ಅಲೆಮಾರಿಗಳ ಸಮಸ್ಯೆಗೆ ಸ್ಪಂದಿಸಲು ಕರೆ
Team Udayavani, Apr 13, 2020, 4:29 PM IST
ಜಗಳೂರು: ಬಿದರಕರೆ ರಸ್ತೆಯ ಪಕ್ಕದಲ್ಲಿ ವಾಸಿಸುವ ಅಲೆಮಾರಿ ಸಮಾಜದವರ ಸಮಸ್ಯೆ ಆಲಿಸಿದ ನ್ಯಾಯಾಧೀಶರಾದ ತಿಮ್ಮಯ್ಯ.
ಜಗಳೂರು: ಕೋವಿಡ್ ವೈರಸ್ ಬಡವ ಶ್ರೀಮಂತನೆಂದು ನೋಡದೆ ಎಲ್ಲರಿಗೂ ಹರಡುತ್ತಿದೆ. ಆದ್ದರಿಂದ ಸ್ವಚ್ಛತೆಗೆ ಮತ್ತು ಮುಂಜಾಗ್ರತ ಕ್ರಮಕ್ಕೆ ಆದ್ಯತೆ ನೀಡಬೇಕು ಎಂದು ಜೆಎಂಎಫ್ ಸಿ ನ್ಯಾಯಾಧೀಶರಾದ ತಿಮ್ಮಯ್ಯ ಅಲೆಮಾರಿ ಸಮಾಜದವರಿಗೆ ಸಲಹೆ ನೀಡಿದರು.
ಪಟ್ಟದ ಅಶ್ವಥ್ ರೆಡ್ಡಿ ನಗರದ ಸಮೀಪ ಸುಮಾರು ವರ್ಷಗಳಿಂದ ಬಿದರಕೆರೆ ರಸ್ತೆಯ ಪಕ್ಕದ ಖಾಸಗಿ ಜಮೀನೊಂದರಲ್ಲಿ ಬಟ್ಟೆ ಗುಡಿಸಲಲ್ಲಿ ಜೀವನ ನಡೆಸುತ್ತಿರುವ ಅಲೆಮಾರಿ ಸಮುದಾಯವಿರುವ ಸ್ಥಳಕ್ಕೆ ಭೇಟಿ ನೀಡಿ ಕೋವಿಡ್ ವೈರಸ್ ಬಗ್ಗೆ ಜಾಗೃತಿ ಮೂಡಿಸಿ ಅವರು ಮಾತನಾಡಿದರು.
ಊಟದ ಸಮಸ್ಯೆ ಇದೆಯೇ ಎಂದು ಪ್ರಶ್ನಿಸಿದ ನ್ಯಾಯಾಧೀಶರು, ಇಲ್ಲ. ಸ್ವಾಮಿ ತಹಶೀಲ್ದಾರ್ ಅವರು ನೀಡಿದ್ದಾರೆ. ಆದರೆ ನಮಗೆ ಸೂರಿನ ವ್ಯವಸ್ಥೆ ಬೇಕು ಎಂದು ಮನವಿ ಮಾಡಿದರು. ಇವರಿಗೆ ನಿವೇಶನದ ವ್ಯವಸ್ಥೆ ಮಾಡಿ ಕೊಡಿ ಎಂದು ತಹಶೀಲ್ದಾರ್ಗೆ ಸೂಚಿಸಿದಾಗ 1 ಎಕರೆ ಜಮೀನು ಇವರಿಗೆ ಮಂಜೂರಾಗಿತ್ತು. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ. ಕೋವಿಡ್ ಮುಗಿದ ತಕ್ಷಣ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ನಂತರ ಸಮಾಜ ಕಲ್ಯಾಣ ಇಲಾಖೆಯ ಮೇಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ತೆರೆಯಲಾಗಿರುವ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕು ಆರೋಗ್ಯಾಧಿಕಾರಿ ನಾಗರಾಜ್, ಧನಂಜಯ್, ನವೀನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು