ನಾನು ಬಿಜೆಪಿ ಬಿಡಲ್ಲ, ಕಾಂಗ್ರೆಸ್ ಸೇರಲ್ಲ: ಎಂ.ಪಿ.ಕುಮಾರಸ್ವಾಮಿ
Team Udayavani, Sep 14, 2021, 9:00 PM IST
ಮೂಡಿಗೆರೆ: ಬಿಜೆಪಿ ನನಗೆ ತಾಯಿ ಇದ್ದಂತೆ. ಮಗು ಹೇಗೆ ತಾಯಿಯನ್ನು ಬಿಟ್ಟು ಇರಲಾರದೋ ಹಾಗೇ ನಾನೂ ಬಿಜೆಪಿ ಬಿಟ್ಟು ಇರಲಾರೆ. ನಾನು ಪಕ್ಷ ಬಿಟ್ಟು ಕಾಂಗ್ರೆಸ್ ಸೇರುತ್ತೇನೆ ಎಂಬುದೆಲ್ಲ ಬರೀ ವದಂತಿ ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಸೂಕ್ತ ಸ್ಥಾನಮಾನ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದೇನೆಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಬಿಜೆಪಿ ಎನ್ನುವುದು ನನ್ನ ಮಾತೃ ಸಮಾನ. ನಾನು ಬಿಜೆಪಿ ಬಿಟ್ಟು ಇರಲಾರೆ.
ಪಕ್ಷ ಹಾಗೂ ಸಂಘಟನೆಯ ನಡುವೆ ಇರುವುದು ಭಾವನಾತ್ಮಕ ಸಂಬಂಧವೇ ಹೊರತು ತೋರಿಕೆಯ ಪ್ರೀತಿಯಲ್ಲ. ಯಾರೋ ಊಹೆ ಮಾಡಿದ ಮಾತ್ರಕ್ಕೆ ಸುಳ್ಳು ಸತ್ಯವಾಗಲು ಸಾಧ್ಯವಿಲ್ಲ.
ಇದನ್ನೂ ಓದಿ:2022ರ ಅಂತ್ಯದ ವರೆಗೂ ಮಾಸ್ಕ್ ಕಡ್ಡಾಯ! Mask ನಿಂದ ಮುಕ್ತಿ ಪಡೆಯಲು ಒಂದೂವರೆ ವರ್ಷ ಕಾಯಬೇಕು
ಸಹಜವಾಗಿ ಎಲ್ಲರಂತೆ ನನಗೂ ಸಚಿವನಾಗುವ ಆಸೆಯಿತ್ತು. ಆದರೆ ಅದು ಕೈಗೂಡಲಿಲ್ಲ. ಇಷ್ಟಕ್ಕೆ ಪಕ್ಷ ಬಿಡಲಾಗುತ್ತದೆಯೇ? ಪಕ್ಷದಲ್ಲಿ ನನ್ನನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂಬುದು ಕೂಡ ಸತ್ಯಕ್ಕೆ ದೂರವಾದ ಮಾತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ