ಅವಾಂತರ ಸೃಷ್ಟಿಸಿದ ಧಾರಾಕಾರ ಮಳೆ
ರಾಜಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯದ ಕಾರಣ ಮನೆಗಳಿಗೆ ನೀರು ನುಗ್ಗಿದೆ.
Team Udayavani, Mar 25, 2022, 6:31 PM IST
ಚಿಕ್ಕಮಗಳೂರು: ವರ್ಷದ ಮೊದಲ ಮಳೆ ಚಿಕ್ಕಮಗಳೂರು ನಗರದಲ್ಲಿ ಅವಾಂತರ ಸೃಷ್ಟಿಸಿದೆ. ಬುಧವಾರ ರಾತ್ರಿ ಸುರಿದ ಬಾರೀ ಮಳೆಗೆ ಚರಂಡಿಗಳು ಉಕ್ಕಿ ಹರಿದಿವೆ. ಮಳೆ ನೀರು ಮನೆಗಳಿಗೆ ನುಗ್ಗಿ ಜನ ನರಕಯಾತನೆ ಅನುಭವಿಸುವಂತೆ ಮಾಡಿದೆ.
ಬುಧವಾರ ರಾತ್ರಿ ಗುಡುಗು, ಸಿಡಲು ಸಹಿತವಾಗಿ ಆರಂಭವಾದ ಮಳೆ ಮಧ್ಯರಾತ್ರಿವರೆಗೂ ಎಡಬಿಡದೆಸುರಿದಿದೆ. ಮಳೆಯ ಆರ್ಭಟಕ್ಕೆ ಬೋಳರಾಮೇಶ್ವರ ದೇವಸ್ಥಾನ ಹಿಂಭಾಗ, 13ನೇ ವಾರ್ಡ್ ಶಂಕರಪುರ ಬಡಾವಣೆ, 19ನೇ ವಾರ್ಡ್ ಪಂಪನಗರ, ಮಾಕೇರ್ಟ್ ರಸ್ತೆ, ಕೆ.ಎಂ.ರಸ್ತೆ ಸೇರಿದಂತೆ ಇತರೆ ಬಡಾವಣೆಗಳಲ್ಲಿ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ.
ತಗ್ಗು ಪ್ರದೇಶಗಳಲ್ಲಿ ಭಾರೀ ಪ್ರಮಾಣದ ನೀರು ಹರಿದ ಪರಿಣಾಮ ಚರಂಡಿಗಳಲ್ಲಿನ ಕಸ ರಸ್ತೆ ತುಂಬೆಲ್ಲ ಹರಡಿಕೊಂಡಿದೆ. ಭಾರೀ ಪ್ರಮಾಣದ ನೀರು ರಸ್ತೆ ಮೇಲೆ ಹರಿದಿದ್ದು ವಾಹನ ಸವಾರರು ಪರದಾಡಿದರು. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಗಳಲ್ಲಿದ್ದ ಸಾಮಾಗ್ರಿಗಳು ನೀರು ಪಾಲಾಗಿ ಭಾರೀ ನಷ್ಟವಾಗಿದೆ. ನಗರ ಪ್ರದೇಶದಲ್ಲಿ ಚರಂಡಿಗಳು ಕಸ ಕಡ್ಡಿಗಳಿಂದ ತುಂಬಿದ್ದು, ರಾಜಕಾಲುವೆ ಸ್ವತ್ಛಗೊಳಿದ ಪರಿಣಾಮ ಮಳೆ ನೀರು ರಸ್ತೆ ಮೇಲೆ ಹರಿದು ಮನೆಗಳಿಗೆ ನುಗ್ಗಿದೆ. ನಗರಸಭೆಯ ಬೇಜಬ್ದಾರಿತನವೇ ಇದಕ್ಕೆ ಕಾರಣವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭೇಟಿ-ಪರಿಶೀಲನೆ: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಾದ ಟಿಪ್ಪುನಗರ, ಶಂಕರಪುರ, ಉಪ್ಪಳ್ಳಿ, ಉಂಡೇದಾಸರಹಳ್ಳಿ ಮತ್ತೀತರೇ ಕಡೆಗಳಿಗೆ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣು ಗೋಪಾಲ್ ಮತ್ತು ಅ ಧಿಕಾರಿಗಳ ತಂಡ ಗುರುವಾರ ಬೆಳಿಗ್ಗೆ ಭೇಟಿನೀಡಿ ಪರಿಶೀಲನೆ ನಡೆಸಿತು. ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮಾತನಾಡಿ, ನಗರದ ತಗ್ಗು ಪ್ರದೇಶಗಳಿಗೆ ಮಳೆನೀರು ನುಗ್ಗಿದ್ದು, ಹಾನಿಯ ಪರಿಶೀಲನೆ ನಡೆಸಲಾಗುತ್ತಿದೆ. ಉಪ್ಪಳ್ಳಿಯಲ್ಲಿ ಮನೆಗೋಡೆ ಕುಸಿದು ಬಿದ್ದಿದೆ. ಟಿಪ್ಪುನಗರದ ಕೆಲವು ಮನೆಗಳಿಗೆ ನೀರು ನುಗ್ಗಿದೆ. ಬಡಾವಣೆಯ ಸಮಸ್ಯೆ ಗಳ ಬಗ್ಗೆ ಜನರೊಂದಿಗೆ ಚರ್ಚಿಸಿದ್ದು ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರಾಜಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯದ ಕಾರಣ ಮನೆಗಳಿಗೆ ನೀರು ನುಗ್ಗಿದೆ. ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆಗಳು ಗಮನಕ್ಕೆ ಬಂದಿದ್ದು ವಾರ್ಡ್ಗಳ ಮೂಲಭೂತ ಸೌಕರ್ಯಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಎ.ಸಿ.ಕುಮಾರ್, ರೂಪಾಕುಮಾರ್, ನಗರಸಭೆ ಎಇಇ ಕುಮಾರ್, ಆರೋಗ್ಯ ಪರಿವೀಕ್ಷಕ ರಂಗಪ್ಪ, ಸದಸ್ಯರಾದ ಜಾವೀದ್, ಗೋಪಿ ಇದ್ದರು.
ಜಿಲ್ಲಾದ್ಯಂತ ವರ್ಷಧಾರೆ
ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲಾಧ್ಯಂತ ಬುಧವಾರ ಮಳೆ ಆರ್ಭಟಿಸಿದೆ. ಚಿಕ್ಕಮ ಗಳೂರಿನಲ್ಲಿ 54.3, ವಸ್ತಾರೆ 12, ಜೋಳದಾಳ್ 57, ಆಲ್ದೂರು 5.2, ಕೆ.ಆರ್.ಪೇಟೆ 4, ಅತ್ತಿಗುಂಡಿ 13, ಸಂಗಮೇಶ್ವರಪೇಟೆ 11.4, ಬೆ„ರಾವಳ್ಳಿ 34.2 ಮಿ.ಮೀ. ಮಳೆಯಾಗಿದೆ. ಕಡೂರು 2, ಬೀರೂರು 5.2, ಸಖರಾಯಪಟ್ಟಣ 3, ಎಮ್ಮೆದೊಡ್ಡಿ 2 ಮೀ.ಮೀ. ಮಳೆ ಯಾಗಿದೆ. ಶೃಂಗೇರಿ 16, ಕಿಗ್ಗಾ 16, ಕೆರೆಕಟ್ಟೆ 30.6 ಮಿ.ಮೀ. ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ 5, ಗೋಣಿಬೀಡು 4.2 ಕಳಸ 5.2 ಮಿ.ಮೀ. ಮಳೆಯಾಗಿದೆ.
ತರೀಕೆರೆ 2.2, ಲಕ್ಕವಳ್ಳಿ 2.2, ರಂಗೇನಹಳ್ಳಿ 3, ಲಿಂಗದಹಳ್ಳಿ 6.8, ತ್ಯಾಗಬಾಗಿ 1 ಮಿ. ಮೀ. ಮಳೆಯಾಗಿದೆ. ಕೊಪ್ಪ 29, ಹರಿಹರಪುರ 56, ಜಯಪುರ 40, ಬಸರೀಕಟ್ಟೆ 21.9, ಕಮ್ಮರಡಿ 90.2 ಮಿ.ಮೀ.ಮಳೆಯಾಗಿದೆ. ನರಸಿಂಹರಾಜಪುರ 23, ಬಾಳೆಹೊನ್ನೂರು 27.8, ಮಾಗುಂಡಿ 15 ಮಿ.ಮೀ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ