ಕಡೂರು ಕೊಲೆ- ಆತ್ಮಹತ್ಯೆಗೆ ಹೊಸ ಟ್ವಿಸ್ಟ್: ರೇವಂತ್ ಪ್ರಿಯತಮೆ ಬೆಂಗಳೂರಿನಲ್ಲಿ ಆತ್ಮಹತ್ಯೆ
Team Udayavani, Feb 23, 2020, 1:17 PM IST
ಚಿಕ್ಕಮಗಳೂರು: ಜಿಲ್ಲೆಯ ಕಡೂರು ಪಟ್ಟಣದಲ್ಲಿ ದಂತ ವೈದ್ಯ ರೇವಂತ್ ಪತ್ನಿ ಕವಿತಾ ಕೊಲೆ ಪ್ರಕರಣಕ್ಕೆ ಹೊಸ ತಿರುವು ಪಡೆಯುತ್ತಿದೆ.
ಪೊಲೀಸ್ ತನಿಖೆ ನಡೆಯುತ್ತಿರುವಾಗಲೇ ಶನಿವಾರ ಪತಿ ವೈದ್ಯ ಡಾ. ರೇವಂತ್ ಕಡೂರು ಸಮೀಪದ ಬಂಡಿಕೊಪ್ಪಲು ರೈಲ್ವೇ ಗೇಟ್ ಸಮೀಪ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಡಾ. ರೇವಂತ್ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಆತನ ಪ್ರಿಯತಮೆ ಹರ್ಷಿತಾ (32) ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ನಡೆದಿದೆ.
ಡಾ. ರೇವಂತ್ ಆತ್ಮಹತ್ಯೆ ಸುದ್ದಿ ಕೇಳಿ ಪ್ರಿಯತಮೆ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ದಂತವೈದ್ಯ ರೇವಂತ್ ಜೊತೆ ಹರ್ಷಿತ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು ಎಂದು ಹೇಳಲಾಗುತ್ತಿದ್ದು. ಪೊಲೀಸ್ ತನಿಖೆಯಿಂದ ತನ್ನ ಬಣ್ಣ ಬಯಲಾಗುತ್ತದೆ ಎಂದುಹೆದರ ವೈದ್ಯ ಆತ್ಮಹತ್ಯೆ ಗೆ ಶರಣಾಗಿದ್ದರು ಎನ್ನಲಾಗಿದೆ.
ಪ್ರಿಯತಮ ರೇವಂತ್ ಆತ್ಮಹತ್ಯೆ ಸುದ್ದಿ ಹರಡುತ್ತಿದ್ದಂತೆ ಬೆಂಗೂರಿನಲ್ಲಿ ಹರ್ಷಿತ ಆತ್ಮಹತ್ಯೆ ಗೆ ಶರಣಾಗಿದ್ದು, ಇಡೀ ಪ್ರಕರಣ ಮೂವರನ್ನು ಬಲಿಪಡೆದಿದೆ.
ಮಗನ ಸಾವಿನ ಸುದ್ದಿಗೆ ಡಾ. ರೇವಂತ್ ಅವರ ತಾಯಿ ಅಲುಮೇಲಮ್ಮ ಅವರಿಗೆ ನಿನ್ನೆಯೇ ಪ್ರಜ್ಞೆ ತಪ್ಪಿದ್ದು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ