ಮಲೆನಾಡು ಮಳೆ: ಮತ್ತೆ ಮುಳುಗುವ ಭೀತಿಯಲ್ಲಿ ಕಳಸ ಹೆಬ್ಬಾಳೆ ಸೇತುವೆ
Team Udayavani, Sep 8, 2019, 10:33 AM IST
ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ನದಿ ತೊರೆಗಳು ಉಕ್ಕಿ ಹರಿಯುತ್ತಿದೆ. ಜಿಲ್ಲೆಯ ಭದ್ರಾ ನದಿ ಮೈದುಂಬಿ ಹರಿಯುತ್ತಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆ ಭೀತಿ ಎದುರಿಸುತ್ತಿದೆ.
ಭಾರಿ ಮಳೆಯಿಂದಾಗಿ ಭದ್ರಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಕಳಸ – ಹೊರನಾಡಿನ ನಡುವೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯ ಹಂತದಲ್ಲಿದೆ. ಸೇತುವೆ ಮುಳುಗಡೆಗೆ ಒಂದೇ ಒಂದು ಅಡಿಯಷ್ಟು ಬಾಕಿ ಇದ್ದು, ಕುದುರೆಮುಖ, ಕಳಸ, ಸಂಸೆ, ಬಾಳೆಹೊಳೆ ವ್ಯಾಪ್ತಿಯಲ್ಲಿ ಭಾಗದಲ್ಲಿ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆಯಾಗುವ ಭೀತಿ ಎದುರಿಸುತ್ತಿದೆ.
ಒಂದು ವೇಳೆ ಹೆಬ್ಬಾಳೆ ಸೇತುವೆ ಮುಳುಗಡೆಯಾದರೆ ಕಳಸ ಹೊರನಾಡಿನ ಸಂಪರ್ಕ ಸಂಪೂರ್ಣ ಕಡಿತವಾಗಲಿದೆ. ಕಳೆದ ತಿಂಗಳು ಸುರಿದಿದ್ದ ಭಾರಿ ಮಳೆಯಿಂದಾಗಿ ಹೆಬ್ಬಾಳೆ ಸೇತುವೆ ನಾಲ್ಕು ದಿನಗಳ ಕಾಲ ಮುಳುಗಡೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ