Tarikere; ಆಕಸ್ಮಿಕ ಬೆಂಕಿಗೆ ನೂರಾರು ಶ್ರೀಗಂಧದ ಮರಗಳು ಸುಟ್ಟು ಕರಕಲು
Team Udayavani, Feb 23, 2024, 1:03 PM IST
ಚಿಕ್ಕಮಗಳೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ನೂರಾರು ಶ್ರೀಗಂಧದ ಮರಗಳು ಸುಟ್ಟು ಕರಕಲಾಗಿರುವ ಘಟನೆ ತರೀಕೆರೆ ತಾಲೂಕಿನ ಶಿವಪುರ ಸಮೀಪ ನಡೆದಿದೆ.
ಬಿರು ಬೇಸಿಗೆ ಹಿನ್ನೆಲೆಯಲ್ಲಿ ಬದುಗಳಿಗೆ ಹಚ್ಚಿದ ಬೆಂಕಿ ಹತ್ತಾರು ಎಕರೆ ತೋಟಕ್ಕೆ ಆವರಿಸಿ ಲಕ್ಷಾಂತರ ಮೌಲ್ಯದ ಶ್ರೀಗಂಧದ ಮರಗಳು ಸುಟ್ಟು ಕರಕಲಾಗಿವೆ.
ಆಕಸ್ಮಿಕ ಬೆಂಕಿ ತಗುಲಿ ನೂರಾರು ಶ್ರೀಗಂಧದ ಮರಗಳು ತರೀಕೆರೆಯ ಶಿವಪುರ ತೋಟದಲ್ಲಿ ಬೆಂಕಿಗಾಹುತಿಯಾಗಿವೆ. ಖ್ಯಾತ ಶ್ರೀಗಂಧ ಬೆಳೆಗಾರ ವಿಶುಕುಮಾರ್ ತೋಟದಲ್ಲಿ ಈ ಬೆಂಕಿ ಅನಾಹುತ ನಡೆದಿದ್ದು, ಇದೇ ವೇಳೆ ಹನಿ ನೀರಾವರಿಗೆ ಅಳವಡಿಸಿದ್ದ ಪ್ಲಾಸ್ಟಿಕ್ ಪೈಪ್ ಗಳು ಸಹಾ ಬೆಂಕಿಗಾಹುತಿ ಯಾಗಿವೆ.
ಬದುಗಳಿಗೆ ಬೆಂಕಿ ಹಚ್ಚಿದಾಗ ಅದು ಆಕಸ್ಮಿಕವಾಗಿ ತೋಟಕ್ಕೆ ಆವರಿಸಿರುವ ಶಂಕೆ ವ್ಯಕ್ತವಾಗಿದ್ದು, ನೂರಾರು ಮರಗಳು ಸುಟ್ಟು ಕರಕಲಾಗಿ, ಲಕ್ಷಾಂತರ ರೂ. ನಷ್ಟ, ಉಂಟಾಗಿದೆ ಎಂದು ಬೆಳೆಗಾರ ವಿಶುಕುಮಾರ್ ತಿಳಿಸಿದ್ದಾರೆ.
ಘಟನೆ ಸಂಬಂಧ ಅರಣ್ಯ ಇಲಾಖೆಗೆ ದೂರು ಸಹ ನೀಡಲಾಗಿದೆ. ಬೇಸಿಗೆ ಸಮೀಪಿಸುತ್ತಿರುವ ಹೊತ್ತಲ್ಲೇ ಜಿಲ್ಲೆಯಲ್ಲಿ ಅಗ್ನಿ ಅನಾಹುತ ಗಳು ದಿನೆ ದಿನೇ ಹೆಚ್ಚುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ