ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದಿಂದ ಕನ್ನಡ ರಾಜ್ಯೋತ್ಸವ
ನೆಲ ಜಲ ಭಾಷೆಯ ಉಳಿವಿಗೆ ಕಂಕಣಬದ್ದರಾಗೋಣ ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ಅಧ್ಯಕ್ಷ ರಾಮಚಂದ್ರ ಅಭಿಮತ
Team Udayavani, Nov 10, 2021, 5:25 PM IST
ಕೊಟ್ಟಿಗೆಹಾರ:ಕರುನಾಡಿನಲ್ಲಿರುವ ಎಲ್ಲಾ ಭಾಷಿಗರು ಕನ್ನಡದ ನೆಲ ಜಲ ಭಾಷೆಯ ಉಳಿವಿಗೆ ಕಂಕಣಬದ್ದರಾಗೋಣ ಎಂದು ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ಅಧ್ಯಕ್ಷ ರಾಮಚಂದ್ರ ಹೇಳಿದರು.
ಬಣಕಲ್ ಬಾಳೂರು ಹಿರೇಬೈಲ್ನ ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ವತಿಯಿಂದ ಬಣಕಲ್ನಲ್ಲಿ ಬುಧವಾರ ನಡೆದ ೬೬ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಹುತೇಕ ಅನ್ಯಭಾಷಿಕರು ಕನ್ನಡ ನಾಡಿನಲ್ಲಿ ಹುಟ್ಟಿ ಕನ್ನಡಿಗರೇ ಆಗಿ ಹೋಗಿದ್ದಾರೆ. ಕನ್ನಡ ಭಾಷೆಯನ್ನು ನಿತ್ಯ ಬದುಕಿನಲ್ಲಿ ಬಳಸಬೇಕಿದೆ ಎಂದರು.
ಇದನ್ನೂ ಓದಿ:- ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ: ವರ್ಗೀಸ್
ಕಸಾಪ ತಾಲ್ಲೂಕು ಪೂರ್ವಾಧ್ಯಕ್ಷರಾದ ಮಗ್ಗಲಮಕ್ಕಿ ಗಣೇಶ್ ಮಾತನಾಡಿ ಕನ್ನಡ ಭಾಷೆಯ ಸಮೃದ್ದ ಇತಿಹಾಸವನ್ನು ಎಲ್ಲರೂ ಅರಿಯಬೇಕಿದೆ. ಕನ್ನಡ ನಾಡು ನುಡಿಯ ಹಿರಿಮೆಯನ್ನು ಮಕ್ಕಳಿಗೆ ಕಲಿಸಬೇಕಿದೆ ಎಂದರು.
ಬಣಕಲ್ ಗ್ರಾ.ಪಂ ಅಧ್ಯಕ್ಷ ಸತೀಶ್ ಮತ್ತಿಕಟ್ಟೆ ಮಾತನಾಡಿ, ಕನ್ನಡ ತಂತ್ರಜ್ಞಾನ ಸ್ನೇಹಿ ಭಾಷೆಯಾಗಿ ಬೆಳಯಬೇಕು. ಬದಲಾದ ಕಾಲಮಾನದಲ್ಲಿ ಕನ್ನಡ ತಂತ್ರಜ್ಞಾನದ ಭಾಗವಾದಾಗ ಕನ್ನಡ ಭಾಷೆಯ ಉಳಿವು ಸಾಧ್ಯ ಎಂದರು.
ಕನ್ನಡ ಪರ ಹೋರಾಟಗಾರರಾದ ಹೊರಟ್ಟಿ ರಘು ಮಾತನಾಡಿ, ಕರ್ನಾಟಕದಲ್ಲಿರುವ ಅಂಗಡಿ ಮುಂಗಟ್ಟುಗಳು ಸೇರಿದಂತೆ ಎಲ್ಲಾ ನಾಮಫಲಕಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ಕೊಡಬೇಕು. ಕನ್ನಡ ಭಾಷೆ ಕರ್ನಾಟಕದಲ್ಲಿ ಅಗ್ರಸ್ಥಾನದಲ್ಲಿರಬೇಕು ಎಂದು ತಿಳಿಸಿದರು.
ಬಣಕಲ್ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಭಿಲಾಷ್, ಕನ್ನಡ ಜಾನಪದ ಪರಿಷತ್ ತಾಲ್ಲೂಕು ಅಧ್ಯಕ್ಷ ಬಕ್ಕಿ ಮಂಜುನಾಥ್, ಕಸಾಪ ಬಣಕಲ್ ಹೋಬಳಿ ಪೂರ್ವಾಧ್ಯಕ್ಷ ವಸಂತ್ ಹಾರ್ಗೋಡು, ಸಂಘದ ಕಾನೂನು ಸಲಹೆಗಾರರು ಹಾಗೂ ವಕೀಲರಾದ ಪರೀಕ್ಷಿತ್ ಜಾವಳಿ ಮಾತನಾಡಿದರು.
ಬಣಕಲ್ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಭಿಲಾಷ್ ಅವರನ್ನು ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಮೌನಾಚರಣೆ ಮಾಡುವ ಮೂಲಕ ನಟ ಪುನೀತ್ ರಾಜಕುಮಾರ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕ ಭಕ್ತೇಶ್, ಸಾಹಿತಿಗಳಾದ ಹೆಸಗಲ್ ವೆಂಕಟೇಶ್, ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ಬಣಕಲ್ ಬಾಳೂರು ಹಿರೇಬೈಲ್ ಭಾಗದ ಪಧಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
MUST WATCH
ಹೊಸ ಸೇರ್ಪಡೆ
ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್ ಇದ್ದಂತೆ…
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ