ಈ ಬಾರಿಯೂ ಕಾಫಿನಾಡಲ್ಲಿ ಅತಿವೃಷ್ಟಿ ಹಾನಿ

ಭಾರೀ ಮಳೆಗೆ 142.41 ಕೋಟಿ ರೂ. ನಷ್ಟದ ಅಂದಾಜು | ಜಿಲ್ಲಾಡಳಿತದಿಂದ ಸರಕಾರಕ್ಕೆ ವರದಿ ಸಲ್ಲಿಕೆ

Team Udayavani, Sep 16, 2021, 5:25 PM IST

ಈ ಬಾರಿಯೂ ಕಾಫಿನಾಡಲ್ಲಿ ಅತಿವೃಷ್ಟಿ ಹಾನಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಬಾರಿಯೂ ಅತೀವೃಷ್ಟಿಯಿಂದ ಅಪಾರ ಹಾನಿಯಾಗಿದೆ. ಜಿಲ್ಲೆಯ ಮಲೆನಾಡು
ಭಾಗದಲ್ಲಿ ಅತಿವೃಷ್ಟಿಯಿಂದ ಈ ಬಾರಿಯೂ ಜನ ತೊಂದರೆಗೀಡಾಗಿದ್ದು, ಸತತ ಮೂರ್‍ನಾಲ್ಕು ವರ್ಷದ ಮಳೆ ಅಬ್ಬರಕ್ಕೆ ಜನ ತತ್ತರಿಸಿಹೋಗಿದ್ದಾರೆ.

ಈ ಬಾರಿ ಜುಲೈ 21ರಿಂದ ಆಗಸ್ಟ್‌ 11ರ ವರೆಗೆ ಸುರಿದ ಮಳೆಗೆ 142.41 ಕೋಟಿ ರೂ. ನಷ್ಟವಾಗಿದೆ ಎಂದು ಈಗಾಗಲೇ ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಜಿಲ್ಲಾಡಳಿತ, ಹಾಗೂ ತೊಂದರೆಗೊಳಗಾದ ಜನ ಸರ್ಕಾರದಿಂದ ಅತಿವೃಷ್ಟಿ ಪರಿಹಾರದ ನೀರಿಕ್ಷೆಯಲ್ಲಿದ್ದಾರೆ.

ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಹಾಗೂ ಪ್ರವಾಹದಿಂದ ಜೀವಹಾನಿ, ಮನೆ, ಬೆಳೆ, ಸಾರ್ವಜನಿಕ ಮೂಲ ಸೌಕರ್ಯಗಳಿಗೆ ಅಪಾರ
ಪ್ರಮಾಣದ ಹಾನಿಯಾಗಿತ್ತು. ಮೂರು ವರ್ಷಗಳಿಂದ ಚಿಕ್ಕಮಗಳೂರು ಸೇರಿದಂತೆ ಮೂಡಿಗೆರೆ, ಕೊಪ್ಪ, ಶೃಂಗೇರಿ ಮತ್ತು ನರಸಿಂಹರಾಜಪುರ ತಾಲೂಕುಗಳಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ಹಾನಿಯಾಗಿತ್ತು. ಈ ವರ್ಷ ಸಹ ಮಲೆನಾಡು ಭಾಗದಲ್ಲಿ ಭೂಕುಸಿತ, ಅಪಾರ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ. ಅತೀಹೆಚ್ಚು ಹಾನಿಯಾಗಿರುವ ತಾಲೂಕುಗಳನ್ನು ಅತಿವೃಷ್ಟಿ ಪೀಡಿತ ತಾಲೂಕುಗಳೆಂದು ಘೋಷಿಸುವಂತೆ ಜಿಲ್ಲಾಡಳಿತ ಸರ್ಕಾರಕ್ಕೆ ಮನವಿ ಮಾಡಿದೆ. ಜಿಲ್ಲೆಯ ನರಸಿಂಹರಾಜಪುರ ತಾಲೂಕು ಪ್ರವಾಹ ಪೀಡಿತ ತಾಲೂಕು ಎಂದು ಸರ್ಕಾರ ಈಗಾಗಲೇ ಘೋಷಿಸಿದೆ.

ವಿವಿಧ ಇಲಾಖೆ ಆಸ್ತಿಗೆ ಹಾನಿ: ಈ ವರ್ಷ ಜಿಲ್ಲಾದ್ಯಂತ ಸುರಿದ ಮಳೆಯಿಂದ ಚಿಕ್ಕಮಗಳೂರು ತಾಲೂಕಿನಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಹಾಗೂ ಚಿಕ್ಕಮಗಳೂರು ಮತ್ತು ನರಸಿಂಹರಾಜಪುರ ತಾಲೂಕಿನಲ್ಲಿ ತಲಾ 1 ಜಾನುವಾರು ಮೃತಪಟ್ಟಿವೆ. 535.11 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು, 222 ಮನೆಗಳಿಗೆ ಧಕ್ಕೆಯಾಗಿದೆ. ಲೋಕೋಪಯೋಗಿ ಇಲಾಖೆಯ 50.53 ಕೋಟಿ ರೂ, ಗ್ರಾಮೀಣಾಭಿವೃದ್ಧಿ ಮತ್ತು
ಪಂಚಾಯತ್‌ ರಾಜ್‌ ಇಲಾಖೆಯಲ್ಲಿ 77.50 ಕೋಟಿ ರೂ. ಸಣ್ಣ ನೀರಾವರಿ ಇಲಾಖೆ 9.38 ಕೋಟಿ ರೂ. ಯುಎಲ್‌ಬಿಎಸ್‌ ನಲ್ಲಿ 89ಲಕ್ಷ ರೂ. ಮೆಸ್ಕಾಂ 54.48 ಲಕ್ಷ ರೂ.ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ:ಜಮ್ಮು ಕಾಶ್ಮೀರ್ ಗುಂಡಿನ ಮೊರೆತಗಳ ನಡುವೆ ಅರಳಿದ ಕ್ರಿಕೆಟ್ ಹೂವು

ಎಲ್ಲಿ ಎಷ್ಟು ಹಾನಿ:? ಚಿಕ್ಕಮಗಳೂರು ತಾಲೂಕಿನಲ್ಲಿ 6 ಹೆಕ್ಟೇರ್‌, ಕೊಪ್ಪ 8.1 ಹೆಕ್ಟೇರ್‌, ಶೃಂಗೇರಿ 7.60 ಹೆಕ್ಟೇರ್‌, ನರಸಿಂಹರಾಜಪುರ 511 ಹೆಕ್ಟೇರ್‌, ತರೀಕೆರೆ 0.50 ಹೆಕ್ಟೇರ್‌ ಸೇರಿದಂತೆ ಒಟ್ಟು 533.11 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ. ತರೀಕೆರೆ ತಾಲೂಕಿನಲ್ಲಿ ಗರಿಷ್ಠ ಪ್ರಮಾಣದಲ್ಲಿ ಮನೆಗಳಿಗೆ ಹಾನಿಯಾಗಿವೆ. ಕೊಪ್ಪ ತಾಲೂಕಿನಲ್ಲಿ ಕನಿಷ್ಠ ಪ್ರಮಾಣದ ಮನೆಗಳಿಗೆ ಹಾನಿಯಾಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 23 ಮನೆಗಳಿಗೆ ಹಾನಿಯಾಗಿದೆ. ಮೂಡಿಗೆರೆ ತಾಲೂಕಿನಲ್ಲಿ 22 ಮನೆಗಳಿಗೆ ಹಾನಿಯಾಗಿದೆ. ಕೊಪ್ಪ ತಾಲೂಕಿನಲ್ಲಿ 8, ಶೃಂಗೇರಿ 10, ನರಸಿಂಹರಾಜಪುರ 29, ಕಡೂರು 31, ತರೀಕೆರೆ 62 ಹಾಗೂ ಅಜ್ಜಂಪುರ ತಾಲೂಕಿನಲ್ಲಿ 37ಮನೆಗಳಿಗೆ ಹಾನಿಯಾಗಿದೆ.

ರಸ್ತೆ, ಸೇತುವೆಗಳಿಗೆ ಹೊಡೆತ: ಲೋಕೋಪಯೋಗಿ ಇಲಾಖೆಗೆ ಸಂಬಂ ಧಿಸಿದಂತೆ ಚಿಕ್ಕಮಗಳೂರು ತಾಲೂಕಿನಲ್ಲಿ 5.75 ಕೋಟಿ ರೂ., ಮೂಡಿಗೆರೆ 25.78 ಕೋಟಿ ರೂ., ಕೊಪ್ಪ 5.40 ಕೋಟಿ ರೂ., ಶೃಂಗೇರಿ 7.15 ಕೋಟಿ ರೂ., ನರಸಿಂಹರಾಜಪುರ 2.90 ಕೋಟಿ. ರೂ., ತರೀಕೆರೆ 3.45ಕೋಟಿ ರೂ., ಅಜ್ಜಂಪುರ 10 ಲಕ್ಷ ರೂ. ರಸ್ತೆಗಳು, ಸೇತುವೆ, ಮೋರಿಗಳಿಗೆ ಹಾನಿಯಾಗಿದೆ.

ಕೆರೆಕಟ್ಟೆಗಳಿಗೆ ಧಕ್ಕೆ: ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆಗೆ ಸಂಬಂಧಿಸಿ ಚಿಕ್ಕಮಗಳೂರು ತಾಲೂಕಿನಲ್ಲಿ 1.7 ಕೋಟಿ ರೂ.,  ಮೂಡಿಗೆರೆ 1.57 ಕೋಟಿ ರೂ., ಕೊಪ್ಪ 17.81ಕೋಟಿ, ಶೃಂಗೇರಿ 15.36, ನರಸಿಂಹರಾಜಪುರ 41.21 ಕೋಟಿ, ತರೀಕೆರೆ 48 ಲಕ್ಷ ರೂ. ಸೇರಿದಂತೆ ಒಟ್ಟು 77.50 ಕೋಟಿ ರೂ.ನಷ್ಟು ಹಾನಿಯಾಗಿದ್ದರೆ, ಸಣ್ಣನೀರಾವರಿ ಇಲಾಖೆಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ 3.5 ಕೋಟಿ, ಮೂಡಿಗೆರೆ 60 ಲಕ್ಷ, ಕೊಪ್ಪ 19ಲಕ್ಷ, ನರಸಿಂಹರಾಜಪುರ 84 ಲಕ್ಷ, ತರೀಕೆರೆ 4.70 ಕೋಟಿ ರೂ. ಕೆರೆಕಟ್ಟೆಗಳಿಗೆ ಧಕ್ಕೆಯಾಗಿದೆ.

ಮೆಸ್ಕಾಂಗೆ ನಷ್ಟ: ಭಾರೀ ಮಳೆಯಿಂದ ಮೆಸ್ಕಾಂ ಇಲಾಖೆಗೆ ಸಂಬಂಧಪಟ್ಟಂತೆ ಒಟ್ಟು 54.48 ಲಕ್ಷ ರೂ. ನಷ್ಟವಾಗಿದೆ. ಚಿಕ್ಕಮಗಳೂರು ತಾಲೂಕು 14.19 ಲಕ್ಷ ರೂ., ಮೂಡಿಗೆರೆ 5.66, ಲಕ್ಷ, ಕೊಪ್ಪ 14.07 ಲಕ್ಷ, ಶೃಂಗೇರಿ 4.62 ಲಕ್ಷ,ನ.ರಾ.ಪುರ10.94 ಲಕ್ಷ ರೂ. ಕಡೂರು 2.65 ಲಕ್ಷ, ತರೀಕೆರೆ 1.88 ಲಕ್ಷ ಹಾಗೂ ಅಜ್ಜಂಪುರ 47 ಸಾವಿರ ರೂ.ನಷ್ಟವಾಗಿದ್ದರೆ, ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ 65 ಲಕ್ಷ, ಮೂಡಿಗೆರೆ 14 ಲಕ್ಷ, ನರಸಿಂಹರಾಜಪುರ 10 ಲಕ್ಷ ರೂ. ನಷ್ಟವಾಗಿದೆ ಎಂದು ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.