ಕೋವಿಡ್ ನೊಂದಿಗೆ ಬದುಕು ಅನಿವಾರ್ಯ
Team Udayavani, Jul 5, 2020, 6:10 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಡೂರು: ಕೋವಿಡ್ ಜೊತೆಗೆ ಜೀವನ ಶೈಲಿಯನ್ನು ಹೊಂದಾಣಿಕೆ ಮಾಡಿಕೊಂಡು ನಿತ್ಯದ ಕೆಲಸಕಾರ್ಯಗಳಲ್ಲಿ ತೊಡಗುವ ಅನಿವಾರ್ಯತೆ ಬಂದಿದೆ. ಹಾಗಾಗಿ, ಇದಕ್ಕೆ ಹೊಂದಿಕೊಳ್ಳುವುದು ಒಂದೇ ದಾರಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಎಚ್.ತಿಳಿಸಿದರು.
ಜಿಲ್ಲೆಯ ನೂತನ ಎಸ್ಪಿ ಆಗಿರುವ ಅವರು ಶನಿವಾರ ಕಡೂರು ತಾಲೂಕಿನ ವಿವಿಧ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಒಂದು ವಾರದ ಹಿಂದೆ ಅಧಿಕಾರ ಸ್ವೀಕರಿಸಿದ್ದು, ಚಿಕ್ಕಮಗಳೂರು ಜಿಲ್ಲೆಯ ಪ್ರಕೃತಿ, ಸುಂದರ ಪರಿಸರ ಹಾಗೂ ಉತ್ತಮ ಸಂಸ್ಕೃತಿಗಳಲ್ಲಿ ಸಂಪನ್ನವಾಗಿದೆ. ಅದೇ ರೀತಿ, ಯಾವುದೇ ದೊಡ್ಡ ಸಮಸ್ಯೆಗಳಿಲ್ಲ ಎಂಬ ಮಾಹಿತಿ ಇದೆ. ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಅಲ್ಲಿರುವ ಠಾಣೆಗಳ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ವಿವರ ಪಡೆಯುತ್ತಿದ್ದೇನೆ. ಜಿಲ್ಲೆಯ ಅಪರಾಧ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೆ ಮುಕ್ತವಾಗಿ ಸಂಪರ್ಕಿಸಿ ಬಗೆಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶವಿದೆ ಎಂದು ಹೇಳಿದರು.
ಕೋವಿಡ್ ವೈರಸ್ 1-2 ದಿನದ ಲಾಕ್ಡೌನ್ನಿಂದ ಹೋಗಲು ಸಾಧ್ಯವಿಲ್ಲ. ಅದಕ್ಕಾಗಿ ಕೋವಿಡ್ ಜೊತೆಗೇ ಜೀವನ ನಡೆಸಬೇಕಾದ ಮಾರ್ಗಗಳನ್ನು ಹುಡುಕಿಕೊಂಡು ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ ಬಳಕೆ, ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಗುಂಪುಗೂಡದೆ ಅಂತರದಲ್ಲಿರುವುದನ್ನು ತಪ್ಪದೇ ಪಾಲಿಸಬೇಕೆಂದರು.
ಜಿಲ್ಲೆಯಲ್ಲಿನ ನಕ್ಸಲ್ ಚಟುವಟಿಕೆ ಬಗ್ಗೆ ತಿಳಿದುಕೊಂಡಿದ್ದೇನೆ. ಜಿಲ್ಲಾಡಳಿತ ಈಗಾಗಲೇ ಮೂಲಭೂತ ಸೌಲಭ್ಯ ಗಳನ್ನು ನೀಡಿದ್ದು, ಅಂತಹ ಚಟುವಟಿಕೆ ಕಾಣಿಸುತ್ತಿಲ್ಲ. ಆದರೂ ಆ್ಯಂಟಿ ನಕ್ಸಲ್
ತಂಡ ಇದ್ದೇ ಇದೆ. ಅಪರಾಧಗಳು ಕೋವಿಡ್ ಅವಧಿಯಲ್ಲಿ ಕಡಿಮೆಯಾಗಿವೆ. ಜೊತೆಗೆ ಅಪಘಾತಗಳ ಸಂಖ್ಯೆಯೂ ಕ್ಷೀಣಿಸಿದೆ ಎಂದರು. ಪೊಲೀಸ್ ಇಲಾಖೆ ಜನರ ರಕ್ಷಣೆಗಾಗಿ ಇದೆ. ಯಾವುದೇ ಸಂದರ್ಭದಲ್ಲೂ ನಿಮ್ಮ ದೂರುಗಳನ್ನು ಸಮೀಪದ ಠಾಣೆಗೆ ಹೋಗಿ ಸಲ್ಲಿಸ ಬಹುದು. ಆದರೆ ಸಣ್ಣಪುಟ್ಟ ವ್ಯಾಜ್ಯಗಳನ್ನು ನಿಮ್ಮಲ್ಲಿಯೇ ಬಗೆಹರಿಸಿಕೊಂಡರೆ ಉತ್ತಮ ಎಂದರು. ತರೀಕೆರೆ ಡಿವೈಎಸ್ಪಿ ರೇಣುಕ ಪ್ರಸಾದ್, ಕಡೂರು ವೃತ್ತ ನಿರೀಕ್ಷಕ ಮಂಜುನಾಥ್, ಪಿಎಸ್ಐ ವಿಶ್ವನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..