ಮಣಿಪಾಲ ಆರೋಗ್ಯ ಕಾರ್ಡ್ ಸದ್ಬಳಕೆಗೆ ಕರೆ
Team Udayavani, Jul 5, 2020, 5:33 PM IST
ಕೊಪ್ಪ:ಮಣಿಪಾಲ್ ಆರೋಗ್ಯ ಕಾರ್ಡ್ ವಿತರಿಸಲಾಯಿತು.
ಕೊಪ್ಪ: ಕಡಿಮೆ ವೆಚ್ಚದಲ್ಲಿ ಆರೋಗ್ಯ ಸೇವೆ ನೀಡಲು ಮಣಿಪಾಲ ಆರೋಗ್ಯ ಕಾರ್ಡ್ ಸೌಲಭ್ಯವನ್ನು 19 ವರ್ಷಗಳಿಂದ ಒದಗಿಸಲಾಗುತ್ತಿದೆ. ಈ ವರ್ಷ ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿ ಮತ್ತು ವಿತರಣೆಗೆ ಚಾಲನೆ ನೀಡಲಾಗಿದ್ದು, ಸದ್ಬಳಕೆ ಮಾಡಿ ಕೊಳ್ಳಬೇಕೆಂದು ಮಣಿಪಾಲ ಕಸ್ತೂರಿಬಾ ಆಸ್ಪತ್ರೆ ಉಪ ವ್ಯವಸ್ಥಾಪಕ ಮೋಹನ ಶೆಟ್ಟಿ ಹೇಳಿದರು.
ಪಟ್ಟಣದಲ್ಲಿ ಗಾಯತ್ರಿ ಸಹಕಾರಿ ಸೌಹಾರ್ದ ಸೊಸೈಟಿ ಸಭಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಡ್ಗೆ ನೋಂದಾಯಿಸಿದ ವರ್ಷದ ಅವಧಿಯಲ್ಲಿ ಎಷ್ಟು ಬಾರಿಯಾದರೂ ಉಪಯೋಗಿಸಬಹುದು. ವೈದ್ಯರ ಸಮಾಲೋಚನೆಗೆ ಶೇ.50 ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಗೆ ಶೇ.30, ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಗೆ ಸಲಕರಣೆ ಹೊರತುಪಡಿಸಿ ಶೇ. 25, ಸಿ.ಟಿ, ಎಂ.ಆರ್.ಐ, ಅಲ್ಟ್ರಾಸೌಂಡ್ ತಪಾಸಣೆಗೆ ಶೇ. 20, ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಗೆ ಶೇ. 20, ಔಷಧ ಖರೀದಿಗೆ ಶೇ.
12 ರಿಯಾಯಿತಿ ನೀಡಲಾಗಿದೆ ಎಂದರು.
ಕೊಪ್ಪದಲ್ಲಿ ಮಾಹಿತಿಗಾಗಿ 9449340738, 9449455380, 9481622625 ಸಂಪರ್ಕಿಸಬಹುದು ಎಂದರು. ಗಾಯತ್ರಿ ಸಹಕಾರಿ ಸೌಹಾರ್ದ ಸೊಸೈಟಿ ಅಧ್ಯಕ್ಷ ವಿಶ್ವನಾಥ್, ಯಡಗೆರೆ ಸೌಹಾರ್ದ ಸೊಸೈಟಿ ಸಿಇಒ ಸುಧೀರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್