
ನಾನು ಬಿಜೆಪಿ ಬಿಡಲ್ಲ, ಕಾಂಗ್ರೆಸ್ ಸೇರಲ್ಲ: ಎಂ.ಪಿ.ಕುಮಾರಸ್ವಾಮಿ
Team Udayavani, Sep 14, 2021, 9:00 PM IST

ಮೂಡಿಗೆರೆ: ಬಿಜೆಪಿ ನನಗೆ ತಾಯಿ ಇದ್ದಂತೆ. ಮಗು ಹೇಗೆ ತಾಯಿಯನ್ನು ಬಿಟ್ಟು ಇರಲಾರದೋ ಹಾಗೇ ನಾನೂ ಬಿಜೆಪಿ ಬಿಟ್ಟು ಇರಲಾರೆ. ನಾನು ಪಕ್ಷ ಬಿಟ್ಟು ಕಾಂಗ್ರೆಸ್ ಸೇರುತ್ತೇನೆ ಎಂಬುದೆಲ್ಲ ಬರೀ ವದಂತಿ ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಸೂಕ್ತ ಸ್ಥಾನಮಾನ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದೇನೆಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಬಿಜೆಪಿ ಎನ್ನುವುದು ನನ್ನ ಮಾತೃ ಸಮಾನ. ನಾನು ಬಿಜೆಪಿ ಬಿಟ್ಟು ಇರಲಾರೆ.
ಪಕ್ಷ ಹಾಗೂ ಸಂಘಟನೆಯ ನಡುವೆ ಇರುವುದು ಭಾವನಾತ್ಮಕ ಸಂಬಂಧವೇ ಹೊರತು ತೋರಿಕೆಯ ಪ್ರೀತಿಯಲ್ಲ. ಯಾರೋ ಊಹೆ ಮಾಡಿದ ಮಾತ್ರಕ್ಕೆ ಸುಳ್ಳು ಸತ್ಯವಾಗಲು ಸಾಧ್ಯವಿಲ್ಲ.
ಇದನ್ನೂ ಓದಿ:2022ರ ಅಂತ್ಯದ ವರೆಗೂ ಮಾಸ್ಕ್ ಕಡ್ಡಾಯ! Mask ನಿಂದ ಮುಕ್ತಿ ಪಡೆಯಲು ಒಂದೂವರೆ ವರ್ಷ ಕಾಯಬೇಕು
ಸಹಜವಾಗಿ ಎಲ್ಲರಂತೆ ನನಗೂ ಸಚಿವನಾಗುವ ಆಸೆಯಿತ್ತು. ಆದರೆ ಅದು ಕೈಗೂಡಲಿಲ್ಲ. ಇಷ್ಟಕ್ಕೆ ಪಕ್ಷ ಬಿಡಲಾಗುತ್ತದೆಯೇ? ಪಕ್ಷದಲ್ಲಿ ನನ್ನನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂಬುದು ಕೂಡ ಸತ್ಯಕ್ಕೆ ದೂರವಾದ ಮಾತು ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
