ನಾನು ಬಿಜೆಪಿ ಪಕ್ಷದ ಮಾಲೀಕನಲ್ಲ, ಕಾರ್ಯಕರ್ತ: ಸಿ ಟಿ ರವಿ
Team Udayavani, Jul 17, 2021, 3:37 PM IST
ಚಿಕ್ಕಮಗಳೂರು: ನಾನು ಬಿಜೆಪಿ ಪಕ್ಷದ ಮಾಲೀಕನಲ್ಲ, ನಾನು ಪಕ್ಷದ ಕಾರ್ಯಕರ್ತ. ಮಾಲೀಕ ಎನ್ನುವ ಭಾವನೆ ಅವತ್ತು ಇರಲಿಲ್ಲ, ಇಂದೂ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮ ವಿರುದ್ಧ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅಸಮಾಧಾನಗೊಂಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.
ನಾನು ಬಿಜೆಪಿ ಪಕ್ಷದ ಮಾಲೀಕನಲ್ಲ. ಎಂ.ಪಿ ಕುಮಾರಸ್ವಾಮಿ ನಮ್ಮ ಮಾಲೀಕರು. ನಾನು ಸದಾ ಕಾಲ ಪಕ್ಷದ ನಿಷ್ಠೆಯಿಂದ ಕೆಲಸ ಮಾಡುವವನು. ಹಾಗೇ ಏನಾದರೂ ಮಾಲೀಕತ್ವ ಪ್ರಶ್ನೆ ಬಂದರೆ ಕುಮಾರಸ್ವಾಮಿಯೇ ಮಾಲೀಕರು, ನಾನು ಯಾವತ್ತೂ ಸಹ ಮಾಲೀಕನ ರೀತಿ ವರ್ತನೆ ಮಾಡಿಲ್ಲ ಎಂದರು.
ಇದನ್ನೂ ಓದಿ:ಕಾಂಗ್ರೆಸ್ ನವರಿಗೆ ದೂರಲು ಮೋದಿ ಬೇಕು, ಒಳ್ಳೆಯದಾದರೆ ಮೋದಿ ಬೇಡ: ಸಿ.ಟಿ.ರವಿ
ವರ್ಗಾವಣೆ ಆದೇಶವನ್ನು ಮಾಡುವ ಅಧಿಕಾರ ನನಗಿಲ್ಲ. ವರ್ಗಾವಣೆ ಶಿಫಾರಸ್ಸು ಯಾರು ಬಂದರು ಮಾಡುತ್ತೇನೆ. ಒಳ್ಳೆಯ ಅಧಿಕಾರಿಗಳು ನಮ್ಮ ಜಿಲ್ಲೆಗೆ ಬರಬೇಕು ಎನ್ನುವುದಷ್ಟೇ ಉದ್ದೇಶ. ಎಂ.ಪಿ ಕುಮಾರಸ್ವಾಮಿಯವರ ಜೊತೆ ನಾನು ಮಾತನಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ