ಜೀವ ನದಿ ಉಳಿಸಲು ಜೆಡಿಎಸ್‌ ಸನ್ನದ್ಧ

ಜನತಾ ಜಲಧಾರೆ ರಥ ಜಾಥಾಕ್ಕೆ ಚಾಲನೆ ನೀಡಿ ವಿಧಾನ ಪರಿಷತ್‌ ಸದಸ್ಯ ಭೋಜೇಗೌಡ ಹೇಳಿಕೆ

Team Udayavani, Apr 18, 2022, 2:57 PM IST

mudigere

ಮೂಡಿಗೆರೆ: ರಾಜ್ಯದಲ್ಲಿ ಉಗಮವಾಗುವ ಜೀವನದಿಯ ನೀರು ಸರಿಯಾದ ಪ್ರಮಾಣದಲ್ಲಿ ಬಳಕೆಯಾಗದೇ ಇರುವುದರಿಂದ ನೀರಿನ ಅಭಾವ ಸೃಷ್ಟಿಯಾಗಿದೆ. ಇದರಿಂದ ನೀರಾವರಿಗೆ ಇನ್ನಷ್ಟು ತೊಂದರೆಯಾಗಿದೆ. ಹಾಗಾಗಿ ಜೀವನದಿಯನ್ನು ಉಳಿಸಲುವ ಸಲುವಾಗಿ ಜೆಡಿಎಸ್‌ ಸನ್ನದ್ಧವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.

ಶನಿವಾರ ತಾಲೂಕಿನ ಗೋಣಿಬೀಡು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಜೆಡಿಎಸ್‌ ಜನತಾ ಜಲದಾರೆ ರಥ ಜಾಲನೆಗೆ ಪೂಜೆ ನಡೆಸಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ರಾಜ್ಯದ ಜೀವನದಿಗಳಿಂದ ನೀರು ಪೋಲಾಗುತ್ತಿರುವ ಬಗ್ಗೆ ಮನಗಂಡು ನದಿಗಳನ್ನು ಉಳಿಸಿ ರೈತರು ಮಾತ್ರವಲ್ಲ ಎಲ್ಲಾ ಕಾರ್ಯಗಳಿಗೆ ಉಪಯೋಗವಾಗಲು ನದಿಗಳನ್ನು ಉಳಿಸಲು ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ನಡೆಸುತ್ತಿದ್ದಾರೆ. ನಮ್ಮ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮುಂದಿನ ಚುನಾವಣೆಯಲ್ಲಿ 5 ವರ್ಷ ಅವಧಿ ಆಡಳಿತ ನಡೆಸಲು ಜನರು ಅವಕಾಶ ನೀಡಿದರೆ ರಾಜ್ಯದ ಎಲ್ಲಾ ನದಿ ಹಾಗೂ ಉಪ ನದಿಗಳನ್ನು ಉಳಿಸಿ ಹಸಿರು ಕ್ರಾಂತಿ ಮಾಡಲಾಗುವುದು. ಇಲ್ಲವಾದರೆ ಜೆಡಿಎಸ್‌ ಪಕ್ಷವನ್ನೇ ವಿಸರ್ಜಿಸಲಾಗುವುದು ಎಂದು ಹೇಳಿದ್ದಾರೆ. ಅವರು ಮಾತಿಗೆ ತಪ್ಪುವುದಿಲ್ಲ. ಹಾಗಾಗಿ ಮುಂದಿನ ಅವಧಿಯಲ್ಲಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಲು ಜನತೆ ಅವಕಾಶ ಕೊಡಬೇಕೆಂದು ಮನವಿ ಮಾಡಿದರು.

ಮಾಜಿ ಸಚಿವ ಬಿ.ಬಿ. ನಿಂಗಯ್ಯ ಮಾತನಾಡಿ, ರಾಜ್ಯದಲ್ಲಿ 15 ನದಿ ಹಾಗೂ ನೂರಾರು ಉಪನದಿಗಳಿವೆ. ಅವುಗಳಿಂದ ಶೇ.25 ರಷ್ಟು ಮಾತ್ರ ನೀರು ಬಳಕೆಯಾದರೆ, ಶೇ.75ರಷ್ಟು ನೀರು ವ್ಯರ್ಥವಾಗುತ್ತಿದೆ. ನದಿಗಳ ನೀರು ಎಲ್ಲೂ ವ್ಯರ್ಥವಾಗಬಾರದು. ನದಿ ನೀರು ಸಮಸ್ತ ಜನರಿಗೆ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ರಾಜ್ಯಾಧ್ಯಂತ ಜನತಾ ಜಲದಾರೆ ರಥದ ಮೂಲಕ ಜನರಿಗೆ ಅರಿವು ಮೂಡಿಸುವ ಸಲುವಾಗಿ ಇಂದಿನಿಂದ ಪ್ರವಾಸ ಪ್ರಾರಂಭಿಸುತ್ತವೆ ಎಂದು ಮಾಹಿತಿ ನೀಡಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ರಂಜನ್‌ ಅಜಿತ್‌ ಕುಮಾರ್‌, ಕ್ಷೇತ್ರ ಸಮಿತಿ ಅಧ್ಯಕ್ಷ ಡಿ.ಜೆ. ಸುರೇಶ್‌, ಹೋಬಳಿ ಅಧ್ಯಕ್ಷ ಪ್ರಹ್ಲಾದ್‌, ಮುಖಂಡರಾದ ಬಿ.ಎಂ. ತಿಮ್ಮೇಗೌಡ, ಗಬ್ಬಳ್ಳಿ ಚಂದ್ರೇಗೌಡ, ಬಿ.ಎಂ.ಭೈರೇಗೌಡ, ಮಂಡಿ ಜಯರಾಂ ಗೌಡ, ಸುರೇಶ್‌ ಹಂತೂರು, ಪ್ರೇಮ್‌, ದೇವಿಪ್ರಸಾದ್‌, ಮಂಜಪ್ಪ, ರಾಮೇಗೌಡ ವಾಲಕರಟಿ, ಅಶೋಕ್‌ಗೌಡ, ಲೋಹಿತ್‌, ಜ್ಯೋತಿ ವಿಠಲ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.