ಆಧಾರ್ ಕಾರ್ಡ್ ನೋಂದಣಿಯಲ್ಲಿ ಅಕ್ರಮ
Team Udayavani, Jan 19, 2019, 9:14 AM IST
ಶಿವಮೊಗ್ಗ: ಆಧಾರ್ ಕಾರ್ಡ್ ನೋಂದಣಿಯಲ್ಲಿ ಅಕ್ರಮ ಮತ್ತು ನಿಯಮಗಳ ಉಲ್ಲಂಘನೆ ನಡೆಯುತ್ತಿದ್ದು, ಇದನ್ನು ಸರಿಪಡಿಸುವಂತೆ ಅಗ್ರಹಿಸಿ ಎಂದು ಅಣ್ಣಾ ಹಜಾರೆ ಹೋರಾಟ ಸಮಿತಿ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಆಧಾರ್ ಕಾರ್ಡ್ ನೋಂದಣಿಗೆ ಹೊರಗುತ್ತಿಗೆ ಪಡೆದಿರುವ ಏಜೆನ್ಸಿಗಳು ನೋಂದಣಿಗೆ ಬರುವ ಸಾರ್ವಜನಿಕರಿಂದ ಎಲ್ಲಾ ದಾಖಲೆಗಳನ್ನು ಮತ್ತು ಶುಲ್ಕಗಳನ್ನು ಪಡೆದಿದ್ದರೂ ಕಾರ್ಡ್ನ್ನು ಪಡೆಯುವ ವೇಳೆಯಲ್ಲೂ ಶುಲ್ಕ ಪಡೆಯುತ್ತಿವೆ. ಅಲ್ಲದೆ ಅರ್ಜಿ ತಿರಸ್ಕೃತಗೊಂಡಿದೆ ಎಂಬ ಮೌಖೀಕವಾಗಿ ಹೇಳಿ ಮತ್ತೂಮ್ಮೆ ನೋಂದಾಯಿಸಲು ಸೂಚಿಸುತ್ತಾರೆ. ಒಮ್ಮೆ ದಾಖಲಾತಿಗಳನ್ನೂ ನೀಡಿದ್ದರೂ ಮತ್ತೂಮ್ಮೆ ದಾಖಲಾತಿಗಳನ್ನು ಕೇಳುವುದು ನಿಯಮಬಾಹಿರವಾಗಿದೆ ಎಂದು ಆರೋಪಿಸಿದರು.
ಪ್ರತಿ ಬಾರಿಯೂ ನೋಂದಣಿಗೆ ಶುಲ್ಕ ವಸೂಲಿ ಮಾಡುತ್ತಿರುವುದು ಅಕ್ರಮವಾಗಿದೆ. ಅಲ್ಲದೆ ಆಧಾರ್ ನೋಂದಣಿಗೆ ಕೇಂದ್ರ ಸರ್ಕಾರ ರೂಪಿಸಿರುವ ನಿಯಮ-ನಿಬಂಧನೆಗಳನ್ನು ಸಾರ್ವಜನಿಕವಾಗಿ ಪ್ರದರ್ಶನ ಫಲಕದಲ್ಲಿ ಪ್ರಕಟಿಸಿಲ್ಲ. ಇದು ಅಕ್ರಮ ಮತ್ತು ಅಪ್ರಾಮಾಣಿಕತೆಗೆ ಕಾರಣವಾಗಿದೆ. ಜಿಲ್ಲಾಧಿಕಾರಿಗಳು ಈ ಲೋಪವನ್ನು ಸರಿಪಡಿಸಿ ನಾಗರಿಕರಿಗೆ ಅನುಕೂಲ ಮಾಡಿಕೊಡಬೇಕಾಗಿ ಹೋರಾಟ ಸಮಿತಿಯು ಮನವಿಯಲ್ಲಿ ಆಗ್ರಹಿಸಿದೆ.
ಅಲ್ಲದೆ ಗೋಪಿಶೆಟ್ಟಿ ಗ್ರಾಮದ ಸ.ನಂ.95ರ ಕೆರೆಯನ್ನು ಅವೈಜ್ಞಾನಿಕವಾಗಿ ಅಭಿವೃದ್ಧಿಪಡಿಸುವುದನ್ನು ಇದೇ ಸಂದರ್ಭದಲ್ಲಿ ಸಮಿತಿ ವಿರೋಧಿಸಿತು. ಪ್ರಕೃತಿಗೆ ಪೂರಕವಾಗಿ ಕೆರೆ ಅಭಿವೃದ್ಧಿಪಡಿಸಿದೆ. ದುಂದುವೆಚ್ಚ ಮಾಡಲಾಗುತ್ತಿದೆ. ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಬೇಲಿ ಹಾಕಲಾಗುತ್ತಿದೆ ಎಂದರು.
ಪ್ರತಿಭಟನೆಯಲ್ಲಿ ಸಮಿತಿ ಗೌರವಾಧ್ಯಕ್ಷರಾದ ಡಾ| ಎನ್.ಎಲ್. ನಾಯಕ್, ಅಧ್ಯಕ್ಷರಾದ ಡಾ| ಚಿಕ್ಕಸ್ವಾಮಿ, ಪ್ರಧಾನ ಕಾರ್ಯದರ್ಶಿ ಟಿ.ಎಂ. ಅಶೋಕ್ ಯಾದವ್, ಡಾ| ಶೇಖರ್ ಗೌಳೇರ್, ಎಸ್.ವಿ. ವೆಂಕಟನಾರಾಯಣ, ಬಾಬುರಾವ್, ತಿಮ್ಮಣ್ಣ, ಪ್ರೊ| ಚಂದ್ರಶೇಖರ್, ಸಹನಾ ರಾವ್, ಸುಬ್ರಮಣ್ಯ, ಶಿವಕುಮಾರ್ ಕಸೆಟ್ಟಿ, ಟಿ. ದೇವೇಂದ್ರ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…