ನಾನು ಆರ್.ಎಸ್.ಎಸ್ ಸ್ವಯಂ ಸೇವಕ, ಕೊತ್ವಾಲ್ ರಾಮಚಂದ್ರನ ಶಿಷ್ಯ ಅಲ್ಲ: ಸಿ.ಟಿ.ರವಿ
Team Udayavani, Aug 13, 2021, 4:51 PM IST
ಚಿಕ್ಕಮಗಳೂರು: ನಾನು ಹುಕ್ಕಾ ಬಾರಿನ ಬಗ್ಗೆ ಮಾತನಾಡಿದ್ದಕ್ಕೆ ಉರಿ ಹತ್ತಿಕೊಂಡು ಮಾತನಾಡುತ್ತಿದ್ದಾರೆ. ನೆಹರೂ ಹುಕ್ಕಾ ಸೇದುತ್ತಿದ್ದದ್ದು ತಪ್ಪೋ ಅಥವಾ ರವಿ ಹೇಳಿದ್ದು ತಪ್ಪೋ? ರವಿ ಹೇಳಿದ್ದು ತಪ್ಪು ಅನ್ನುವುದಾದರೆ ಅವರಿಗೆ ನೆಹರೂ ಬಗ್ಗೆ ಇನ್ನೆಷ್ಟು ಆಕ್ರೋಶ ಇರಬಹುದು ಎಂದು ಶಾಸಕ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಹರೂ ಹುಕ್ಕಾ ಸೇದುವ ನೂರಾರು ಫೋಟೋಗಳಿವೆ. ನನ್ನ ಮೇಲೆ ಇಷ್ಟು ದ್ವೇಷ ಇದೆ, ಕಾಂಗ್ರೆಸ್ಸಿಗರಿಗೆ ನೆಹರೂ ಬಗ್ಗೆ ಎಷ್ಟು ದ್ವೇಷ ಇರಬಹುದು. ನೆಹರೂ, ಇಂದಿರಾ ಬಗ್ಗೆ ನಾನು ಮಾತನಾಡಿದ್ದು ತಪ್ಪು ಅನ್ನುತ್ತಿದ್ದಾರೆ. ಸಿದ್ದರಾಮಯ್ಯ, ಸಿ.ಎಂ. ಇಬ್ರಾಹಿಂ ಇಂದಿರಾ ಬಗ್ಗೆ ಮಾತನಾಡಿರುವುದಾ ಹಾಕಿಸಬೇಕೆ? ಇಬ್ರಾಹಿಂ ಇಂದಿರಾ ಗಾಂಧಿಯನ್ನ ಏನೆಂದು ಕರೆದಿದ್ದರೂ, ನಾನು ಆ ಮಟ್ಟಕ್ಕೆ ಇಳಿದಿಲ್ಲ ಎಂದರು.
ಇದನ್ನೂ ಓದಿ:ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದೊಳಗಿನ ಒಡಕು ಬಾಯಿಗಳನ್ನು ಮುಚ್ಚಿಸಿ: ಸಿದ್ದರಾಮಯ್ಯ
ನನಗೆ ಕುಡಿಯೋ ಅಭ್ಯಾಸವಿಲ್ಲ, ಆದರೆ ಕುಡುಕನ ಪಟ್ಟ ಕಟ್ಟಿದರು. ಆದರೆ ದಿನಾ ಕುಡಿಯುವವರು ಅವರೇ. ನಾನು ಐದು ಗಂಟೆಗೆ ಎದ್ದು ಯೋಗ ಮಾಡುತ್ತೇನೆ, ಇಡೀ ದಿನ ಸಕ್ರೀಯವಾಗಿರುತ್ತೇನೆ. ಅವರ ಹಳೆಯ ಕಥೆಗಳನ್ನು ಹೇಳಬೇಕೆ? ನಾನು ಆರ್.ಎಸ್.ಎಸ್. ಸ್ವಯಂ ಸೇವಕ, ಕೊತ್ವಾಲ್ ರಾಮಚಂದ್ರನ ಶಿಷ್ಯ ಅಲ್ಲ ಎಂದು ಸಿ.ಟಿ.ರವಿ ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ