ಮೂರು ತಿಂಗಳ ಬಳಿಕ ಭಕ್ತರ ಸಮ್ಮುಖದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿಗೆ ಮಹಾಮಂಗಳಾರತಿ
Team Udayavani, Jul 5, 2021, 1:32 PM IST
ಚಿಕ್ಕಮಗಳೂರು: ಇಂದಿನಿಂದ ದೇವಸ್ಥಾನಗಳಲ್ಲಿ ಪೂಜಾ ಕಾರ್ಯಗಳಿಗೆ ಅನುಮತಿ ನೀಡಿದ ಕಾರಣ ಸುಮಾರು ಮೂರು ತಿಂಗಳ ಬಳಿಕ ಭಕ್ತರ ಸಮ್ಮುಖದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿಗೆ ಪೂಜೆ ನಡೆಯಿತು.
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿರುವ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಇಂದು ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಮಾಸ್ಕ್, ಸ್ಯಾನಿಟೈಸ್, ಸಾಮಾಜಿಕ ಅಂತರ ಕಾಪಾಡಿಕೊಂಡ ಭಕ್ತರು ಇಂದು ಬೆಳಗಿನ ಪೂಜೆಯಲ್ಲಿ ಪಾಲ್ಗೊಂಡರು.
ಇಂದಿನಿಂದ ದೇವಸ್ಥಾನದಲ್ಲಿ ಪೂಜಾ-ಕೈಂಕರ್ಯ ಆರಂಭವಾಗಲಿದ್ದು, ಭಕ್ತರಿಗೆ ದೇವಿ ದರ್ಶನ, ಮಂಗಳಾರತಿಗಷ್ಟೆ ಅವಕಾಶ ನೀಡಲಾಗಿದೆ. ಪ್ರಸಾದ ಸೇರಿ ಯಾವುದೇ ಸೇವೆಯ ಲಭ್ಯವಿರುವುದಿಲ್ಲ.
ಇದನ್ನೂ ಓದಿ:ಹೆಣ್ಣಿನ ಬಗ್ಗೆ ಹೇಗೆ ಮಾತಾಡಬೇಕು ಅಂತ ಕುಮಾರಸ್ವಾಮಿ ಅರ್ಥಮಾಡಿಕೊಳ್ಳಬೇಕು : ಸುಮಲತಾ
ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮಕರ್ತ ಭೀಮೇಶ್ವರ ಜೋಶಿ ಮಾತನಾಡಿ, ಇಂದಿನಿಂದ ಭಕ್ತರಿಕೆ ದೇವಿಯ ದರ್ಶನಕ್ಕೆ ಮುಕ್ತ ಅವಕಾಶ ನೀಡಲಾಗುತ್ತಿದ್ದು, ಪೂಜೆಯಲ್ಲಿ ಭಕ್ತರು ಭಾಗವಹಿಸಬಹುದು. ದೇವಿ ದರ್ಶನ, ಮಂಗಳಾರತಿಗಷ್ಟೇ ಅವಕಾಶ ನೀಡಲಾಗಿದೆ. ಭಕ್ತರು ಮಾಸ್ಕ್ ಧರಿಸಿ, ಸ್ಯಾನಿಟೈಸ್ ಬಳಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ದೇವಿ ದರ್ಶನ ಪಡೆಯಬೇಕು ಎಂದರು.
ಕ್ಷೇತ್ರಕ್ಕೆ ಬಂದ ಭಕ್ತರು ಬಂದು ಹಸಿವಿನಿಂದ ವಾಪಸ್ಸು ತೆರಳಬಾರದು, ಹಾಗಾಗಿ ಸರ್ಕಾರ ಅನ್ನದಾಸೋಹಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ