ಮೂಡಿಗೆರೆ ಶಾಸಕರ ಮನೆಗೆ ಅಕ್ರಮ ಮರಳು ಸಾಗಾಟ: ಸ್ಥಳೀಯರಿಂದ ಆರೋಪ
Team Udayavani, Sep 28, 2021, 12:42 PM IST
ಚಿಕ್ಕಮಗಳೂರು: ಮೂಡಿಗೆರೆಯ ಶಾಸಕರ ವಿರುದ್ಧ ಅಕ್ರಮ ಮರಳು ಸಾಗಾಟದ ಗಂಭೀರ ಆರೋಪ ಕೇಳಿಬಂದಿದೆ. ನೂತನ ಮನೆ ನಿರ್ಮಾಣಕ್ಕೆ ಅಕ್ರಮ ಮರಳುಗಳನ್ನು ಬಳಸಿದ್ದಾರೆ ಎಂಬ ದೂರು ಸ್ಥಳೀಯರು ಮಾಡುತ್ತಿದ್ದಾರೆ.
ಮೂಡಿಗೆರೆ ಸಮೀಪದ ಕೆಲ್ಲೂರು ಗ್ರಾಮದಲ್ಲಿ ಮೂಡಿಗೆರೆಯ ಶಾಸಕರು ಕೋಟ್ಯಾಂತರ ರೂ. ಬೆಲೆ ಬಾಳುವ ಮನೆ ನಿರ್ಮಾಣ ಮಾಡುತ್ತಿದ್ದಾರೆ. ನಿರ್ಮಾಣ ಕಾರ್ಯಕ್ಕೆ ವಾರದಲ್ಲಿ ಹತ್ತರಿಂದ ಹದಿನೈದು ಲೋಡ್ ಮರಳನ್ನು ಅಕ್ರಮವಾಗಿ ತರಲಾಗುತ್ತದೆ ಎಂಬ ಗಂಭೀರ ಆರೋಪ ಕಾಂಗ್ರೆಸ್ ಮುಖಂದ ಚಂದ್ರು ಓಡೆಯರ್ ಮಾಡಿದ್ದಾರೆ.
ಇದನ್ನೂ ಓದಿ: ಉರಿ ಸೆಕ್ಟರ್ ನಲ್ಲಿ ಪಾಕ್ ಉಗ್ರನ ಬಂಧನ; ಮತ್ತೋರ್ವ ಉಗ್ರನ ಹತ್ಯೆಗೈದ ಸೇನಾಪಡೆ
ತಾಲೂಕಿನ ಉದುಸೆ ಎಂಬಲ್ಲಿ ಮರಳು ಕ್ವಾರೆಯಿದೆ. ಮಳೆಗಾಲದ ಸಮಯ ಆದ್ದರಿಂದ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯವರು ಮರಳು ತೆಗೆಯಲು ನಿರ್ಬಂಧವನ್ನು ವಿಧಿಸಿದ್ದಾರೆ. ಸಮೀಪದ ಮುಗ್ರಹಳ್ಳಿ ಬಳಿ ಕಳ್ಳ ಮಾರ್ಗದಲ್ಲಿ ಮರಳನ್ನು ಕದ್ದು ತರಲಾಗುತ್ತಿದೆ. ಶಾಸಕರ ಮನೆಯ ಕಾರ್ಯಕ್ಕೆ ಮುಗ್ರಿಹಳ್ಳಿಯ ಮರಳನ್ನು ಬಳಸಲಾಗುತ್ತಿದೆ ಎಂದು ದೂರಿದ್ದಾರೆ.
ಮೂಡಿಗೆರೆ ಶಾಸಕರ ಮನೆಗೆ ಕದ್ದು ಮರಳು ಸಾಗಿಸುತ್ತಿರುವುದನ್ನ ಸ್ಥಳೀಯರು ವಿಡಿಯೋ ಮಾಡಿದ್ದಾರೆ. ಅಕ್ರಮವಾಗಿ ಮರಳು ಲೂಟಿ ಮಾಡ್ತಿರೋದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿ ವರ್ಗದವರು ಮಾತ್ರ ಜಾಣ ಮೌನಕ್ಕೆ ಶರಣಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Devaramane; ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು
Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್
420 ನಂಬರ್ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ
Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ
ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ
MUST WATCH
ಹೊಸ ಸೇರ್ಪಡೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು