ಕೋವಿಡ್ ನಿಂದ ಜೀವನ ಪಾಠ: ರುದ್ರಮುನಿ ಸ್ವಾಮೀಜಿ


Team Udayavani, May 3, 2020, 5:37 PM IST

Udayavani Kannada Newspaper

ಕಡೂರು: ಮನುಷ್ಯನ ದುರಹಂಕಾರದಿಂದ ಮಾನವೀಯ ಮೌಲ್ಯ ಕಳೆದುಕೊಂಡು ದುರಾಸೆಯಿಂದ ಬದುಕುತ್ತಿದ್ದ ಮನುಷ್ಯ ಕೋವಿಡ್ ನಿಂದ ಜೀವನ ಪಾಠ ಕಲಿಯುತ್ತಿದ್ದಾನೆ ಎಂದು ಬೀರೂರು ರಂಭಾಪುರಿ ಶಾಖಾ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು ಹೇಳಿದರು.

ಅಖೀಲ ಭಾರತ ವೀರಶೈವ ಮಹಾಸಭೆ ತಾಲೂಕು ಘಟಕದ ವತಿಯಿಂದ ಕೆ.ಹೊಸಹಳ್ಳಿಯ ಗಂಗಾಂಬಿಕ ಕಲ್ಯಾಣ ಪಟ್ಟಣದ ಪಕ್ಕದಲ್ಲಿ ಶನಿವಾರ ಆಯೋಜಿಸಿದ್ದ ಆಹಾರ ಪದಾರ್ಥಗಳ ಕಿಟ್‌ ವಿತರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ವಿಶ್ವಕ್ಕೆ ಬಂದಿರುವ ಮಹಾಮಾರಿಯಿಂದ ಇಡೀ ಜಗತ್ತಿನ ಜನರು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಲಾಕ್‌ಡೌನ್‌ನಿಂದ ಅನ್ನ, ಆಹಾರವಿಲ್ಲದೆ ಪರಿತಪಿಸುತ್ತಿದ್ದಾನೆ. ಹಸಿವಿನ ಬೆಲೆ ಗೊತ್ತಾಗುತ್ತಿದೆ. ದುಂದುವೆಚ್ಚಕ್ಕೆ ಕಡಿವಾಣ ಹಾಕಿದ್ದಾನೆ. ಅಟ್ಟಹಾಸದಲ್ಲಿ ಮೆರೆಯುತ್ತಿದ್ದವರು ಕೋವಿಡ್ ನಿಂದ ಜೀವನ ಪಾಠ ಕಲಿತಿದ್ದಾರೆ. ತಂದೆ-ತಾಯಿ, ಗುರು-ಹಿರಿಯರೆಂಬ ಭಾವನೆ ಮೂಡುತ್ತಿದೆ. ಭಾವೈಕ್ಯತೆಯಿಂದ ಬದುಕಬೇಕೆಂದು ಹಂಬಲಿಸುತ್ತಿದ್ದಾನೆ. ನಿಜವಾದ ಜೀವನದ ಪಾಠವನ್ನು ನಾವೆಲ್ಲರು ಕೊರೊನಾದಿಂದ ಕಲಿತಂತಾಗಿದೆ. ಇನ್ನಾದರು ಅಂತರ ಕಾಪಾಡಿಕೊಂಡು ಕೋವಿಡ್ ಓಡಿಸೋಣ ಎಂದರು.

ವೀರಶೈವ ಸಮಾಜವು ನೀಡುತ್ತಿರುವ ಆಹಾರ ಕಿಟ್‌ ಪಡೆದು ಸದುಪಯೋಗ ಪಡಿಸಿಕೊಳ್ಳಿ. ಇದ್ದವರು ಇಲ್ಲದವರಿಗೆ ಸಹಾಯ ಮಾಡಿ ಎಂದರು. ಮಹಾಸಭೆಯ ಜಿಲ್ಲಾಧ್ಯಕ್ಷ ಎಚ್‌. ಎಂ.ಲೋಕೇಶ್‌ ಮಾತನಾಡಿ, ಕೊರೊನಾ ವೈರಸ್‌ ಪ್ರಯುಕ್ತ ಲಾಕ್‌ಡೌನ್‌ ಮಾಡಿರುವುದರಿಂದ ಕೂಲಿ, ಕಾರ್ಮಿಕರು ಮತ್ತು ಬಡ ಮಧ್ಯಮ ವರ್ಗದ ಜನರು ಕಷ್ಟದಲ್ಲಿದ್ದಾರೆ. ಮಹಾಸಭೆ ವತಿಯಿಂದ ಸಮಾಜದ ಹಾಗೂ ಇತರೆ ಸಮಾಜದ ಬಡವರಿಗೆ ಆಹಾರ ಪದಾರ್ಥ ನೀಡಲಾಗುತ್ತಿದೆ. ಸಂಕಷ್ಟದ ಸಮಯದಲ್ಲಿ ಜನರಿಗೆ ನೆರವಾಗುವುದು ಮಹಾಸಭೆಯ ಉದ್ದೇಶ ಎಂದರು.

ಆಹಾರ ಕಿಟ್‌ ವಿತರಿಸಿದ ಯಳನಾಡು ಮಠದ ಜ್ಞಾನಪ್ರಭು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಕೊರೊನಾ ಮಹಾಮಾರಿ ವಿಶ್ವವನ್ನು ಕಂಗೆಡಿಸಿದೆ. ಈ ಸಂದರ್ಭದಲ್ಲಿ ಕಷ್ಟದಲ್ಲಿರುವ ಸಮಾಜದ ಬಡವರಿಗೆ ಸಹಾಯ ಮಾಡುವುದು ಎಲ್ಲರ ಕರ್ತವ್ಯ ಎಂದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್‌.ಎಂ.ರೇಣುಕಾಪ್ರಸಾದ್‌, ತಾಲೂಕು ಘಟಕದ ಅಧ್ಯಕ್ಷ ಗಂಗಾಧರಯ್ಯ, ಎಚ್‌.ಸಿ.ರೇವಣಸಿದ್ದಪ್ಪ,ರಾಷ್ಟ್ರೀಯ ಸಮಿತಿ ಸದಸ್ಯೆ ಪಂಕಜ, ಸದಾಶಿವಪ್ಪ, ಎಚ್‌.ವಿ. ಗಿರೀಶ್‌, ಹಾಲಾರಾಧ್ಯ, ಮುಂಡ್ರೆ ಗಿರೀಶ್‌, ಎಚ್‌.ಎಂ. ಯೋಗೀಶ್‌, ಲಿಂಗ್ಲಾಪುರದ
ಚಂದ್ರಶೇಖರ್‌, ಸಾಣೇಹಳ್ಳಿ ಆರಾಧ್ಯ, ಶಿಕ್ಷಕ ಜಿ.ಎಂ.ಯತೀಶ್‌, ಭಗ್ರೇಶಪ್ಪ, ವಿಶ್ವೇಶ್ವರಯ್ಯ, ಮೆಸ್ಕಾಂ ಮಲ್ಲಿಕಾರ್ಜುನ, ಹುಣಸಘಟ್ಟ ಸನಾತ್‌ಕುಮಾರ್‌, ಸುಣ್ಣದಹಳ್ಳಿ ಶಶಿಧರ್‌, ಎಚ್‌.ಎಲ್‌.ನವೀನ್‌ ಮತ್ತು ಸತೀಶ್‌ ಇದ್ದರು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.