ಕಡೂರು ಸಂಪೂರ್ಣ ಬಂದ್‌


Team Udayavani, Mar 25, 2020, 1:14 PM IST

25-March-10

ಕಡೂರು: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ತಾಲೂಕಿನಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿತ್ತು. ಆದರೆ, ಅದಕ್ಕೆ ವಿರುದ್ಧವಾಗಿ ಸೋಮವಾರ ಮಾಮೂಲಿಯಂತೆ ಜನ ಸಂದಣಿ ಹೆಚ್ಚಾಗಿತ್ತು. ಸರಕಾರ ರಾಜ್ಯಾದ್ಯಂತ ಲಾಕ್‌ಡೌನ್‌ ಘೋಷಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಪಟ್ಟಣ ಸಂಪೂರ್ಣ ಜನತಾ ಕರ್ಫ್ಯೂ ವಾತಾವರಣ ಕಂಡುಬಂದಿತು.

ಬುಧವಾರ ನಡೆಯಲಿರುವ ಯುಗಾದಿ ಹಬ್ಬಕ್ಕಾಗಿ ಸೋಮವಾರದ ಸಂತೆಯನ್ನು ತಾಲೂಕು ಆಡಳಿತ ರದ್ದು ಮಾಡಿದ್ದರೂ ಸಹ ಲೆಕ್ಕಿಸದೆ ಜನರು ಕೆಎಲ್‌ವಿ ವೃತ್ತದಲ್ಲಿ ಸಂತೆ ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿತ್ತು. ಪೊಲೀಸ್‌, ಪುರಸಭೆ, ತಾಲೂಕು ಆಡಳಿತ ಜನರನ್ನು ಚದುರಿಸಿ ಬಾಗಿಲು ಹಾಕಿಸಿದರು. ದಿನಸಿ ಕೊಳ್ಳುವವರಿಗೆ ಮಾತ್ರ ಅವಕಾಶ ನೀಡಿ ಮಾರ್ಚ್‌ 31ರ ವರೆಗೆ ಲಾಕ್‌ಡೌನ್‌ ಮಾಡಲು ಪುರಸಭೆ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡಿ, ಮತ್ತೂಮ್ಮೆ ಜನರನ್ನು ಮನೆಯಿಂದ ಹೊರಬಾರದಿರಲು ಮನವಿ ಮಾಡಲಾಯಿತು.

ಮಂಗಳವಾರ ಬೆಳಗ್ಗೆಯಿಂದಲೇ ಪಟ್ಟಣದ ಮುಖ್ಯ ಬೀದಿಗಳು ಮತ್ತು ಬಡಾವಣೆಗಳ ಉಪ ಬೀದಿಗಳು ಸೇರಿದಂತೆ ಎಲ್ಲಾ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಪ್ರಮುಖ ವೃತ್ತಗಳಾದ ಕನಕವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ಕೆಎಲ್‌ವಿ ವೃತ್ತ ಹಾಗೂ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತ ಬಣಗುಡುತ್ತಿದ್ದವು.

ಇಡೀ ಪಟ್ಟಣಕ್ಕೆ ಪಟ್ಟಣವೇ ಸ್ತಬ್ಧವಾಗಿ ಒಂದೆರೆಡು ಬೈಕ್‌ಗಳು ಓಡಾಡುತ್ತಿದ್ದ ದೃಶ್ಯ ಬಿಟ್ಟರೆ ಉಳಿದಂತೆ ಶೂನ್ಯ ಆವರಿಸಿತ್ತು. ರಾಜ್ಯ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣದಲ್ಲಿ ಜನರೇ ಇಲ್ಲದೇ ಸ್ಮಶಾನ ಮೌನ ಆವರಿಸಿತ್ತು. ನಿತ್ಯ 60ಕ್ಕೂ ಹೆಚ್ಚು ರೈಲುಗಳು ಓಡಾಡುವ ರೈಲ್ವೆ ನಿಲ್ದಾಣ ಪ್ರೇತಕಳೆ ಹೊತ್ತು ಮಲಗಿದ್ದಂತೆ ಭಾಸವಾಯಿತು.

ಪೆಟ್ರೋಲ್‌ ಬಂಕ್‌ ಗಳು ತೆರೆದಿದ್ದರೂ ಗ್ರಾಹಕರಿಲ್ಲದೆ ಖಾಲಿ ಹೊಡೆಯುತ್ತಿದ್ದವು. ಔಷಧ ಅಂಗಡಿಗಳು ಇದಕ್ಕೆ ಹೊರತಾಗಿರಲಿಲ್ಲ. ಕೆಲವು ಔಷಧ ಅಂಗಡಿಗಳ ಮಾಲಿಕರು ಜನರಿಲ್ಲದೆ ಬಾಗಿಲು ಹಾಕಿದ್ದರು. ಬಹುತೇಕ ಬ್ಯಾಂಕ್‌ ಗಳು ಮತ್ತು ಎಟಿಎಂಗಳು ತೆರೆದಿದ್ದರೂ ಗ್ರಾಹಕರಿಲ್ಲದೆ ಖಾಲಿ-ಖಾಲಿ ಇದ್ದವು.

ಯುಗಾದಿಯ ಅಮವಾಸ್ಯೆಗೆ ಧಾನ್ಯ ನೀಡುವುದು(ಬ್ರಾಹ್ಮಣರು ಮತ್ತು ಜಂಗ ಮರಿಗೆ) ಪಾರಂಪರಿಕವಾಗಿ ನಡೆದು ಕೊಂಡು ಬಂದಿರುವ ಪದ್ಧತಿಯಾಗಿರುವುದರಿಂದ, ಧಾನ್ಯ ನೀಡುವ ಕಾರ್ಯ ವನ್ನು ಬೆಳಗಿನ ಜಾವದಿಂದ 10 ಗಂಟೆ ವರೆಗೆ ನಡೆಸಿ ಹೊಸ ವರ್ಷದ ಪೂಜಾ ಕೈಂಕರ್ಯ ಮುಗಿಸಿ ಧನ್ಯರಾದರು. ಧಾನ್ಯ ನೀಡುವುದರ ಮೂಲಕ ಯುಗಾದಿ ಹಬ್ಬಕ್ಕೆ ಚಾಲನೆ ನೀಡಲಾಯಿತು.

ತಾಲೂಕಿನಲ್ಲಿರುವ ಎಲ್ಲಾ ಮುಜುರಾಯಿ ಮತ್ತು ಇತರೆ ದೇಗುಲ ಗಳಲ್ಲಿ ಅರ್ಚಕರು, ಸಹಾಯಕ ಅರ್ಚಕರು ಪೂಜೆ ಮಾಡಿ ದೇಗುಲಗಳ ಬಾಗಿಲು ಹಾಕುವಂತೆ ನಿರ್ದೇಶನ ನೀಡಲಾಗಿದೆ. ಭಕ್ತಾ ದಿಗಳು ಯಾವುದೇ ದೇವಾಲಯಕ್ಕೆ ಹೋಗಬಾರದು. ಜಾತ್ರೆ ಮತ್ತಿತರ ಧಾರ್ಮಿಕ ಆಚರಣೆಗಳನ್ನು ನಿಷೇಧಿಸಲಾಗಿದೆ.ಮಾ.31ರ ವರೆಗೆ ಯಾರು ಹೊರಬಾರದಂತೆ ಎಚ್ಚರ ವಹಿಸಬೇಕು. ಯುಗಾದಿ ಹಬ್ಬ ಮನೆಯಲ್ಲಿಯೇ ಆಚರಿಸಿ ಎಲ್ಲರಿಗೂ ಶುಭವಾಗಲಿ ಎಂದು ತಹಶೀಲ್ದಾರ್‌ ಹೇಳಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.