ಮೂರು ದಿನದ ಹಿಂದೆ ಕಾಣೆಯಾಗಿದ್ದ ವೃದ್ಧೆ ಶವವಾಗಿ ಪತ್ತೆ! ಚಿಕ್ಕಮಗಳೂರನಲ್ಲಿ ಮಳೆಗೆ ಐದನೇ ಬಲಿ
Team Udayavani, Aug 9, 2020, 10:47 AM IST
ಚಿಕ್ಕಮಗಳೂರು: ಈ ಬಾರಿಯ ಮಹಾಮಳೆಗೆ ಜಿಲ್ಲೆಯಲ್ಲಿ ಐದನೇ ಜೀವಹಾನಿಯಾಗಿದೆ. ಮೂರು ದಿನದ ಹಿಂದೆ ಕಾಣೆಯಾಗಿದ್ದ ವೃದ್ಧೆಯೋರ್ವರು ಇಂದು ಶವವಾಗಿ ಪತ್ತೆಯಾಗಿದ್ದಾರೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸೋಮವತಿ ನದಿಯಲ್ಲಿ ಕೊಚ್ಚಿ ಹೋಗಿ ವೃದ್ಧೆ ಸಾವನ್ನಪ್ಪಿದ್ದಾರೆ. ಮೃತರನ್ನು ತರುವೆ ಗ್ರಾಮದ ರತ್ನಮ್ಮ (70) ಎಂದು ಗುರುತಿಸಲಾಗಿದೆ.
ಮೂರು ದಿನಗಳ ಹಿಂದೆ ಹಳ್ಳ ದಾಟಿ ಹೋಗುವಾಗ ರತ್ನಮ್ಮ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಇಂದು ಎರಡು ಕಿಲೋಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪ್ರಾಣಿಗಳ ಪರದಾಟ: ಕುದುರೆಮುಖ ಪ್ರದೇಶದ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಭದ್ರೆಯ ಸುಳಿಗೆ ಸಿಲುಕಿ ಪ್ರಾಣಿಗಳು ಒದ್ದಾಡುತ್ತಿವೆ. ಕಳಸದ ಕೋಟೆ ಹೊಳೆ ಸೇತುವೆ ಬಳಿ ಭದ್ರಾ ನದಿಯಲ್ಲಿ ಕಡವೆಯ ಮೃತದೇಹವೊಂದು ತೇಲಿಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ