತಿದ್ದಿದ್ದಾರೆ.
ರಾತ್ರಿಯಿಡೀ ಸುರಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು ಭಾರೀ ಮಳೆಯಿಂದ ಜಮೀನುಗಳು ಜಲಾವೃತವಾಗಿದೆ.
ಕಡೂರು ತಾಲೂಕಿನಲ್ಲೂ ಭಾರೀ ಮಳೆಯಾಗುತ್ತಿದ್ದು, ಮನೆಗಳಿಗೆ ಕೆರೆಯ ನೀರು ನುಗ್ಗಿದೆ. ಹಿರೇಗರ್ಜೆ ಗ್ರಾಮದ ಐದು ಮನೆಗಳಿಗೆ ನೀರು ನುಗ್ಗಿದೆ .
ಭಾರೀ ಮಳೆಗೆ ಕೆರೆಗಳು ಕೋಡಿ ಬೀಳುತ್ತಿದ್ದು, ಇದರಿಂದಾಗಿ ಗ್ರಾಮಕ್ಕೆ ನೀರು ನುಗ್ಗುತ್ತಿದೆ. ಕಳೆದ ಐದು ವರ್ಷದಲ್ಲೇ ಇದೇ ಮೊದಲ ಬಾರಿಗೆ ಕೆರೆಗಳು ಕೋಡಿ ಬೀಳುತ್ತಿದ್ದು, ಜನರು ಕಂಗಾಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ