ಕೆರೆಗಳು ಹಳ್ಳಿಗಳ ಜೀವನಾಡಿ


Team Udayavani, Sep 7, 2020, 5:34 PM IST

ಕೆರೆಗಳು ಹಳ್ಳಿಗಳ ಜೀವನಾಡಿ

ಚಿಕ್ಕಮಗಳೂರು: ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು ಜನತೆಯು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಮಾಜಮುಖೀಯಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದು ಸಮಾಜಕ್ಕೆ ಬಹು ದೊಡ್ಡ ಕೊಡುಗೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದರು.

ಶನಿವಾರ ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ದೊಡ್ಡಕೆರೆ ಬಳಕೆದರರ ಸಂಘದ ಸಹಭಾಗಿತ್ವದಲ್ಲಿ ಕರ್ನಾಟಕ ಕೆರೆ ಸಂಜೀವಿನಿ ಕಾರ್ಯಕ್ರಮದಡಿ ಕರ್ತಿಕೆರೆ ದೊಡ್ಡಕೆರೆ ಹಸ್ತಾಂತರಿಸಿ ಅವರು ಮಾತನಾಡಿದರು.

ಕೆರೆಗಳು ಹಳ್ಳಿಗಳ ಜೀವನಾಡಿಯಾಗಿದ್ದು, ಕೆರೆ ತುಂಬಿದ್ದಲ್ಲಿ ಇಡೀ ಊರೇ ಸಂಪದ್ಭರಿತವಾಗಲಿದೆ ಎಂಬ ಮಾತಿನಂತೆಗ್ರಾಮೀಣ ಭಾಗದ ಕೆರೆಗಳು ಹೆಚ್ಚು ಮಹತ್ವ ಪಡೆದಿವೆ. ರಾಜ್ಯದಲ್ಲಿ ಬರಡು ಪ್ರದೇಶಗಳಲ್ಲಿ ಕೆರೆಗಳನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಕೆರೆಗಳ ಸಮರ್ಪಕ ನಿರ್ವಹಣೆಗಾಗಿ ನೂತನವಾಗಿ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ನೂತನ ಪ್ರಾ ಧಿಕಾರವನ್ನು ರಚಿಸಲಾಗಿದೆ. ಇದರ ಮೂಲಕ ಕೆರೆಗಳನ್ನು ಅಭಿವೃದ್ಧಿಪಡಿಸುವ ಸಂಜೀವಿನಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದ ಅವರು, ರಾಜ್ಯಾದ್ಯಂತ ಸುಮಾರು 146 ಕೆರೆಗಳಲ್ಲಿ ಕೆರೆ ಬಳಕೆದಾರರ ಸಂಘವನ್ನು ರಚಿಸಿ ಕೆರೆಗಳ ಹೂಳೆತ್ತಿ ಪುನಶ್ಚೇತನ ಗೊಳಿಸಲಾಗುತ್ತಿದ್ದು, ಅದರಂತೆ ಜಿಲ್ಲೆಯ ಕರ್ತಿಕೆರೆ ದೊಡ್ಡಕೆರೆ ನಿರ್ವಹಣೆಯನ್ನು ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಗೆ ಹಸ್ತಾಂತರಿಸಲಾಗಿದೆ ಎಂದರು.

ಸಂರಕ್ಷಣಾ ಯೋಜನೆಯಡಿ ಪುರಾತನ ದೇವಾಲಯಗಳ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಧರ್ಮೋತ್ಥಾನ ಟ್ರಸ್ಟ್‌ಗೆ ರೂ. 10 ಕೋಟಿ ಬಿಡುಗಡೆ ಮಾಡಲಾಗಿದ್ದು,ಈ ಮೂಲಕ ಪುರಾತತ್ವ ಇಲಾಖೆಗೆ ಸೇರಿದ ಹಳೇ ದೇವಾಲಯಗಳು, ಕಲ್ಯಾಣಿಗಳು, ಗೋಪುರಗಳನ್ನು ಸಂರಕ್ಷಿಸಲು ಯೋಜನೆ ರೂಪಿಸಲಾಗಿದೆ. ಜಿಲ್ಲೆಯಲ್ಲಿ ಕಳಸಾಪುರ  ಕಳಸೇಶ್ವರ, ಮುತ್ತಿನಪುರದ ವಿರೂಪಾಕ್ಷೇಶ್ವರ, ಚೆನ್ನಕೇಶ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳ ಜೀರ್ಣೋದ್ಧಾರ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ವಿಧಾನ ಪರಿಷತ್‌ ಶಾಸಕ ಎಸ್‌.ಎಲ್‌. ಭೋಜೇಗೌಡ, ಜಿಪಂ ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ತಾಪಂ ಅಧ್ಯಕ್ಷೆ ಶುಭಾ ಸತ್ಯಮೂರ್ತಿ, ಜಿಪಂ ಉಪಾಧ್ಯಕ್ಷ ಬಿ.ಜಿ. ಸೋಮಶೇಖರಪ್ಪ, ಜಿಪಂ ಸದಸ್ಯರಾದ ಜೆಸಿಂತಾ ಅನಿಲ್‌ಕುಮಾರ್‌, ಕವಿತಾ ಲಿಂಗರಾಜ್‌, ತಾಪಂ ಉಪಾಧ್ಯಕ್ಷೆ ಶಾರದಾ ಶಶಿಧರ್‌, ತಾಪಂ ಸದಸ್ಯ ಜಯಣ್ಣ, ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿಯ ಪ್ರಾದೇಶಿಕ ನಿರ್ದೇಶಕ ಶ್ರೀಹರಿ, ದೊಡ್ಡಕೆರೆ ಬಳಕೆದಾರರ ಸಂಘದ ಅಧ್ಯಕ್ಷ ಆನಂದ್‌ ರಾಜ್‌ ಅರಸ್‌ ಇದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ

1-sadasd

July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.