ಮಾಲಕನ ಮೇಲೆ ದ್ವೇಷ: ಪುತ್ರಿ ಮೇಲೆ ಅತ್ಯಾಚಾರ!
Team Udayavani, Mar 5, 2021, 7:00 AM IST
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ತಂದೆ ಮೇಲಿನ ದ್ವೇಷಕ್ಕೆ ಅಪ್ರಾಪ್ತ ವಯಸ್ಕ ಪುತ್ರಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಮಹೇಶ್ನನ್ನು ಬಂಧಿಸಲಾಗಿದೆ.
ಮಹೇಶ್ ಏಳು ತಿಂಗಳ ಹಿಂದೆ ಬಾಲಕಿಯ ತಂದೆ ಬಳಿ ಹಿಟಾಚಿ ಡ್ರೈವರ್ ಆಗಿದ್ದ. ಆಗ ಮಗಳ ಜತೆ ಮೊಬೈಲ್ನಲ್ಲಿ ಮಾತನಾಡುತ್ತಿರುವುದನ್ನು ಮಾಲಕರು ಮಹೇಶ್ಗೆ ಎಚ್ಚರಿಕೆ ನೀಡಿ ಕೆಲಸದಿಂದ ತೆಗೆದು ಹಾಕಿದ್ದರು. ಇದೇ ಕೋಪದಿಂದ ಫೆ.26ರಂದು ಬಾಲಕಿಯನ್ನು ಮೊಬೈಲ್ ಮೂಲಕ ಸಂಪರ್ಕಿಸಿದ ಆರೋಪಿ, ಆಕೆಯನ್ನು ಕಳಸ ಸಮೀಪದ ಹೋಂ ಸ್ಟೇಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಮನೆಗೆ ಬಂದ ಬಾಲಕಿ ಸಹಜವಾಗಿರದ ಕಾರಣ ಪ್ರಶ್ನಿಸಿದಾಗ ವಿಷಯ ಬಹಿರಂಗವಾಯಿತು. ಕುಡಿಯುವ ನೀರಿನಲ್ಲಿ ಮತ್ತೇರುವ ಪುಡಿ ಬೆರೆಸಿ ಅತ್ಯಾಚಾರವೆಸಗಲಾಗಿದೆ ಎಂದು ಪೋಷಕರು ದೂರು ದಾಖಲಿಸಿದ್ದು, ವೈದ್ಯಕೀಯ ಪರೀಕ್ಷೆ ಬಳಿಕ ಸ್ಪಷ್ಟವಾಗಲಿದೆ ಎಂದು ಎಸ್ಪಿ ಎಂ.ಎಚ್. ಅಕ್ಷಯ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ