ಕೊಟ್ಟಿಗೆಹಾರ: ಗುಳಿಗ ದೈವದ ನುಡಿಯಂತೆ ಮರದ ಕೆಳಗೆ ಪತ್ತೆಯಾದ ವಿಗ್ರಹ
Team Udayavani, May 10, 2022, 7:41 PM IST
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ನ ಅಲೇಕಾಡು ಇತಿಹಾಸ ಪ್ರಸಿದ್ದ ಗುಳಿಗ ಕ್ಷೇತ್ರದ ಮೂಲ ವಿಗ್ರಹ ಆಲೇಕಾನ್ ಎಸ್ಟೇಟ್ನ ಮರವೊಂದರ ಬುಡದಲ್ಲಿ ಪತ್ತೆಯಾಗಿದೆ.
ಏಪ್ರಿಲ್ 24 ರಂದು ಅಲೇಕಾಡು ಇತಿಹಾಸ ಪ್ರಸಿದ್ದ ಗುಳಿಗ ಕ್ಷೇತ್ರದಲ್ಲಿ ವಾರ್ಷಿಕ ಪೂಜಾ ಮಹೋತ್ಸವ ನಡೆದಿದ್ದು ಈ ಸಂದರ್ಭದಲ್ಲಿ ನಡೆದ ಶ್ರೀ ಗುಳಿಗ ದೈವದ ದರ್ಶತಿದಲ್ಲಿ ಕ್ಷೇತ್ರದಿಂದ ಮರ್ನಾಲ್ಕು ಕಿ.ಮಿ ದೂರದಲ್ಲಿ ಮರವೊಂದರ ಕೆಳಗೆ ವಿಗ್ರಹ ಇದೆ ಎಂದು ತಿಳಿಸಿದ್ದು ಅದರಂತೆ ಗುಳಿಗ ಕ್ಷೇತ್ರ ಸಮಿತಿಯ ಪದಾಧಿಕಾರಿಗಳು ಮರ್ನಾಲ್ಕು ಕಿ.ಮಿ ದೂರದಲ್ಲಿ ಮರವೊಂದರ ಕೆಳಗೆ ಅಗೆದು ನೋಡಿದಾಗ ಗುಳಿಗ ದೈವದ ಕಂಚಿನ ಮೂರ್ತಿ, ಕತ್ತಿ, ಗಂಟೆಗಳು ಮರದ ಕೆಳಗೆ ಪತ್ತೆಯಾಗಿದೆ.
ಇದನ್ನೂ ಓದಿ: ವಿದ್ಯುತ್ ಸ್ಪರ್ಶಗೊಂಡು ಜೂನಿಯರ್ ರವಿಚಂದ್ರನ್ ಖ್ಯಾತಿಯ ಕಲಾವಿದ ಸಾವು
ಈ ಬಗ್ಗೆ ಪತ್ರಿಕೆಗೆ ಪ್ರತಿಕ್ರಿಯಿಸಿರುವ ಅಲೆಕಾಡು ಗುಳಿಗ ಕ್ಷೇತ್ರದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಚನ್ನಕೇಶವ ಎಂ.ಜೆ, ಆಲೇಕಾನ್ನಲ್ಲಿ ಶ್ರೀ ಗುಳಿಗ ದೈವದ ದರ್ಶನದಲ್ಲಿ ಗುಳಿಗ ದೈವದ ನುಡಿಯಂತೆ ಮೂಲ ವಿಗ್ರಹ ಪತ್ತೆಯಾಗಿದ್ದು ವಿಗ್ರಹವನ್ನು ಪ್ರತಿಷ್ಠಾಪಿಸುವ ಬಗ್ಗೆ ಮುಂದಿನ ದೈವ ದರ್ಶನದ ಹೇಳಿಕೆಯಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಬಣಕಲ್ ಗ್ರಾ.ಪಂ ಮಾಜಿ ಅಧ್ಯಕ್ಷ ಸತೀಶ್ ಮತ್ತಿಕಟ್ಟೆ ಮಾತನಾಡಿ ನೂರಾರು ವರ್ಷಗಳ ಇತಿಹಾಸ ಇರುವ ಈ ಕ್ಷೇತ್ರದಲ್ಲಿ ಶ್ರೀ ಚಾಮುಂಡೇಶ್ವರಿ, ಗುಳಿಗ ದೈವ, ಬಬ್ಬುಸ್ವಾಮಿ ಮುಂತಾದ ಪೂಜೆ ವಿಧಿವಿಧಾನಗಳು ಹಿಂದಿನಿಅದಲೂ ವಿಜೃಂಭಣೆಯಿಅದ ನಡೆಯುತ್ತಿದ್ದು ಈಗ ಮೂಲ ವಿಗೃಹ ಸಿಕ್ಕಿರುವುದು ಕ್ಷೇತ್ರದ ಮಹಿಮೆಯನ್ನು ಕಣ್ಮುಂದೆ ತಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ