ಭಾರತಿಬೈಲ್‌ನಲ್ಲಿ 50 ಕ್ಕೂ ಹೆಚ್ಚು ಮಂದಿಗೆ ಹೊಟ್ಟೆ ನೋವು-ಬೇಧಿ

ಗ್ರಾಮಕ್ಕೆ ತಾಲೂಕು ವೈದ್ಯಾ ಧಿಕಾರಿಗಳ ಭೇಟಿ „5 ಸಾವಿರ ಹಾಲೋಜಿನ್‌ ಮಾತ್ರೆಗಳ ವಿತರಣೆ „ಗ್ರಾಮದ ಕುಡಿಯುವ ನೀರಿನ ಮಾದರಿ ಲ್ಯಾಬಿಗೆ ರವಾನೆ

Team Udayavani, Apr 29, 2020, 1:03 PM IST

29-April-10

ಕೊಟ್ಟಿಗೆಹಾರ: ಭಾರತಿಬೈಲ್‌ ಗ್ರಾಮದಲ್ಲಿ ಹೊಟ್ಟೆನೋವಿನಿಂದ ಬಳಲುತ್ತಿರುವ ಗ್ರಾಮಸ್ಥರ ಮನೆಗಳಿಗೆ ತಾಲೂಕು ವೈದ್ಯಾಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದರು.

ಕೊಟ್ಟಿಗೆಹಾರ: ಬಿ. ಹೊಸಳ್ಳಿ ಗ್ರಾಪಂ ವ್ಯಾಪ್ತಿಯ ಭಾರತಿಬೈಲ್‌ ಗ್ರಾಮದಲ್ಲಿ 50 ಕ್ಕೂ ಹೆಚ್ಚು ಮಂದಿಗೆ ಹೊಟ್ಟೆನೋವು, ಬೇಧಿ ಕಾಣಿಸಿಕೊಂಡಿದ್ದು ಸ್ಥಳಕ್ಕೆ ತಾಲೂಕು ವೈದ್ಯಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿತು.

ಕಳೆದ ಮೂರು ದಿನಗಳಿಂದ ಗ್ರಾಮದ ಕೆಲವರಿಗೆ ಹೊಟ್ಟೆನೋವು, ಬೇಧಿ ಕಾಣಿಸಿಕೊಂಡಿದ್ದು ಮಂಗಳವಾರ ಗ್ರಾಮದಲ್ಲಿ ಹಲವರಿಗೆ ಹೊಟ್ಟೆನೋವು, ಬೇಧಿ ಕಾಣಿಸಿಕೊಂಡಿರುವುದು ಗಮನಕ್ಕೆ ಬಂದಿದೆ. ಮಂಗಳವಾರದವರೆಗೆ ಭಾರತಿಬೈಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಕ್ಕೂ ಹೆಚ್ಚು ಮಂದಿ ಹೊಟ್ಟೆನೋವು ಮತ್ತು ಬೇಧಿಗೆ ಚಿಕಿತ್ಸೆ ಪಡೆದಿದ್ದಾರೆ. ಗ್ರಾಮದಲ್ಲಿ ಯಾವ ಕಾರಣದಿಂದ ಏಕಕಾಲದಲ್ಲಿ ಹಲವರಿಗೆ ಹೊಟ್ಟೆನೋವು, ಬೇಧಿ ಕಾಣಿಸಿಕೊಂಡಿದೆ ಎಂಬುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಡಿಯುವ ನೀರಿನಿಂದ ಈ ರೀತಿ ಆಗಿರಬಹುದು ಎಂದು ವೈದ್ಯಾಧಿ ಕಾರಿಗಳು ಅನುಮಾನಿಸಿದ್ದು ಪ್ರಯೋಗಾಲಯಕ್ಕೆ ಕುಡಿಯುವ ನೀರಿನ ಮಾದರಿಯನ್ನು ಕಳಿಸಿದ್ದು ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ.

ಭಾರತಿಬೈಲಿನ ಕುಡಿಯುವ ನೀರಿನ ಟ್ಯಾಂಕ್‌, ಹೊಟ್ಟೆನೋವು ಮತ್ತು ಬೇಧಿಯಿಂದ ಬಳಲುತ್ತಿರುವವರ ಮನೆಗಳಿಗೆ ತಾಲೂಕು ಆರೋಗ್ಯಾಧಿಕಾರಿ ಸುಂದರೇಶ್‌, ವೈದ್ಯಾಧಿಕಾರಿ ಮಧುಸೂಧನ್‌, ಬಿ. ಹೊಸಳ್ಳಿ ಗ್ರಾಪಂ ಅಧ್ಯಕ್ಷ ರವಿಗೌಡ ಭೇಟಿ ನೀಡಿ ಮಾಹಿತಿ ಪಡೆದರು. ವೈದ್ಯಾಧಿಕಾರಿ ಮಧುಸೂಧನ್‌ ಮಾತನಾಡಿ, ಗ್ರಾಮ ವ್ಯಾಪ್ತಿಯ ಕುಡಿಯುವ ನೀರಿನ ಟ್ಯಾಂಕನ್ನು
ವಾರಕ್ಕೆ 2 ಬಾರಿ ಬ್ಲೀಚಿಂಗ್‌ ಪೌಡರ್‌ ಹಾಕಿ ಸ್ವತ್ಛಗೊಳಿಸಲು ಸೂಚಿಸಲಾಗಿದೆ. ಕುಡಿಯುವ ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ವರದಿ ಬರಲು 36 ಗಂಟೆ ಬೇಕಾಗಿದೆ. ಮೇಲ್ನೋಟಕ್ಕೆ ಈ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬುದು ಕಂಡು ಬಂದಿದ್ದು ವರದಿಯ ನಂತರ ಸತ್ಯಾಂಶ ಹೊರಬರಲಿದೆ ಎಂದರು.

ಗ್ರಾಮದ ಸುಮಾರು 250 ಮನೆಗಳಿಗೆ 5 ಸಾವಿರ ಹಾಲೋಜಿನ್‌ ಮಾತ್ರೆಗಳನ್ನು ವಿತರಿಸಲಾಗಿದ್ದು ಈ ಮಾತ್ರೆಗಳನ್ನು 20 ಲೀಟರ್‌ ನೀರಿಗೆ 1 ಮಾತ್ರೆಯನ್ನು ಹಾಕಿ ಸೇವಿಸಬೇಕು ಎಂದರು. ಗ್ರಾಮಸ್ಥ ಶಿವಪ್ರಸಾದ್‌ ಮಾತನಾಡಿ, ಮಂಗಳವಾರದಿಂದ ನನಗೆ ಹೊಟ್ಟೆನೋವು ಪ್ರಾರಂಭವಾಗಿದೆ. ಭಾರತಿಬೈಲ್‌ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದಿದ್ದೇನೆ. ನಮ್ಮ ಮನೆಯಲ್ಲಿ ಕಾಯಿಸಿ ಆರಿಸಿದ ನೀರನ್ನೇ ಬಳಸುತ್ತೇವೆ. ಗ್ರಾಮದಲ್ಲಿ ಹೊಟ್ಟೆನೋವು, ಬೇಧಿ ಹಲವರಿಗೆ ಕಾಣಿಸಿಕೊಂಡಿದೆ ಎಂದರು. ಬಿ. ಹೊಸಳ್ಳಿ ಗ್ರಾಪಂ ಅಧ್ಯಕ್ಷ ರವಿಗೌಡ, ಪಿಡಿಒ ಸಮಿವುಲ್ಲಾ ಶರೀಫ್‌, ಕಿರಿಯ ಪುರುಷ ಆರೋಗ್ಯ ಸಹಾಯಕ ದಿನೇಶ್‌, ಶುಶೂಶ್ರಕಿ ಹರಿಣಾಕ್ಷಿ, ಪ್ರಮೀಳಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.