ಕಳಸ: ಬೆಂಕಿ ಹತ್ತಿ ಭದ್ರಾ ನದಿಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ
Team Udayavani, Jul 24, 2023, 12:53 PM IST
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು, ವಿದ್ಯುತ್ ತಂತಿಯೊಂದಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಭದ್ರಾ ನದಿಗೆ ತುಂಡಾಗಿ ಬಿದ್ದ ಘಟನೆ ನಡೆದಿದೆ.
ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಬಳಿ ವಿದ್ಯುತ್ ತಂತಿ ಭದ್ರಾ ನದಿಗೆ ಬಿದ್ದಿದೆ. ಭಾರೀ ಗಾಳಿ-ಮಳೆ ಮಧ್ಯೆ ದುರಸ್ಥಿ ಕೂಡ ಕಷ್ಟವಾದ ಕಾರಣ ಸುತ್ತಲಿನ ಹೊರನಾಡು, ಬಲಿಗೆ, ಸೇರಿದಂತೆ ಹತ್ತಾರು ಹಳ್ಳಿಗಳು ಕತ್ತಲಲ್ಲಿ ಜೀವನ ನಡೆಸಬೇಕಾಗಿದೆ.
ತುಂಬಿದ ಮದಗದ ಕೆರೆ: ಮಾಯದಂತ ಮಳೆಯಿಂದ ತುಂಬುವ ಕೆರೆ ಎಂಬ ಖ್ಯಾತಿಯ ಮದಗದ ಕೆರೆಯಲ್ಲಿ ನೀರು ತುಂಬಿದೆ. 15 ದಿನಗಳ ಹಿಂದೆ ಸಂಪೂರ್ಣ ಖಾಲಿಯಾಗಿದ್ದ 336 ಹೆಕ್ಟೇರ್, 2036 ಎಕರೆ ವಿಸ್ತೀರ್ಣದ ಬೃಹತ್ ಕೆರೆಯಲ್ಲಿ ಈಗ ಅರ್ಧಕ್ಕಿಂತ ಹೆಚ್ಚು ನೀರು ತುಂಬಿದೆ.
ಇದನ್ನೂ ಓದಿ:ಪತ್ನಿ, ಸೋದರಳಿಯನನ್ನು ಗುಂಡಿಕ್ಕಿ, ತಾನೂ ಆತ್ಮಹತ್ಯೆಗೆ ಶರಣಾದ ಹಿರಿಯ ಪೊಲೀಸ್ ಅಧಿಕಾರಿ
ಪಶ್ಷಿಮಘಟ್ಟದ ಸಾಲಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಮದಗದ ಕೆರೆಗೆ ನೀರು ಹರಿದು ಬರುತ್ತಿದೆ. ಈ ಕೆರೆ ತುಂಬಿದರೆ ಕಡೂರು ತಾಲೂಕಿನ ನೀರಿನ ಬವಣೆ ತಪ್ಪಲಿದೆ. ಕೋಡಿ ಬಿದ್ದು ಮಾರಿಕಣಿವೆ ಡ್ಯಾಂಗೆ ನೀರು ಸೇರುತ್ತದೆ. ಕೆರೆ ತಪ್ಪಲಿನ 34 ಹಳ್ಳಿಯ ಜನ-ಜಾನುವಾರುಗಳಿಗೆ ಈ ನೀರೇ ಜೀವಜಲವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ