ಗೋರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದ್ದು ಶ್ಲಾಘನೀಯ
Team Udayavani, Jan 15, 2021, 4:44 PM IST
ಬಾಳೆಹೊನ್ನೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ಸಂತರ ಶತಮಾನಗಳ ಬೇಡಿಕೆಯಾದ ದೇಸಿ ಗೋ ಸಂರಕ್ಷಣೆ ಮತ್ತು ಗೋವುಗಳ ವರ್ಣ ಸಂಕರದ ವಿರುದ್ಧ ಕ್ರಮ ಕೈಗೊಂಡು ಸಂರಕ್ಷಣೆಗೆ ಮುಂದಾಗಿದ್ದು ಸಂತರ ಹೋರಾಟಕ್ಕೆ ಸಂದ ಗೌರವವಾಗಿದೆ ಎಂದು ಉಡುಪಿಯ ಹಂಗಾರಕಟ್ಟೆ ಬಾಳೆಕುದ್ರಿ ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ತಿಳಿಸಿದರು.
ಕೆಮ್ಮಣ್ಣು ಕಾಮಧೇನು ಗೋ ಸೇವಾ ಕೇಂದ್ರಕ್ಕೆ ಮೇವನ್ನು ದಾನವಾಗಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶ ಗತ ವೈಭವಕ್ಕೆ ಮರಳಬೇಕಾದರೆ ಗೋ ಸಮೃದ್ಧಿಯಿಂದ ಮತ್ತು ಕೃಷಿ ಹಾಗೂ ಪರಿಸರದ ನಡುವೆ ಸಮತೋಲನ ಏರ್ಪಟ್ಟಾಗ ಮಾತ್ರ ಸಾಧ್ಯ. ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣವೂ ಸೋಮನಾಥ ದೇವಾಲಯದ ಪುನರ್ ನಿರ್ಮಾಣದಷ್ಟೇ ಮಹತ್ವದ್ದಾಗಿದೆ. ಎಲ್ಲಾ ಭಾರತೀಯರು ಕೈಜೋಡಿಸಿ ರಾಮ ಮಂದಿರ ನಿರ್ಮಾಣದ ಪ್ರಕ್ರಿಯೆಯ ಯಶಸ್ಸಿಗೆ ಕಾರಣರಾಗಬೇಕೆಂದರು. ಕಾಮದೇನು ಗೋ ಸೇವಾ ಕೇಂದ್ರದ ನಾಗೇಶ್ ಆಂಗೀರಸ, ಸುಮಾ ನಾಗೇಶ್, ಲಲಿತಾ ಆಂಗೀರಸ ಇದ್ದರು.
ಇದನ್ನೂ ಓದಿ: ಗಣಿನಾಡಿನಲ್ಲಿ ಸಂಭ್ರಮದ ಸಂಕ್ರಾಂತಿ ಆಚರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ