ಕಾರ್ಮಿಕರಿಗೆ ಸಂಬಳ ನೀಡದ ಆರೋಪ: ಸಹಕಾರ ಸಾರಿಗೆ ಸಂಸ್ಥೆ ಅಧ್ಯಕ್ಷ ಧರ್ಮಪ್ಪ ನ್ಯಾಯಾಂಗ ಬಂಧನ
Team Udayavani, May 30, 2022, 2:52 PM IST
ಚಿಕ್ಕಮಗಳೂರು: ಮಲೆನಾಡಿನ ಪ್ರತಿಷ್ಠಿತ ಸಹಕಾರ ಸಾರಿಗೆ ಸಂಸ್ಥೆ ಅಧ್ಯಕ್ಷ ಈ.ಎಸ್ ಧರ್ಮಪ್ಪ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೊಪ್ಪದ ಜೆ.ಎಂ.ಎಫ್.ಸಿ ನ್ಯಾಯಾಲಯ ಸೋಮವಾರ ಆದೇಶಿಸಿದೆ.
ಕೊಪ್ಪದ ಸಹಕಾರ ಸಾರಿಗೆ ಸಂಸ್ಥೆಯೂ ಕಳೆದ 2 ವರ್ಷದ ಹಿಂದೆ ನಷ್ಟದ ನೆಪವೊಡ್ಡಿ ತನ್ನೆಲ್ಲ ಸೇವೆಗಳನ್ನು ಸ್ಥಗಿತಗೊಳಿಸಿತ್ತು. ಈ ವೇಳೆ ಕಾರ್ಮಿಕರಿಗೆ ಪಿಎಫ್ ಹಣ ಹಾಗೂ ಸಂಬಳವನ್ನು ನೀಡಿರಲಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಕಾರ್ಮಿಕ ಸಂಘಟನೆ ಕೋರ್ಟ್ ನಲ್ಲಿ ದಾವೆಯನ್ನು ಹೂಡಿದ್ದರು.
ಸೋಮವಾರ ಬೆಳಿಗ್ಗೆ ಕೊಪ್ಪ ಪೊಲೀಸರು ಭಂಡಿಗಡಿಯಲ್ಲಿ ಧರ್ಮಪ್ಪರವರನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದರು. ಧರ್ಮಪ್ಪರವರ ಮೇಲಿರುವ ಆರೋಪಗಳನ್ನು ಪರಿಶೀಲಿಸಿರು ಕೋರ್ಟ್ ಜೂ. 10ರ ವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…