ಕೋವಿಡ್ ವಾರಿಯರ್ಸ್ ಗೆ ಸನ್ಮಾನ
Team Udayavani, May 12, 2020, 7:49 AM IST
ಸಾಂದರ್ಭಿಕ ಚಿತ್ರ
ಮೂಡಿಗೆರೆ: ಇಲ್ಲಿನ ಕಳಸದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಘಟಕವು ಕೋವಿಡ್-19 ಲಾಕ್ಡೌನ್ ಅವಧಿಯಲ್ಲಿ ಸಾರ್ವಜನಿಕ ವಲಯಕ್ಕೆ ಔದಾರ್ಯ ತೋರಿಸಿ ಕಾರ್ಯ ನಿರ್ವಹಣೆ ಮಾಡಿದ ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಗೌರವಿಸಿ ಸನ್ಮಾನಿಸಲಾಯಿತು. ಕೋವಿಡ್ ವೈರಸ್ ಸೋಂಕು ಭೀತಿಯಲ್ಲಿ ಜನರು ಇರುವಾಗ ಭೀತಿಯ ನಡುವೆ ತಮ್ಮ ಜೀವನವನ್ನು ಲೆಕ್ಕಿಸದೆ ಹಗಲಿರುಳು ಶ್ರಮವಹಿಸಿ ಕೆಲಸ ಮಾಡುತ್ತಿರುವ ಈ ಎರಡು ಇಲಾಖೆಗಳ ಸಿಬ್ಬಂದಿ ಅಭಿನಂದನೆಗೆ ಅರ್ಹ. ಲಾಕ್ಡೌನ್ ಅವ ಧಿಯಲ್ಲಿ ಎಲ್ಲರೂ ತಮ್ಮ ಕುಟುಂಬದವರೊಂದಿಗೆ ಮನೆಯಲ್ಲಿದ್ದರೆ, ಇಲಾಖೆಗಳ ಸಿಬ್ಬಂದಿಗಳು ತಮ್ಮ ಜೀವದ ಹಂಗು ತೊರೆದು ಜನತೆಯಲ್ಲಿ ಜಾಗೃತಿ ಮೂಡಿಸಿ ದೇಶದ ರಕ್ಷಣೆಗೆ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ ಎಂದು ಸಂಘಟನೆಯ ಪದಾಧಿಕಾರಿಗಳು ಅಭಿಪ್ರಾಯಪಟ್ಟರು. ಸರ್ಕಲ್ ಇನ್ಸ್ಪೆಕ್ಟರ್ ವಿಜಯಕುಮಾರ್, ಸಬ್ ಇನ್ಸ್ಪೆಕ್ಟರ್ ಮಂಜಯ್ಯ ಸೇರಿದಂತೆ ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಪ್ರಮುಖರಿಗೆ ಸನ್ಮಾನಿಸಲಾಯಿತು. ಸಮಿತಿಯ ಪದಾಧಿಕಾರಿಗಳಾದ ಜನಾರ್ದನ, ಸುಮಂತ್, ಚಂದ್ರು, ಸುದರ್ಶನ್, ರಘುಪತಿ, ಜಾನಕಿ, ಚಂದ್ರು, ಅನಿಲ್ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್