ರಾಷ್ಟ್ರಧ್ವಜಕ್ಕೆ ಅಪಮಾನ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು
Team Udayavani, Aug 10, 2022, 8:45 PM IST
ಚಿಕ್ಕಮಗಳೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯಲ್ಲಿ ಚಿಕ್ಕಮಾಗರಹಳ್ಳಿಯ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಕೇಸರಿ, ಬಿಳಿ, ಹಸಿರು ಎನ್ನುವ ಬದಲು ಕೆಂಪು, ಬಿಳಿ ಹಸಿರು ಎಂದು ತಪ್ಪಾಗಿ ಹೇಳಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದರು. ಇದೀಗ ಸಿದ್ದರಾಮಯ್ಯ ವಿವಾಧಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿ ಮುಖಂಡ ಗಿರೀಶ್, ಮನು ಹಾಗೂ ಬಜರಂಗದಳದ ಶಿವು ಎಂಬುವರು ದೂರು ನೀಡಿದ್ದಾರೆ.
ಇದನ್ನೂ ಓದಿ:ಕಟಪಾಡಿ: ರಾ. ಹೆದ್ದಾರಿ 66 ರಲ್ಲಿ ಅಪರಿಚಿತ ವಾಹನ ಢಿಕ್ಕಿ: ಸ್ಕೂಟರ್ ಸವಾರ ಸಾವು
ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.