ಯಾವುದೇ ವೃತ್ತಿಯನ್ನು ಅವಹೇಳನ ಮಾಡುವುದು ಸರಿಯಲ್ಲ: ಸಚಿವ ಸುಧಾಕರ್
Team Udayavani, Apr 10, 2022, 10:15 PM IST
ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೇರಿ ನಾವೆಲ್ಲರೂ ಹೊಟ್ಟೆ ಪಾಡಿಗಾಗಿಯೇ ಕೆಲಸ ಮಾಡುವುದು. ಯಾವುದೇ ವೃತ್ತಿಯನ್ನು ಅವಹೇಳನ ಮಾಡುವುದು ಸರಿಯಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಚಕರು ಹಾಗೂ ನಾವು ಎಲ್ಲರೂ ಹೊಟ್ಟೆಪಾಡಿಗಾಗಿ ಕೆಲಸ ಮಾಡುತ್ತಿರುವುದು. ಬದುಕು ಕಟ್ಟಿಕೊಳ್ಳಲು ಒಂದು ವೃತ್ತಿ ಬೇಕಲ್ಲ. ಆಯಾ ವೃತ್ತಿಯಲ್ಲಿ ಅವರ ಬದುಕಿರುತ್ತದೆ ಎಂದು ಕುಮಾರಸ್ವಾಮಿ ಹೇಳಿಕೆಗೆ ಟಾಂಗ್ ನೀಡಿದರು.
ಅರ್ಚಕರ ವೃತ್ತಿಯಲ್ಲಿ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಕೇಳಿಕೊಳ್ಳುತ್ತಾರೆ. ಅದು ಅವರ ವೃತ್ತಿಯ ವಿಶೇಷ. ಯಾವ ವೃತ್ತಿ ಬಗ್ಗೆಯೂ ಕೇವಲವಾಗಿ ಮಾತನಾಡಬಾರದು. ಅವರು ಮಾಡುವ ಕೆಸಲದಲ್ಲಿ ಅವರದ್ದೇ ಆದ ಗೌರವವಿರುತ್ತದೆ ಎಂದರು.
ನಮ್ಮ ರಾಜ್ಯದ ಜನ ಶಾಂತಿಪ್ರಿಯರು. ಸಾಮರಸ್ಯವನ್ನು ಕದಡುವಂತಹ ಕೆಲಸವನ್ನು ಯಾರೂ ಮಾಡಬಾರದು. ಸಾಮರಸ್ಯ ಕದಡುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಅಲ್ಲದೇ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಧರ್ಮದವರು ಯಾವುದೇ ವೃತ್ತಿ ನಂಬಿ ಬದುಕು ಸಾಗಿಸುವವರ ಮೇಲೆ ಅಕ್ರಮಣ ಮಾಡುವುದು, ಅವರ ಬದುಕು ಹಾಳು ಮಾಡುವಂತಹ ಕೆಲಸವನ್ನು ಯಾರೂ ಮಾಡಬಾರದು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ