BJP ರಾಜ್ಯದಲ್ಲಿ ಇರೋಲ್ಲ, ವಿಜಯೇಂದ್ರ ಪದಗ್ರಹಣಕ್ಕೆ ಹೋಗ್ತಿಲ್ಲ: ಸಿ.ಟಿ.ರವಿ
ನ್ಯಾಯಾಧೀಶರು ಬದಲಾದರೂ ನ್ಯಾಯ ಪೀಠ ಬದಲಾಗಲ್ಲ
Team Udayavani, Nov 13, 2023, 8:44 PM IST
ಚಿಕ್ಕಮಗಳೂರು: ಮಧ್ಯಪ್ರದೇಶದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಬೇಕಾಗಿರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರು ನ.15ರಂದು ಅಧಿಕಾರ ಸ್ವೀಕಾರ ಮಾಡುತ್ತಿದ್ದಾರೆ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಅವರು ನನಗೆ ಎರಡು ಬಾರಿ ಕರೆ ಮಾಡಿ ಮಾತನಾಡಿದ್ದಾರೆ. ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಆದರೆ ನ.15ಕ್ಕೆ ನಾನು ರಾಜ್ಯದಲ್ಲಿ ಇರುವುದಿಲ್ಲ. ಮಧ್ಯಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಅಲ್ಲಿ ಪ್ರಚಾರಕ್ಕೆ ಹೋಗಬೇಕಿದೆ. ಹೀಗಾಗಿ ಕಾರ್ಯಕ್ರಮಕ್ಕೆ ಬರಲು ಆಗುವುದಿಲ್ಲ ಎಂದು ವಿಜಯೇಂದ್ರ ಅವರಿಗೆ ತಿಳಿಸಿದ್ದೇನೆ ಎಂದರು.
ರಾಜ್ಯಾಧ್ಯಕ್ಷರು ಎನ್ನುವುದು ಒಂದು ಸ್ಥಾನ. ಅದಕ್ಕೆ ಕೊಡಬೇಕಾದ ಗೌರವವನ್ನು ಕೊಟ್ಟೇ ಕೊಡುತ್ತೇವೆ. ನ್ಯಾಯಪೀಠ ಬದಲಾಗಲ್ಲ, ನ್ಯಾಯಾಧೀಶರು ಬದಲಾಗುತ್ತಾರೆ. ನ್ಯಾಯಪೀಠಕ್ಕೆ ಎಲ್ಲರೂ ಗೌರವ ಕೊಡಬೇಕು, ನಾವೂ ಗೌರವ ಕೊಡುತ್ತೇವೆ. ನಾನು ಪಕ್ಷದ ಲಕ್ಷ್ಮಣ ರೇಖೆಯನ್ನು ಎಂದೂ ದಾಟಿಲ್ಲ. 20 ವರ್ಷ ಶಾಸಕನಾಗಿದ್ದೆ. 35 ವರ್ಷ ಕಾರ್ಯಕರ್ತನಾಗಿದ್ದೆ. ಈ ಅವಧಿಯಲ್ಲಿ ಒಮ್ಮೆಯೂ ಪಕ್ಷದ ಲಕ್ಷ್ಮಣ ರೇಖೆಯನ್ನು ಎಂದೂ ದಾಟಿಲ್ಲ. ಜಗಳವಾಡಿದ್ದರೂ ಪಕ್ಷದೊಳಗೆ ಜಗಳ ಆಡಿದ್ದೇವೆ. ಈ ಜಗಳ ನಮ್ಮ ಮನೆಯೊಳಗಿನ ಜಗಳ. ಬೇರೆಯವರ ಮನೆಯಲ್ಲಿ ಕೂತು, ನಮ್ಮ ಮನೆಯ ಸಮಸ್ಯೆ ಬಗೆಹರಿಸಿ ಎಂದು ಯಾವತ್ತೂ ಕೇಳಿಲ್ಲ. ನಮ್ಮ ಮನೆಯ ಸಮಸ್ಯೆಯನ್ನು ಬಗೆಹರಿಸಿ ಎಂದು ಮನೆಯೊಳಗಿದ್ದುಕೊಂಡೇ ಕೇಳ್ಳೋದು. ನಮ್ಮ ನಡುವೆ ಏನೇ ಭಿನ್ನಾಭಿಪ್ರಾಯ ಇದ್ದರೂ ಗುರಿ ಒಂದೇ. ಕೇಂದ್ರದಲ್ಲಿ ಮೋದಿ ಸರ್ಕಾರ ಮತ್ತೆ ಬರಬೇಕು ಎನ್ನುವುದೇ ಆಗಿದೆ ಎಂದರು.
ಬೇರೆ ಪಕ್ಷ ಸೇರುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜಕೀಯ ಬೇಡ ಎಂದು ಅನಿಸಿದರೆ ಬಿಜೆಪಿ ಬಿಟ್ಟು ಇರುತ್ತೇನೆಯೇ ಹೊರತು ಬೇರೆ ಪಕ್ಷ ಸೇರಿ ರಾಜಕೀಯ ಮಾಡುವುದೇ ಇಲ್ಲ. ರಾಜಕೀಯ ಬಿಟ್ಟರೂ ನಾನು ಬೇರೆ ಪಕ್ಷಕ್ಕೆ ಮತ ಕೇಳಲೂ ಆಗುವುದಿಲ್ಲ. ಬಿಜೆಪಿಗೇ ಮತ ಕೇಳಬೇಕು. ಯಾವ ಜವಾಬ್ದಾರಿ ಇಲ್ಲದಿದ್ದರೂ ಶಕ್ತಿ ಮೀರಿ ಮೋದಿಗಾಗಿ ಬಿಜೆಪಿಗೆ ಮತ ಕೇಳುತ್ತೇನೆ ಎಂದ ಅವರು, ನನಗೆ ಅ ಧಿಕಾರ ಕೊಟ್ರೆ ಮಾತ್ರ ಬಿಜೆಪಿ, ಕೊಡದಿದ್ದರೆ ಬಿಜೆಪಿ ಬೇಡ ಎಂದು ನಾನು ಹೇಳಲ್ಲ. ಬಿಜೆಪಿ ಸೇರಿದಾಗಿನಿಂದ ಓಟು ನೀಡಿರುವುದು ಬಿಜೆಪಿಗೆ, ಓಟು ಕೇಳಿರುವುದೂ ಬಿಜೆಪಿಗೇ ಎಂದರು.
ರಾಜ್ಯ ಸುತ್ತಲಿ ಬಿಡಿ..
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ನೀಡಿರುವ ಹೇಳಿಕೆ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ರವಿ, ನಾನು ಎಲ್ಲರ ಹೇಳಿಕೆಗೂ ಪ್ರತಿಕ್ರಿಯೆ ನೀಡುವುದಿಲ್ಲ. ಅವರ ಹೇಳಿಕೆಗೆ ನಾನೇನು ಹೇಳಲು ಆಗುವುದಿಲ್ಲ. ಅದು ಅವರ ಭಾವನೆ, ಅದನ್ನವರು ಹೇಳಿದ್ದಾರೆ. ಅವರು ರಾಜ್ಯ ಸುತ್ತಬಹುದು. ಅವರಿಗೆ ಸಾಮರ್ಥ್ಯ ಇದೆ, ಸುತ್ತಲಿ ಬಿಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ