ರಾಜಕೀಯ ಕಾರಣಕ್ಕೆ ರೌಡಿ ಶೀಟ್ ನಲ್ಲಿ ಸೇರಿಸಿರುವವರ ಬಗ್ಗೆ ಹೇಳಿದ್ದೇನೆ : ಸಿ.ಟಿ.ರವಿ
ಈ ಹಿಂದೆ ನನ್ನನ್ನು ಕುಡುಕ ಎಂದು ಹೇಳಿದ್ದರು...
Team Udayavani, Dec 5, 2022, 2:17 PM IST
ಚಿಕ್ಕಮಗಳೂರು : ಎಲ್ಲಾ ರೌಡಿಶೀಟರ್ ಗಳು ರೌಡಿಗಳಲ್ಲ ಎಂದು ಹೇಳಿದ್ದೆ. ರೌಡಿಶೀಟರ್ ನಲ್ಲಿರೋ ಎಲ್ಲರಿಗೂ ನಾನು ಕ್ಲೀನ್ ಚಿಟ್ ಕೊಟ್ಟಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಮವಾರ ಹೇಳಿಕೆ ನೀಡಿದ್ದಾರೆ.
”ಕಾಂಗ್ರೆಸ್ ಪಕ್ಷದ ಪಕ್ಷದ ಆರ್.ವಿ ದೇವರಾಜ್, ಹರಿಪ್ರಸಾದ್ ಬಗ್ಗೆ ಅವಲೋಕನ ಮಾಡಿಕೊಳ್ಳಲಿ. ಸಾವಿರಾರು ಜನರನ್ನ ರಾಜಕೀಯ ಕಾರಣಕ್ಕೆ ರೌಡಿ ಶೀಟ್ ನಲ್ಲಿ ಸೇರಿಸುತ್ತಾರೆ. ಅವರು ಯಾರೂ ರೌಡಿಗಳಾಗಿರುವುದಿಲ್ಲ, ಅವರ ಬಗ್ಗೆ ಹೇಳಿದ್ದೇನೆ. ವೃತ್ತಿಯನ್ನೇ ಹಫ್ತಾ, ಬೆದರಿಕೆ ಮಾಡಿಕೊಂಡಿರೋರ ಬಗ್ಗೆ ನಾನೆಂದೂ ಕ್ಲೀನ್ಚಿಟ್ ಕೊಡುವುದಿಲ್ಲ. ರಾಜಕೀಯ ಕಾರಣಕ್ಕೆ ರೌಡಿಶೀಟರ್ ಸೇರಿಸಿರುವವರ ಬಗ್ಗೆ ಹೇಳಿದ್ದೇನೆ” ”ಎಂದು ಕಿಡಿ ಕಾರಿದರು.
”ಈ ಹಿಂದೆ ನನ್ನನ್ನು ಕುಡುಕ ಅಂತಾ ಹೇಳಿದ್ದರು.ಕುಡಿದು, ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ ಒಂದು ಉದಾಹರಣೆ ಇದೆಯೇ? ರಾಷ್ಟ್ರೀಯ ಸ್ವಯಂಸೇವಕ ಸಂಘದ ಗರಡಿಯಲ್ಲಿ ಬೆಳೆದವನು ನಾನು. ಇದು ಕಾಂಗ್ರೆಸ್ ನ ಮನಸ್ಥಿತಿಯನ್ನ ತೋರಿಸುತ್ತದೆ. ತಾನು ಕಳ್ಳ. ಪರರ ನಂಬ ಅನ್ನೋ ಮನಸ್ಥಿತಿ ಕಾಂಗ್ರೆಸ್ ನದ್ದು. ಬೆಳಗ್ಗೆ 5 ಗಂಟೆಯಿಂದ ರಾತ್ರಿ 11ಗಂಟೆ ತನಕ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’