ಕೋವಿಡ್ ವಾರಿಯರ್ಸ್ಗೆ ಪ್ರೋತ್ಸಾಹಧನ ವಿತರಣೆ
Team Udayavani, Jun 29, 2020, 10:01 AM IST
ಶೃಂಗೇರಿ: ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಕ್ಷಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ನಡೆಯಿತು.
ಡಿಸಿಸಿ ಬ್ಯಾಂಕ್ ಹಾಗೂ ವಿವಿಧ ಸಹಕಾರ ಸಂಘಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಟಿ.ಡಿ ರಾಜೇಗೌಡ, ರಾಜ್ಯದಲ್ಲಿ ಕೋವಿಡ್ ದಾಳಿ ಇನ್ನಷ್ಟು ಉಲ್ಬಣಗೊಳ್ಳುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರೊಂದಿಗೆ ಸಾರ್ವಜನಿಕರೂ ಕೈಜೊಡಿಸಿ, ಅದರ ನಿರ್ಮೂಲನೆಗೆ ಪಣ ತೊಡಬೇಕು. ಜಿಲ್ಲೆಯಲ್ಲಿ 23 ಪ್ರಕರಣಗಳು ಕಾಣಿಸಿಕೊಂಡಿದ್ದು, ಇದರಲ್ಲಿ ಬಹುತೇಕ ರೋಗಿಗಳು ಗುಣಮುಖರಾಗಿದ್ದಾರೆ. ಕ್ಷೇತ್ರದಲ್ಲಿ 4ಲಕ್ಷ ರೂ ವೆಚ್ಚದಷ್ಟು ಸ್ಯಾನಿಟೈಜರ್,ಮಾಸ್ಕ್, ಪಿಪಿಇ ಕಿಟ್ ಹಾಗೂ ಆಹಾರ ಕಿಟ್ಗಳನ್ನು ಬೀದಿ ಬದಿ ವ್ಯಾಪಾರಿಗಳು, ಆಟೋ ಚಾಲಕರು ಹಾಗೂ ಕೂಲಿ ಕಾರ್ಮಿಕರಿಗೆ ವಿತರಿಸಲಾಗಿದೆ. ಈಗಾಗಲೇ 2500 ಮಾಸ್ಕ್ಗಳ ದಾಸ್ತಾನು ಮಾಡಿದ್ದು ಅಗತ್ಯತೆ ಇದ್ದಲ್ಲಿ ಅದನ್ನು ಪೂರೈಸಲಾಗುತ್ತದೆ ಎಂದರು.
ಸರ್ಕಾರ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಬೇಕಿತ್ತು. ಹಿಂದಿನ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕಿತ್ತು. ಕ್ಷೇತ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಶೇ. 100 ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇತ್ತು. ಉತ್ಸಾಹದಿಂದಲೆ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಅವರ ಸುರಕ್ಷತೆಗಾಗಿ ಈಗಾಗಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲಾ ಸಹಕಾರ ಸಂಘದ ಅಧಿಕಾರಿ ವಸಂತಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಕೆ. ದಿನೇಶ್ ಹೆಗ್ಡೆ, ಶಾರದಾ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನರೇಂದ್ರ ಹೆಗ್ಡೆ, ಚೇತನ್ ಹೆಗ್ಡೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ