ಮೂಡಿಗೆರೆ ಶಾಸಕರ ಮನೆಗೆ ಅಕ್ರಮ ಮರಳು ಸಾಗಾಟ: ಸ್ಥಳೀಯರಿಂದ ಆರೋಪ
Team Udayavani, Sep 28, 2021, 12:42 PM IST
ಚಿಕ್ಕಮಗಳೂರು: ಮೂಡಿಗೆರೆಯ ಶಾಸಕರ ವಿರುದ್ಧ ಅಕ್ರಮ ಮರಳು ಸಾಗಾಟದ ಗಂಭೀರ ಆರೋಪ ಕೇಳಿಬಂದಿದೆ. ನೂತನ ಮನೆ ನಿರ್ಮಾಣಕ್ಕೆ ಅಕ್ರಮ ಮರಳುಗಳನ್ನು ಬಳಸಿದ್ದಾರೆ ಎಂಬ ದೂರು ಸ್ಥಳೀಯರು ಮಾಡುತ್ತಿದ್ದಾರೆ.
ಮೂಡಿಗೆರೆ ಸಮೀಪದ ಕೆಲ್ಲೂರು ಗ್ರಾಮದಲ್ಲಿ ಮೂಡಿಗೆರೆಯ ಶಾಸಕರು ಕೋಟ್ಯಾಂತರ ರೂ. ಬೆಲೆ ಬಾಳುವ ಮನೆ ನಿರ್ಮಾಣ ಮಾಡುತ್ತಿದ್ದಾರೆ. ನಿರ್ಮಾಣ ಕಾರ್ಯಕ್ಕೆ ವಾರದಲ್ಲಿ ಹತ್ತರಿಂದ ಹದಿನೈದು ಲೋಡ್ ಮರಳನ್ನು ಅಕ್ರಮವಾಗಿ ತರಲಾಗುತ್ತದೆ ಎಂಬ ಗಂಭೀರ ಆರೋಪ ಕಾಂಗ್ರೆಸ್ ಮುಖಂದ ಚಂದ್ರು ಓಡೆಯರ್ ಮಾಡಿದ್ದಾರೆ.
ಇದನ್ನೂ ಓದಿ: ಉರಿ ಸೆಕ್ಟರ್ ನಲ್ಲಿ ಪಾಕ್ ಉಗ್ರನ ಬಂಧನ; ಮತ್ತೋರ್ವ ಉಗ್ರನ ಹತ್ಯೆಗೈದ ಸೇನಾಪಡೆ
ತಾಲೂಕಿನ ಉದುಸೆ ಎಂಬಲ್ಲಿ ಮರಳು ಕ್ವಾರೆಯಿದೆ. ಮಳೆಗಾಲದ ಸಮಯ ಆದ್ದರಿಂದ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯವರು ಮರಳು ತೆಗೆಯಲು ನಿರ್ಬಂಧವನ್ನು ವಿಧಿಸಿದ್ದಾರೆ. ಸಮೀಪದ ಮುಗ್ರಹಳ್ಳಿ ಬಳಿ ಕಳ್ಳ ಮಾರ್ಗದಲ್ಲಿ ಮರಳನ್ನು ಕದ್ದು ತರಲಾಗುತ್ತಿದೆ. ಶಾಸಕರ ಮನೆಯ ಕಾರ್ಯಕ್ಕೆ ಮುಗ್ರಿಹಳ್ಳಿಯ ಮರಳನ್ನು ಬಳಸಲಾಗುತ್ತಿದೆ ಎಂದು ದೂರಿದ್ದಾರೆ.
ಮೂಡಿಗೆರೆ ಶಾಸಕರ ಮನೆಗೆ ಕದ್ದು ಮರಳು ಸಾಗಿಸುತ್ತಿರುವುದನ್ನ ಸ್ಥಳೀಯರು ವಿಡಿಯೋ ಮಾಡಿದ್ದಾರೆ. ಅಕ್ರಮವಾಗಿ ಮರಳು ಲೂಟಿ ಮಾಡ್ತಿರೋದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿ ವರ್ಗದವರು ಮಾತ್ರ ಜಾಣ ಮೌನಕ್ಕೆ ಶರಣಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ