ಹಿಂದೂ ಧರ್ಮ ಸರ್ವಶ್ರೇಷ್ಠ: ಸಚಿವ ಹೆಗಡೆ
Team Udayavani, Nov 8, 2017, 7:11 PM IST
ಮೂಡಿಗೆರೆ: ಮನುಕುಲದ ಉದ್ಧಾರಕ್ಕಾಗಿ ಸಾವಿರ ವರ್ಷ ಪರಿಪಾಲಿಸಿಕೊಂಡು ಬಂದ ಹಿಂದೂ ಧರ್ಮ ಸರ್ವ ಶ್ರೇಷ್ಠ ಧರ್ಮ. ಈ ಧರ್ಮದ ಬಗ್ಗೆ ಪರಿಕಲ್ಪನೆ ಇಲ್ಲದವರು ಧರ್ಮದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಹೇಳಿದರು.
ಹೊರನಾಡಿನ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀ ಆದಿಶಕ್ತಾತ್ಮಕ ಅನ್ನಪೂರ್ಣೇಶ್ವರಿ ಲಲಿತ ಕಲಾಮಂಟಪದಲ್ಲಿ ಮಂಗಳವಾರ ಸಂಜೆ ನಡೆದ ಶ್ರೀ ಮಾತೆಗೆ ದೀಪೋತ್ಸವ ಹಾಗೂ ಪ್ರಹಾಂಗಣ ಪಲ್ಲಕ್ಕಿ ಉತ್ಸವ, ಕೋಟಿ ಕುಂಕುಮಾರ್ಚನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಗತ್ತಿನ ವೈಜ್ಞಾನಿಕ ಅವಿಷ್ಕಾರವಿಲ್ಲವೆಂಬ ವಾದದಿಂದ ಹಿಂದೂ ಧರ್ಮ ಹೊರಗಿದೆ. ಕೇಸರಿ ಧರ್ಮದ ವಿಚಾರವೇ ತಿಳಿಯದವರು ಧರ್ಮದ ವೈಚಾರಿಕತೆಯನ್ನು ಇತರರಿಗೆ ಸಾರುವ ಕೆಲಸ ಮಾಡುತ್ತಿರುವುದು ದುರಂತ ಎಂದು ಹೇಳಿದರು.
ತಲೆ ಚುರುಕಾಗಿರಬೇಕು. ಹೆಚ್ಚಿನ ಜ್ಞಾನ ಪಡೆಯಬೇಕು ಎಂದುಕೊಳ್ಳಬೇಕೆಂದರೆ ಸಂಸ್ಕೃತ ಕಲಿಯಬೇಕು. ಮುಂದಿನ ದಿನಗಳಲ್ಲಿ ಕಂಪೂಟರ್ಗಳಲ್ಲೂ ಸಂಸ್ಕೃತ ಜೋಡಣೆಯಾಗಲಿದೆ. ಇದನ್ನು ಕಲಿತರೆ ಸಾವಿರಾರು ವರ್ಷಗಳ ಇತಿಹಾಸವನ್ನು ಸಂಸ್ಕೃತದಲ್ಲಿಯೇ ಮೆಲುಕು ಹಾಕಬಹುದು. ಅದನ್ನು ಅರಿಯಬೇಕಿದೆ. ಇಲ್ಲವಾದರೆ ನಮಗೆ ನಾವು ಚೌಕಟ್ಟು ಹಾಕಿಕೊಂಡಂತಾಗುತ್ತದೆ. ಜಗತ್ತು ಎಲ್ಲಿ ಹುಟ್ಟಿಕೊಳ್ಳುತ್ತದೆ ಅಲ್ಲಿಯೇ ಅಂತ್ಯಗೊಳ್ಳುತ್ತದೆ. ಇದು ಸೃಷ್ಟಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಂಡವರು ಮಾತ್ರ ಶೂನ್ಯ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಅರ್ಹರು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಹೊರನಾಡು ಕ್ಷೇತ್ರದ ಧರ್ಮಕರ್ತ ಜಿ.ಭೀಮೇಶ್ವರ ಜೋಶಿ, ಮನುಷ್ಯನ ಅಂಗಾಗಗಳು ಶುದ್ಧೀಕರಣಗೊಳ್ಳಬೇಕು. ಮನುಷ್ಯ ದೇಹದೊಳಗಿರುವ ಕಣ್ಣುಗಳನ್ನು ತೆರೆಯಲು ಕ್ಷೇತ್ರದಲ್ಲಿ ಶ್ರೀ ಮಾತೆಗೆ ದೀಪೋತ್ಸವ, ಲಕ್ಷ ದುರ್ವಾಚನೆ ಮತ್ತು ಯಕ್ಷಗಾನದ ದಿಗ್ಗಜ ಅಭಿಜಾತ ಕಲಾವಿದ ದಿ| ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಸಂಸ್ಮರಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ವೇಳೆ ಕಳಸದ ಸರ್ಕಾರಿ ಪ್ರರ್ಥಮ ದರ್ಜೆ ಕಾಲೇಜಿಗೆ ಪೀಠೊಪಕರಣಗಳನ್ನು ವಿತರಿಸಲಾಯಿತು. ಶಾಸಕ ಡಿ.ಎನ್.ಜೀವರಾಜ್, ತಾಪಂ ಅಧ್ಯಕ್ಷ ಕೆ.ಸಿ.ರತನ್, ಮಂಗಳೂರಿನ ಯಕ್ಷಗಾನ ವಿಮರ್ಶಕ ಡಾ|ಎಂ.ಪ್ರಭಾಕರ್ ಜೋಶಿ, ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ, ತಾಪಂ ಸದಸ್ಯ ಎಚ್.ವಿ.ರಾಜೇಂದ್ರ ಪ್ರಸಾದ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್