ಮಲೆನಾಡು, ಕರಾವಳಿಯಲ್ಲಿ ಭಾರಿ ಗಾಳಿ ಮಳೆ: ಮರ, ವಿದ್ಯುತ್ ಕಂಬ ಬಿದ್ದು ಜನಜೀವನ ಅಸ್ತವ್ಯಸ್ಥ
Team Udayavani, Aug 4, 2020, 9:58 AM IST
ಉಡುಪಿ/ಚಿಕ್ಕಮಗಳೂರು: ಕರ್ನಾಟಕ ಕರಾವಳಿ, ಮಲೆನಾಡು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಈ ಭಾಗದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿದೆ.
ಉಡುಪಿ, ಕಾರ್ಕಳ, ಮಂಗಳೂರು, ಬಂಟ್ವಾಳ ಭಾಗದಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಹಲವು ಕಡೆ ಗಾಳಿ ಮಳೆಗೆ ಮರಗಳು ಧರೆಗುರುಳಿವೆ.
ಚಿಕ್ಕಮಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಮಲೆನಾಡು ಭಾಗದ ಮೂಡಿಗೆರೆ, ಕೊಪ್ಪ ಶೃಂಗೇರಿ, ನರಸಿಂಹರಾಜಪುರ ತಾಲೂಕು ವ್ಯಾಪ್ತಿಯಲ್ಲಿ ಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದ್ದು, ಸೋಮವಾರ ಬೆಳಗ್ಗೆಯಿಂದ ಮಂಗಳವಾರ ಬೆಳಗ್ಗೆವರೆಗೆ ಎಡಬಿಡದೇ ಸುರಿಯುತ್ತಿದೆ.
ಇದನ್ನೂ ಓದಿ: ವಿಪಕ್ಷ ನಾಯಕ ಸಿದ್ದರಾಯಯ್ಯ ಗೆ ಕೋವಿಡ್ ಸೋಂಕು ದೃಢ: ಆಸ್ಪತ್ರೆಗೆ ದಾಖಲು
ಭಾರೀ ಮಳೆಗೆ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಹೀಗಾಗಿ ಹಲೆವೆಡೆ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯವಾಗಿದೆ. ನಿರಂತರ ಮಳೆಯಿಂದಾಗಿ ಮಲೆನಾಡಿನ ತುಂಗಾ, ಭದ್ರಾ, ಹೇಮಾವತಿ ನದಿಗಳು ಸೇರಿದಂತೆ ಹಳ್ಳಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ಹೊರನಾಡು- ಕಳಸ ಸಂಪರ್ಕದ ಭದ್ರಾ ನದಿಯ ಹೆಬ್ಬಾಳೆ ಸೇತುವೆ ಮುಳುಗಡೆಯಾಗುವ ಸಾಧ್ಯತೆ ಇದೆ. ಇನ್ನು ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲೂ ನಿರಂತರ ಮಳೆಯಾದ ಕಾರಣ ಮರಗಳು, ಗುಡ್ಡದ ಮಣ್ಣು ರಸ್ತೆಗುರುಳುತ್ತಿದೆ. ಚಾರ್ಮಾಡಿ ಘಾಟ್ ರಸ್ತೆ ಸಂಪರ್ಕ ಕಡಿತವಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಇಂದು ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Siddapura ಹೆಂಗವಳ್ಳಿ: ಮರದಿಂದ ಬಿದ್ದು ಆಸ್ಪತ್ರೆ ಸೇರಿದ್ದ ಕೃಷಿಕ ಚಿಕಿತ್ಸೆ ಫಲಿಸದೆ ಸಾವು
Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು
Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು