ಬಿಸಿಲ ಪ್ರತಾಪಕ್ಕೆ ಬಸವಳಿದ ಕಾಫಿನಾಡಿನ ಜನತೆ!


Team Udayavani, Mar 28, 2021, 7:56 PM IST

ಗಜಗ್ಜ

ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಮತ್ತು ಬಯಲುಸೀಮೆ ಭಾಗದ ಜನತೆ ಬಿಸಿಲ ಝಳಕ್ಕೆ ತತ್ತರಿಸಿ ಹೋಗಿದ್ದು, ಹಗಲು ಹೊತ್ತು ತಂಪು ಪಾನೀಯಗಳ ಮೊರೆ ಹೋದರೆ, ರಾತ್ರಿ ವೇಳೆ ಫ್ಯಾನ್‌, ಕೂಲರ್‌ಗಳ ಮೊರೆ ಹೋಗುವಂತಾಗಿದೆ.

ಪ್ರತಿ ನಿತ್ಯ ವಾತಾವರಣದಲ್ಲಿ ಉಷ್ಣಾಂಶ 30 ರಿಂದ 35 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಮನೆಯಿಂದ ಹೊರಹೋಗದಂತಾಗಿದೆ. ಮನೆ ಮತ್ತು ಕಚೇರಿ ಯಲ್ಲಿ ಫ್ಯಾನ್‌, ಕೂಲರ್‌ಗಳ ಮೊರೆ ಹೋಗುವಂತಾಗಿದೆ. ರಾತ್ರಿ ವಾತಾವರಣದಲ್ಲಿನ ಝಳದ ಜತೆಗೆ ಸೊಳ್ಳೆಗಳ ಕಾಟದಿಂದ ಪರಿತಪಿಸುವಂತಾಗಿದೆ.

ಬಿಸಲ ಝಳ ಹೆಚ್ಚಾಗುತ್ತಿದ್ದಂತೆ ತಂಪು ಪಾನೀಯಗಳಿಗೆ ಬೇಡಿಕೆ ಉಂಟಾಗಿದೆ. ಎಳನೀರು, ಕಬ್ಬಿನಹಾಲು, ಜ್ಯೂಸ್‌, ಕಲ್ಲಂಗಡಿ, ಕರಬೂಜಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಜೂಸ್‌ ಅಂಗಡಿಗಳತ್ತ ಜನರು ಹರಿದು ಬರುತ್ತಿದ್ದಾರೆ. ಪೋಷಕರು, ಮಕ್ಕಳಾದಿಯಾಗಿ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಇನ್ನು ಬಿಸಿಲ ಝಳಕ್ಕೆ ಮನೆಯಿಂದ ಹೊರಬರುತ್ತಿಲ್ಲ.

ರಜೆ ದಿನಗಳಲ್ಲಿ ಬೇಸರ ಕಳೆಯಲು ಮನೆಯಿಂದ ಹೊರಬಂದರೂ ಮರದ ನೆರಳು, ಉದ್ಯಾನವನಗಳಲ್ಲಿ ತಂಪಾದ ಹುಲ್ಲು ಹಾಸಿನ ಮೇಲೆ ಕಲ್ಲುಹಾಸಿನ ಮೇಲೆ ಕುಳಿತು ದಣಿವಾರಿಸಿಕೊಳ್ಳುವ ಮೂಲಕ ಸಮಯ ಕಳೆಯುತ್ತಿದ್ದಾರೆ. ಹತ್ತನೇ ವಯಸ್ಸಿನಿಂದ ಎಳನೀರು ಮಾರಾಟ ಮಾಡುತ್ತಿದ್ದೇನೆ. ಆಗ ಒಂದು ಎಳನೀರಿಗೆ 1ರೂ. ಇತ್ತು. ಇಂದು ಒಂದು ಎಳನೀರಿಗೆ 30ರಿಂದ 35ರೂ.ಗೆ ಮಾರಾಟ ಮಾಡುತ್ತಿದ್ದೇನೆ.

ಬೇಸಿಗೆ ಆರಂಭಕ್ಕೂ ಮೊದಲು ಪ್ರತೀ ದಿನ 100ರಿಂದ 150 ಎಳನೀರು ಮಾರಾಟವಾಗುತ್ತಿತ್ತು. ಈಗ ದಿನಕ್ಕೆ 500 ಎಳನೀರು ಮಾರಾಟವಾಗುತ್ತಿದೆ ಎಂದು ನಗರದ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಎಳನೀರು ವ್ಯಾಪಾರ ಮಾಡುವ ಮಹಮದ್‌ ಹೇಳುತ್ತಾರೆ. ಬೇಸಿಗೆ ಕಾಲ ಆರಂಭವಾಗಿದ್ದು, ಬಿಸಿಲ ಬೇಗೆಯ ದಣಿವಾರಿಸಿಕೊಳ್ಳಲು ಬಹುತೇಕ ಜನರು ಎಳನೀರು ಮೊರೆ ಹೋಗಿದ್ದು, ಎಳನೀರು ಹಾಸನ ಮತ್ತು ಸಖರಾಯಪಟ್ಟಣದಿಂದ ತರಿಸಿಕೊಳ್ಳುತ್ತೇವೆ ಎಂದರು.

ಕಳೆದ 25 ವರ್ಷಗಳಿಂದ ಕಬ್ಬಿನಹಾಲು ವ್ಯಾಪಾರ ಮಾಡುತ್ತಿದ್ದು, ಬೇಸಿಗೆ ಆರಂಭವಾಗುತ್ತಿದ್ದಂತೆ ಜನರು ಕಬ್ಬಿನ ಹಾಲಿನ ಕಡೆ ಮುಖ ಮಾಡುತ್ತಾರೆ. ಕಬ್ಬಿನಹಾಲು ದೇಹವನ್ನು ಮಾತ್ರ ತಂಪಾಗಿಸುವುದಲ್ಲದೆ, ಇದು ಆರೋಗ್ಯಕ್ಕೂ ಬಹು ಉಪಯುಕ್ತ ಪಾನೀಯವಾಗಿದೆ. ಪ್ರಸ್ತುತ ದಿನಕ್ಕೆ 1 ಸಾವಿರದವರೆಗೂ ವ್ಯವಹಾರವಾಗುತ್ತದೆ ಎಂದು ಕಬ್ಬಿನ ಹಾಲು ವ್ಯಾಪಾರಿ ಮುಜೀಬ್‌ ಹೇಳುತ್ತಾರೆ. ಇನ್ನು ಕಲ್ಲಂಗಡಿ ಹಣ್ಣುಗಳಿಗೂ ಬೇಡಿಕೆ ಹೆಚ್ಚಾಗಿದ್ದು, ನಗರದ ಪ್ರಮುಖ ರಸ್ತೆ ಇಕ್ಕೆಲಗಳಲ್ಲಿ ಕಲ್ಲಂಗಡಿ ಅಂಗಡಿಗಳನ್ನು ತೆರೆದಿದ್ದು, ಅಲ್ಲಿಯೇ ಮಾರಾಟ ಮಾಡಲಾಗುತ್ತಿದೆ.

ಕೆಲವರು ಸ್ಥಳದಲ್ಲೇ ಕಲ್ಲಂಗಡಿ ಹಣ್ಣು ಖರೀದಿಸಿ ತಿಂದರೆ ಬಹುತೇಕ ಗ್ರಾಹಕರು ಹಣ್ಣುಗಳನ್ನು ಮನೆಗಳಿಗೆ ತಗೆದುಕೊಂಡು ಹೋಗುತ್ತಿದ್ದಾರೆ. ಕಲ್ಲಂಗಡಿ ಹಣ್ಣು ಕೆ.ಜಿಗೆ 20ರೂ.ಗೆ ಮಾರಾಟ ಮಾಡಲಾಗುತ್ತಿದ್ದು, ಒಂದು ಲಾಟ್‌ ಕಲ್ಲಂಗಡಿ ಹಣ್ಣುಗಳನ್ನು ಹಾಕಲಾಗಿತ್ತು. ಎಲ್ಲಾ ಹಣ್ಣುಗಳು ವ್ಯಾಪಾರವಾಗಿ ಐದಾರು ಹಣ್ಣುಗಳು ಮಾತ್ರ ಉಳಿದುಕೊಂಡಿವೆ ಎನ್ನುತ್ತಾರೆ ಕಲ್ಲಂಗಡಿ ವ್ಯಾಪಾರಿ ಫರ್ವಿಜ್‌. ಕಬೂìಜ ಹಣ್ಣಿಗೂ ಬೇಡಿಕೆ ಬಂದಿದ್ದು, ಆಂದ್ರದಿಂದ ಟನ್‌ಗಟ್ಟಲೇ ತರಿಸಲಾಗುತ್ತಿದೆ.

ಐದಾರು ವರ್ಷಗಳಿಂದ ಕಬೂìಜ ವ್ಯಾಪಾರ ಮಾಡುತ್ತಿದ್ದು, ಕೆಜಿಗೆ 25ರೂ.ಗೆ ಮಾರಾಟ ಮಾಡಲಾಗುತ್ತಿದೆ. ಬೇಸಿಗೆಯಾಗಿರುವುದರಿಂದ ಜನರು ಹಣ್ಣುಗಳನ್ನು ಖರೀದಿಸಿ ಮನೆಗೆ ಕೊಂಡೊಯ್ಯುತ್ತಾರೆ ಎನ್ನುತ್ತಾರೆ ಕಬೂìಜ ವ್ಯಾಪಾರಿ ಅಪ್ಪು. ಮಲೆನಾಡು ಜಿಲ್ಲೆಯಲ್ಲೂ ಬಿಸಿಲಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಿಸಿಲ ಝಳದಿಂದ ತಪ್ಪಿಸಿಕೊಳ್ಳಲು ಕೆಲವರು ತಂಪು ಪಾನೀಯದ ಮೊರೆ ಹೋದರೆ, ಈ ಬೇಸಿಗೆ ಕಾಲ ಮುಗಿದರೆ ಸಾಕಪ್ಪ ಎಂದು ದೇವರ ಮೊರೆ ಹೋಗುವಂತಾಗಿದೆ. ಒಟ್ಟಾರೆ ಮಲೆನಾಡಿನ ಜನತೆಯೂ ಬಿಸಿಲ ಝಳಕ್ಕೆ ತತ್ತರಿಸಿ ಹೋಗಿದ್ದಾರೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.